ಸಂಸತ್ ಸೆಂಟ್ರಲ್ ಹಾಲ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಭಾಷಣ
ನವದೆಹಲಿ, ಜುಲೈ 25: ಭಾರತವು 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರಪತಿಯಾಗಿ ಆಯ್ಕೆ ಆಗಿರುವುದು ವಿಶೇಷ ಗೌರವ ಎಂದು ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸೆಂಟ್ರಲ್ ಹಾಲ್ನಲ್ಲಿ ಮೊದಲ ಬಾರಿ ಭಾಷಣ ಮಾಡಿದ ಅವರು, ತಮ್ಮ ಮಾತುಗಳ ಮೂಲಕ ಭರ್ಜರಿ ಚಪ್ಪಾಳೆಯನ್ನು ಗಿಟ್ಟಿಸಿಕೊಂಡರು.
ಭಾರತದ 15ನೇ ರಾಷ್ಟ್ರಪತಿಯಾಗಿ ಸೆಂಟ್ರಲ್ ಹಾಲ್ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುರ್ಮು ಮೊದಲ ಭಾಷಣದಲ್ಲಿ ಏನೆಲ್ಲಾ ಉಲ್ಲೇಖಿಸಿದರು ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಭಾರತೀಯರಿಗೆ ಕೃತಜ್ಞತೆ ಸಲ್ಲಿಸಿದ ಮುರ್ಮು
"ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತವಾಗಿದೆ. ಸಂಸತ್ತಿನಲ್ಲಿ ನಿಂತು ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ," ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

ನಾನು ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿ
"ನಾನು ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ದೇಶದ ಮೊದಲ ರಾಷ್ಟ್ರಪತಿ ಆಗಿದ್ದೇನೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು, ಸ್ವತಂತ್ರ ಭಾರತದ ನಾಗರಿಕರೊಂದಿಗೆ ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ನಾವು ಪ್ರಯತ್ನಿಸಬೇಕಿದೆ. ಇಂಥ ಪ್ರಯತ್ನಗಳಿಗೆ ಮೊದಲಿಗಿಂತ ಹೆಚ್ಚಿನ ವೇಗವನ್ನು ನೀಡಬೇಕಾಗಿದೆ," ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ನನ್ನ ಸಾಧನೆಯಲ್ಲ
ರಾಷ್ಟ್ರಪತಿ ಹುದ್ದೆಗೆ ಆಯ್ಕೆ ಆಗಿರುವುದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರು ಕನಸುಗಳನ್ನು ಮಾತ್ರವಲ್ಲದೆ ಆ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಬಡವರ ಆಶೀರ್ವಾದದಿಂದ ನನ್ನ ನಾಮನಿರ್ದೇಶನ
ವರ್ಷಗಟ್ಟಲೆ ಅಭಿವೃದ್ಧಿ ಕಾಣದ ಜನರು-ಬಡವರು, ದಲಿತರು, ಹಿಂದುಳಿದವರು, ಗಿರಿಜನರು- ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬ ತೃಪ್ತಿ ನನಗಿದೆ. ನನ್ನ ನಾಮನಿರ್ದೇಶನದ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟಿಗಟ್ಟಲೆ ಮಹಿಳೆಯರ ಕನಸು ಮತ್ತು ಸಾಮರ್ಥ್ಯದ ಪ್ರತಿಬಿಂಬವಾಗಿದೆ ಎಂದು ಮುರ್ಮು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications