ಪೆಲೆಟ್ ಬುಲೆಟ್ ಬದಲು ಪ್ಲಾಸ್ಟಿಕ್ ಬುಲೆಟ್: ಡಿಆರ್ ಡಿಒ ಸಂಶೋಧನೆ
ನವದೆಹಲಿ, ಜನವರಿ 4: ಕಾಶ್ಮೀರದಲ್ಲಿ ಕಲ್ಲು ತೂರುವವರ ವಿರುದ್ಧ ಬಳಸಲಾದ ಪೆಲೆಟ್ ಬುಲೆಟ್ ಭಾರಿ ವಿವಾದ ಸೃಷ್ಟಿಸಿದ್ದರಿಂದ ಅದಕ್ಕೆ ಪರ್ಯಾಯವಾದ ಅಸ್ತ್ರವನ್ನು ಕಂಡುಕೊಳ್ಳಲಾಗಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಕಡಿಮೆ ಲೆಥಾಲ್ ಇರುವ ಪ್ಲಾಸ್ಟಿಕ್ ಬುಲೆಟ್ಅನ್ನು ಅಭಿವೃದ್ಧಿಪಡಿಸಿದೆ.
2016ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಉಗ್ರ ಬುರ್ಹಾನ್ ವಾನಿ ಹತ್ಯೆಯ ಬಳಿಕ ನಡೆದ ಹಿಂಸಾಚಾರಗಳನ್ನು ತಡೆಯಲು ಸೈನಿಕರು ಪೆಲೆಟ್ ಬುಲೆಟ್ಗಳನ್ನು ಹಾರಿಸಿದ್ದರು. ಇದರಿಂದ ಸಾವಿರಾರು ಮಂದಿ ಗಾಯಗೊಂಡಿದ್ದರು. ಅನೇಕರು ಅಂಧರಾಗಿದ್ದರು. ಈ ಹಿಂಸಾಚಾರದಲ್ಲಿ ನೂರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದರು.

ಪೆಲೆಟ್ ಗನ್ಗಳಿಂದ ಭಾರಿ ಅನಾಹುತಗಳು ಆಗುತ್ತಿದೆ ಎಂದು ವ್ಯಾಪಕ ವಿರೋಧಗಳು ಕೇಳಿಬಂದಿದ್ದರಿಂದ ಗೃಹ ಸಚಿವಾಲಯವು ಅದಕ್ಕೆ ಪರ್ಯಾಯವಾಗಿ ಸ್ವದೇಶಿ ನಿರ್ಮಿತ ಪರಿಹಾರ ಕಂಡುಕೊಳ್ಳುವಂತೆ ಡಿಆರ್ ಡಿಒಗೆ ಸೂಚಿಸಿತ್ತು.
ಈ ಪ್ಲಾಸ್ಟಿಕ್ ಬುಲೆಟ್ಗಳನ್ನು ಎಕೆ 47ರ ಮೂಲಕವೂ ಸಿಡಿಸಬಹುದು. ಜಮ್ಮು ಮತ್ತು ಕಾಶ್ಮೀರದ ಪೊಲೀಸರಿಗೆ ಇವುಗಳನ್ನು ಪೂರೈಸಲಾಗುತ್ತದೆ. ಇವು ಆಮದಾದ ರಬ್ಬರ್ ಬುಲೆಟ್ಗಳಿಗಿಂತ ಕಡಿಮೆ ಅಪಾಯಕಾರಿ.
ಇವುಗಳನ್ನು ನೈಲಾನ್ನಿಂದ ತಯಾರಿಸಲಾಗಿದ್ದು, 50 ಮೀಟರ್ ದೂರದಿಂದ ಗುಂಡು ಹಾರಿಸಿದಾಗ ಗಾಯಗಳಾಗುತ್ತವೆ. ಪೆಲೆಟ್ ಬುಲೆಟ್ಗಳಿಗಿಂತ ಇವು 500 ಪಟ್ಟು ಕಡಿಮೆ ಗಾಯ ಉಂಟುಮಾಡುತ್ತವೆ.
ಈ ಬುಲೆಟ್ಗಳು ಉದ್ರಿಕ್ತ ಗುಂಪುಗಳನ್ನು ಚದುರಿಸಲು ಪರಿಣಾಮಕಾರಿಯಾಗಿದ್ದು, ಈಗಾಗಲೇ ಜಮ್ಮು ಮತ್ತು ಕಾಶ್ಮೀರದ ಪೊಲೀಸರಿಗೆ ಒಂದು ಲಕ್ಷ ಬುಲೆಟ್ಗಳನ್ನು ಪೂರೈಕೆ ಮಾಡಲಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications