ಭಾರತೀಯ ಮಾರುಕಟ್ಟೆಯಲ್ಲಿ DRDO ಕೊವಿಡ್-19 ಔಷಧಿ ಲಭ್ಯ
ನವದೆಹಲಿ, ಮೇ 26: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಹೈದ್ರಾಬಾದಿನ ರೆಡ್ಡೀಸ್ ಪ್ರಯೋಗಾಲಯ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೊರೊನಾವೈರಸ್ ಔಷಧಿ 2 ಡಿಯಾಕ್ಸಿ-ಡಿ-ಗ್ಲುಕೋಸ್(2ಡಿಜಿ) ಗುರುವಾರದಿಂದಲೇ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
ಮೇ 27ರಂದು ಡಾಕ್ಟರ್ ರೆಡ್ಡೀಸ್ ವೈದ್ಯಕೀಯ ಪ್ರಯೋಗಾಲಯವು 10,000 ಪ್ಯಾಕೆಟ್ ಔಷಧೀಯ ಪುಡಿಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಮಾಹಿತಿ ನೀಡಿದೆ.
ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಸಂದರ್ಭದಲ್ಲಿ ಬಹುಪಾಲು ರೋಗಿಗಳಲ್ಲಿ ಉಸಿರಾಟ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆ ಜೀವಕೋಶ ಪ್ರವೇಶಿಸುವ 2ಡಿಜಿ ಔಷಧಿಯು ರೋಗಾಣುವಿನ ಹರಡುವಿಕೆ ಪ್ರಮಾಣವನ್ನು ತಗ್ಗಿಸುತ್ತದೆ. ರೋಗ ನಿರೋಧಕ ಶಕ್ತಿ ವೃದ್ಧಿಸುವಂತೆ ನೋಡಿಕೊಳ್ಳುವ ಶಕ್ತಿ ಈ ಔಷಧಿಗಿದೆ ಎಂದು ಸಂಸ್ಥೆ ಹೇಳಿದೆ. 2ಡಿಜಿ ಔಷಧಿ ಸಹಾಯದಿಂದ ಕೊವಿಡ್-19 ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದು ಕಡಿಮೆಯಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2ಡಿಜಿ ಔಷಧಿಗೆ ಮೇ 15ರಂದು ಅನುಮೋದನೆ:
ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಹೈದ್ರಾಬಾದಿನ ರೆಡ್ಡೀಸ್ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಿರುವ ಕೊರೊನಾವೈರಸ್ 2 ಡಿಯಾಕ್ಸಿ-ಡಿ-ಗ್ಲುಕೋಸ್(2ಡಿಜಿ) ಔಷಧಿಗೆ ಡ್ರಗ್ ಕಂಟ್ರೋಲರ್ ಆಫ್ ಇಂಡಿಯಾ ಮೇ 15ರಂದು ಅನುಮೋದನೆ ನೀಡಿತ್ತು.
2ಡಿಜಿ ಔಷಧಿಯ ಬೆಲೆ ಇನ್ನೂ ನಿಗದಿಯಾಗಿಲ್ಲ:
ಭಾರತದಲ್ಲಿ ಡಿಆರ್ಡಿಒ ಅಭಿವೃದ್ಧಿಪಡಿಸಿರುವ 2ಡಿಜಿ ಔಷಧಿಯ ಬೆಲೆ ಎಷ್ಟು ಎಂಬುದನ್ನು ಈವರೆಗೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ನ್ಯೂಸ್ 18 ಮೂಲಗಳ ಪ್ರಕಾರ, ರೆಡ್ಡೀಸ್ ಪ್ರಯೋಗಾಲಯ ಹಾಗೂ ಡಿಆರ್ಡಿಒ ಅಭಿವೃದ್ಧಿಪಡಿಸಿರುವ ಔಷಧಿಗೆ 500-600 ರೂಪಾಯಿ ನಿಗದಿಗೊಳಿಸುವ ಸಾಧ್ಯತೆಯಿದೆ. ಪ್ರಸ್ತುತ ಆಸ್ಪತ್ರೆಗಳ ಅಗತ್ಯತೆಗೆ ತಕ್ಕಂತೆ ನಿಗದಿತ ಪ್ರಮಾಣದಲ್ಲಿ ಔಷಧಿ ಉತ್ಪಾದನೆ ಮಾಡಲಾಗುತ್ತಿದೆ. ಈ ಔಷಧಿ ಉತ್ಪಾದನೆ ರೀತಿ ತುಂಬಾ ಸುಲಭವಾಗಿದ್ದು, ಮುಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸುಲಭವಾಗಿ ಕೈಗೆಟುಕಲಿದೆ ಎಂದು ಹೇಳಲಾಗುತ್ತಿದೆ.
Recommended Video
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications