ನಾಟಕಕ್ಕೆ ತೆರೆ; ದೆಹಲಿ ಗದ್ದುಗೆ ಯಾರ ಮಡಿಲಿಗೆ?
ದೆಹಲಿಯಲ್ಲಿ ಸರ್ಕಾರ ರಚನೆ ಸಂಬಂಧ ಅನೇಕ ತಿಂಗಳುಗಳಿಂದ ನಡೆಯುತ್ತಿದ್ದ ನಾಟಕಕ್ಕೆ ತೆರೆಬಿದ್ದಿದೆ. ದೆಹಲಿ ವಿಧಾನಸಭೆ ವಿಸರ್ಜಿಸಬೇಕು ಹಾಗೂ ಚುನಾವಣೆ ನಡೆಸಬೇಕೆಂದು ಕೇಂದ್ರ ಸಚಿವ ಸಂಪುಟದಿಂದ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಶಿಫಾರಸ್ಸು ಬಂದಿರುವ ಹಿನ್ನೆಲೆಯಲ್ಲಿ ಮತ್ತೆ ಚುನಾವಣೆ ನಡೆಯುವುದು ಖಚಿತವಾಗಿದೆ.
ಅಸ್ತಿತ್ವಕ್ಕಾಗಿ ಆಪ್ ಹೋರಾಟ: ದಿಲ್ಲಿಯಲ್ಲಿ ಅನಿರೀಕ್ಷಿತವಾಗಿ ಅಧಿಕಾರಕ್ಕೆ ಬಂದು, ಅಧಿಕಾರವನ್ನೂ ಹಿಡಿದಿದ್ದ ಆಮ್ ಆದ್ಮಿ ಪಕ್ಷ ನಂತರ ರಾಜಕೀಯ ತಂತ್ರಗಾರಿಕೆ ಹಾಗೂ ನಾಯಕತ್ವ ಕೊರತೆಯಿಂದ ಸವಾಲುಗಳನ್ನು ಎದುರಿಸುವಲ್ಲಿ ವಿಫಲವಾಯಿತು. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅಧಿಕಾರಕ್ಕಾಗಿ ಕಚ್ಚಾಟ ಆರಂಭವಾಗಿದ್ದಲ್ಲದೆ, ಸರ್ಕಾರವೇ ಪ್ರತಿಭಟನೆಗಿಳಿದಿದ್ದು ಅಪಹಾಸ್ಯಕ್ಕೀಡಾಯಿತು. ಸರ್ಕಾರ ಹಾಗೂ ಪೊಲೀಸರ ಮಧ್ಯೆ ಸಂಘರ್ಷ ಉಂಟಾಗಿ ಜನರು ಗೊಂದಲಕ್ಕೀಡಾದರು. ಅಪಾರ ನಿರೀಕ್ಷೆ ಹುಟ್ಟಿಸಿದ್ದ ಸರ್ಕಾರ ಕೇವಲ 49 ದಿನಗಳಲ್ಲಿ ಅಧಿಕಾರದಿಂದ ಕೆಳಕ್ಕಿಳಿಯಿತು. ಮುಂದೆ ಲೋಕಸಭೆ ಚುನಾವಣೆ ಆಸೆಯೂ ಕೈಗೂಡಲಿಲ್ಲ.

ನರೇಂದ್ರ ಮೋದಿ ಎದುರು ಹೀನಾಯ ಸೋಲನುಭವಿಸಿದ ನಂತರ ದೆಹಲಿಯಲ್ಲಿ ಮತ್ತೆ ಸರ್ಕಾರ ರಚಿಸಲು ನಡೆಸಿದ ಯತ್ನ ಕೊನೆಗೂಡಲಿಲ್ಲ. ಜತೆಗೆ ಆಪ್ ನ ಅನೇಕ ನಾಯಕರು ಪಕ್ಷ ಬಿಟ್ಟು ಹೊರನಡೆದರು. ಇದರಿಂದ ಆಪ್ ವರ್ಚಸ್ಸು ದಿನೇ ದಿನೇ ಕಡಿಮೆಯಾಗತೊಡಗಿತು. ಅರವಿಂದ ಕೇಜ್ರಿವಾಲ್ ನಿರಂಕುಶ ಪ್ರವೃತ್ತಿ ಅನುಸರಿಸುತ್ತಿದ್ದಾರೆ ಹಾಗೂ ಪಕ್ಷದೊಳಗೆ ಪ್ರಜಾಪ್ರಭುತ್ವ ಇಲ್ಲ ಎಂದು ಕಾರ್ಯಕರ್ತರು ತಿರುಗಿಬಿದ್ದರು. ಪರಿಣಾಮ ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಆಪ್ ಒಂದೂ ಸ್ಥಾನ ಗೆಲ್ಲಲಾಗಲಿಲ್ಲ. ಒಂದು ವರ್ಷದ ಹಿಂದೆ ಆಪ್ ಕಾರ್ಯಕರ್ತರಲ್ಲಿದ್ದ ಉತ್ಸಾಹ ಹಾಗೂ ಭರವಸೆ ಇಂದು ಕಂಡುಬರುತ್ತಿಲ್ಲ. ಆದ್ದರಿಂದ ಮತ್ತೆ ಜನರಲ್ಲಿಗೆ ಮತ ಕೇಳಲು ಹೋದರೆ ಜನರ ಪ್ರಶ್ನೆಗಳಿಗೆ ಏನು ಉತ್ತರ ನೀಡಬಲ್ಲರು ಎಂಬುದು ಪ್ರಶ್ನೆಯಾಗಿದೆ.
ಕಾಂಗ್ರೆಸ್ ಪಾತ್ರವೇನು?: ಕಳೆದ ಚುನಾವಣೆಯಲ್ಲಿ ತೃತೀಯ ಸ್ಥಾನಕ್ಕೆ ದೂಡಲ್ಪಟ್ಟು ಮುಖಭಂಗ ಅನುಭವಿಸಿದ್ದ ಕಾಂಗ್ರೆಸ್, ಸರ್ಕಾರ ರಚನೆಯಲ್ಲಿ ಮುಖ್ಯ ಪಾತ್ರ ವಹಿಸಿತ್ತು. ಆದರೆ, ಈ ಬಾರಿ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿರುವುದು, ನರೇಂದ್ರ ಮೋದಿ ಅಲೆ ಹೆಚ್ಚುತ್ತಿರುವುದು ಹಾಗೂ ವಿವಿಧ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವುದು ಕಾಂಗ್ರೆಸ್ ನ ಜಂಘಾಬಲವನ್ನು ಉಡುಗಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಮಹಾರಾಷ್ಟ್ರ ಹಾಗೂ ಹರ್ಯಾಣ ರಾಜ್ಯಗಳಿಗಿಂತ ಭಿನ್ನವಾಗಿಲ್ಲ. ಸ್ಥಳೀಯ ಮುಖಂಡರು ವಿಶ್ವಾಸ ಕಳೆದುಕೊಂಡಿದ್ದಾರೆ ಹಾಗೂ ರಾಷ್ಟ್ರೀಯ ಮುಖಂಡರು ನೆಪ ಮಾತ್ರಕ್ಕೆ ಭೇಟಿ ನೀಡಿ ಜಾರಿಕೊಳ್ಳುತ್ತಿದ್ದಾರೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಹ ರಾಜ್ಯ ರಾಜಕೀಯದಿಂದ ದೂರವುಳಿಯುವ ಮಾತನಾಡುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.
ಬಿಜೆಪಿ ನಾಯಕ ಯಾರು?: ನಿರಂತರ ಗೆಲುವಿನಿಂದ ಬೀಗುತ್ತಿರುವ ಬಿಜೆಪಿಗೆ ದೆಹಲಿ ಸುಲಭದ ತುತ್ತೇನೂ ಆಗುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹ ಹಾಗೂ ಜನಪ್ರಿಯ ವ್ಯಕ್ತಿಯನ್ನು ಗುರುತಿಸುವಲ್ಲಿ ವಿಫಲವಾಗಿರುವುದು ಪಕ್ಷದಲ್ಲಿರುವ ಗೊಂದಲಕ್ಕೆ ಸಾಕ್ಷಿಯಾಗಿದೆ. ಪಲ್ಸ್ ಪೋಲಿಯೋ ಖ್ಯಾತಿಯ ಡಾ. ಹರ್ಷವರ್ಧನ ಕೇಂದ್ರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಂತೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆಯೇ ಚುನಾವಣೆಗೆ ಇಳಿಯುವ ಸಂಭವನೀಯತೆ ಹೆಚ್ಚಾಗಿದೆ.
ಫೆಬ್ರವರಿಯಲ್ಲಿ ದೆಹಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಹಿಂದೆಯೇ ಜಮ್ಮು ಕಾಶ್ಮೀರ ಹಾಗೂ ಜಾರ್ಖಂಡ್ ಚುನಾವಣೆ ಬರಲಿರುವ ಕಾರಣ ಬಿಜೆಪಿಗೆ ಚುನಾವಣೆ ತಯಾರಿ ತರಾತುರಿಯಲ್ಲಿ ಆಗಬೇಕಾಗಿದೆ. ನರೇಂದ್ರ ಮೋದಿ ಅಲೆಯನ್ನೇ ನೆಚ್ಚಿಕೊಂಡಿರುವ ಬಿಜೆಪಿಗೆ ಸೋಲುಣಿಸುವಲ್ಲಿ ಕಾಂಗ್ರೆಸ್ ಹಾಗೂ ಆಪ್ ಸಫಲವಾಗಲಿವೆಯೇ ಎಂಬುದು ಕುತೂಹಲಕಾರಿಯಾಗಿದೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications