ಸಂಸತ್ಭವನ ಉದ್ಘಾಟನೆಗೆ ದ್ರೌಪದಿ ಮುರ್ಮುರನ್ನು ಕರೆಯದಿರುವುದು ತಾರತಮ್ಯಕ್ಕೆ ಉದಾಹರಣೆ: ಉದಯನಿಧಿ ಸ್ಟಾಲಿನ್ ಸಮರ್ಥನೆ
ನವದೆಹಲಿ, ಸೆಪ್ಟಂಬರ್ 06: ಸನಾತನ ಧರ್ಮ ನಿರ್ಮೂಲನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆ ಕುರಿತು ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ. ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆಯದಿರುವುದೇ ಸನಾತನ ಧರ್ಮ ತಾರತಮ್ಯ ಎಂದು ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇತ್ತೀಚೆಗೆ ನೂತನ ಸಂಸತ್ ಭವನವನ್ನು ಉದ್ಘಾಟಿಸಲಾಯಿತು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿರಲಿಲ್ಲ. ಇದು ಸನಾತನ ಧರ್ಮದಲ್ಲಿನ ತಾರತಮ್ಯಕ್ಕೆ ಉದಾಹರಣೆ ಆಗಿದೆ. ನಾನು ಹೇಳಿಕೆ ಕುರಿತು ಯಾವುದೇ ಕ್ಷಮೆ ಕೇಳುವುದಿಲ್ಲ. ಯಾವದೇ ಬೆದರಿಕೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ.

ಸನಾತನ ಧರ್ಮವನ್ನು ಉದಯನಿಧಿ ಸ್ಟಾಲಿನ್ ಡೇಂಘಿ, ಮಲೆರಿಯಾ ರೋಗಕ್ಕೆ ಹೋಲಿಕೆ ಮಾಡಿ ವೇದಿಕೆ ಮೇಲೆ ಮೊನ್ನೆಯಷ್ಟೇ ಮಾತನಾಡಿದ್ದರು. ಡೇಂಘಿ, ಮಲೆರಿಯಾ ವನ್ನು ವಿರೋಧಿಸಲು ಸಾಧ್ಯವಿಲ್ಲ. ಇವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನ ಧರ್ಮವನ್ನು ವಿರೋಧಿಸಿದರೆ ಸಾಲದು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.
ಇದಕ್ಕೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ನಾಯಕರು ಸ್ಟಾಲಿನ್ ವಿರುದ್ಧ ಕೆಂಡ ಕಾರಿದ್ದಾರೆ. ಇತ್ತ ಕರ್ನಾಟಕ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದಯನಿಧಿ ಸ್ಟಾಲಿನ್ ಪರ ಮಾತನಾಡಿದ್ದಾರೆ. ಈ ಸಂಬಂಧ ಕರ್ನಾಟಕದ ಕಾರವಾರದಲ್ಲಿ ಇವರಿಬ್ಬರ ವಿರುದ್ಧ ದೂರು ದಾಖಲಾಗಿದೆ.
ಎಲ್ಲ ಧರ್ಮಗಳ ಜಾತಿ ತಾರತಮ್ಯ ಖಂಡಿಸುತ್ತೇನೆ
ನಾನು ಮೊನ್ನೆಯಷ್ಟೇ ಅಲ್ಲ ಮತ್ತೆ ಮತ್ತೆ ಅದನ್ನೆ ಹೇಳುತ್ತೇನೆ. ಕೇವಲ ಸನಾತನ ಧರ್ಮವನ್ನು, ಹಿಂದೂ ದರ್ಮವನ್ನು ಮಾತ್ರ ವಿರೋಧಿಸುತ್ತಿಲ್ಲ. ಎಲ್ಲ ಧರ್ಮಗಳಲ್ಲಿರುವ ಜಾತಿ ತಾರತಮ್ಯವನ್ನು ನಾನು ವಿರೋಧಿಸಿತ್ತೇನೆ, ಖಂಡಿಸುತ್ತೇವೆ ಎಂದು ಸೋಮವಾರ ತಿಳಿಸಿದ್ದರು.
ಸದ್ಯ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ರಾಷ್ಟ್ರಾದ್ಯಂದ ಭಾರೀ ವಿವಾದ ಸೃಷ್ಟಿ ಮಾಡಿದೆ. ಹಿಂದೂಪರ ಸಂಘಟನೆಗಳು, ಸಾಧುಗಳು, ಬಿಜೆಪಿ ಮುಖಂಡರು ಈ ನಿರ್ಮೂಲನೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸ್ಟಾಲಿನ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇತ್ತ ಸ್ಟಾಲಿನ್ ತಮ್ಮ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications