Breaking: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ
ನವದೆಹಲಿ, ಜುಲೈ 25: ಭಾರತದಲ್ಲಿ ಬುಡಕಟ್ಟು ಸಮುದಾಯದ ಮೊದಲ ಮಹಿಳೆಯಾಗಿ ಹಾಗೂ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಸೋಮವಾರ ಪದಗ್ರಹಣ ಸ್ವೀಕರಿಸಿದರು.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮುರಿಗೆ ಪ್ರಮಾಣ ವಚನ ಬೋಧಿಸಿದರು.
ಸೋಮವಾರ ಉಮಾ ಶಂಕರ್ ದೀಕ್ಷಿತ್ ಲೇನ್ನಲ್ಲಿರುವ ತಮ್ಮ ತಾತ್ಕಾಲಿಕ ನಿವಾಸದಿಂದ ಬೆಳಗ್ಗೆ 8.15ಕ್ಕೆ ಹೊರಟ ದ್ರೌಪದಿ ಮುರ್ಮು ರಾಜ್ಘಾಟ್ ಭೇಟಿ ನೀಡಿ ಗೌರವ ಸಲ್ಲಿಸಿದರು. ತದನಂತರದಲ್ಲಿ ರಾಜ್ಘಾಟ್ ನಿಂದ ಬೆಳಗ್ಗೆ 9.22 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ತಲುಪಿದರು.

ದ್ರೌಪದಿ ಮುರ್ಮು ಪ್ರಮಾಣವಚನ ಕಾರ್ಯಕ್ರಮ ಹೇಗಿತ್ತು?:
* ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಸೆಂಟ್ರಲ್ ಹಾಲ್ಗೆ ಕರೆದೊಯ್ಯಲಿದ್ದಾರೆ. ತದನಂತರ ಸೆಂಟ್ರಲ್ ಹಾಲ್ನಲ್ಲಿ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಲಾಯಿತು.
* ಬೆಳಗ್ಗೆ 10.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಲಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಪ್ರಮಾಣ ವಚನ ಬೋಧಿಸಲಿದ್ದಾರೆ. ದ್ರೌಪದಿ ಮುರ್ಮು ಪದಗ್ರಹಣದ ನಂತರ ಪ್ರಮಾಣ ಪತ್ರಕ್ಕೆ ಅಂಕಿತ ಹಾಕಿದರು.

* ಬೆಳಗ್ಗೆ 10:23ರ ಸುಮಾರಿಗೆ ಭಾರತದ 15ನೇ ರಾಷ್ಟ್ರಪತಿ ಆಗಿ ದ್ರೌಪದಿ ಮುರ್ಮು ಸೆಂಟ್ರಲ್ ಹಾಲ್ನಲ್ಲಿ ಮೊದಲ ಭಾಷಣ ಮಾಡಲಿದ್ದಾರೆ
ದೇಶದಲ್ಲಿ ಹೊಸ ಇತಿಹಾಸ ಬರೆದ ಮುರ್ಮು:
Recommended Video
ಕಳೆದ ಜುಲೈ 21ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ 64 ವರ್ಷದ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ಮೊದಲ ಬುಡಕಟ್ಟು ಸಮುದಾಯದ ನಾಯಕಿ ಎಂಬ ಹೊಸ ಇತಿಹಾಸವನ್ನು ದ್ರೌಪದಿ ಮುರ್ಮು ಬರೆದಿದ್ದಾರೆ. ಮುರ್ಮು ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಅಧ್ಯಕ್ಷ ಮತ್ತು ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದು, ಭಾರತದ ಮೊದಲ ಪ್ರಜೆಯಾದ ಎರಡನೇ ಮಹಿಳೆ ಎನಿಸಿಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications