Breaking: ಜುಲೈ 25ರಂದು ನೂತನ ರಾಷ್ಟ್ರಪತಿ ದ್ರೌಪದಿ ಪ್ರಮಾಣ ವಚನ
ನವದೆಹಲಿ ಜುಲೈ : ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಸೋಮವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜುಲೈ 21ರಂದು ರಾಷ್ಟ್ರಪತಿ ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬೆಳಗ್ಗೆ 10.15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್. ವಿ. ರಮಣ ರಾಷ್ಟ್ರಪತಿಗಳಿಗೆ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ನೂತನ ರಾಷ್ಟ್ರಪತಿಗಳು 21 ಗನ್ ಸೆಲ್ಯೂಟ್ ನಂತರ ಅಧಿಕಾರ ಸ್ವೀಕರಿಸಲಿದ್ದಾರೆ. ಅದಾದ ಬಳಿಕ ದ್ರೌಪದಿ ಮುರ್ಮು ದೇಶವನ್ನು ಉದ್ದೇಶಿಸಿ ತಮ್ಮ ಮೊದಲ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೂ ಮುನ್ನ ರಾಮನಾಥ್ ಕೋವಿಂದ್ ನಿರ್ಗಮಿಸುವ ಜೊತೆಗೆ ಹೊಸದಾಗಿ ಚುನಾಯಿತರಾದವರು ವಿದ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸುತ್ತಾರೆ.

ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಂತ್ರಿಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ ತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸದರು ಹಾಗೂ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಸಮಾರಂಭ ಮುಗಿದ ಬಳಿಕ ನೂತನ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನಕ್ಕೆ ತೆರಳದ್ದಾರೆ. ಅಲ್ಲಿ ಸೇವಾ ಗಾರ್ಡ್ ಆಫ್ ಗೌರವ ಸ್ವೀಕರಿಸಲಿದ್ದಾರೆ. ಅಲ್ಲದೇ ಇದೇ ವೇಳೆ ನಿರ್ಗಮಿಸುವ ಮಾಜಿ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಲಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications