DRDO ಅತ್ಯಾಧುನಿಕ ಕ್ಷಿಪಣಿಗಳ ಪ್ರಯೋಗ ಪರೀಕ್ಷೆ ಯಶಸ್ವಿ
ಬಾಲಸೋರ್(ಒಡಿಶಾ), ಫೆಬ್ರವರಿ 27: ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆಸಿದ್ದ ಉಗ್ರರ ವಿಧ್ವಂಸಕ ಕೃತ್ಯಕ್ಕೆ ತಿರುಗೇಟು ನೀಡಲು ಭಾರತ ಆರಂಭಿಸಿದೆ. ಪಾಕಿಸ್ತಾನದ ಬಾಲಕೋಟ್, ಗಡಿ ನಿಯಂತ್ರಣ ರೇಖೆ ಬಳಿಯ ಮುಝಾಫರಬಾದ್ ಹಾಗೂ ಚಕೋತಿಯಲ್ಲಿದ್ದ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ನೆಲೆಯನ್ನು ಭಾರತೀಯ ವಾಯುಸೇನೆ ಧ್ವಂಸಗೊಳಿಸಿದೆ.ಇದೇ ಸಂದರ್ಭದಲ್ಲಿ ಒಡಿಶಾಸ ಕಡಲ ತೀರದಲ್ಲಿ ಎರಡು ಅತ್ಯಾಧುನಿಕ ಕ್ಷಿಪಣಿಗಳ ಪ್ರಯೋಗದ ಪರೀಕ್ಷೆಯನ್ನು ಡಿಆರ್ ಡಿಒ ಯಶಸ್ವಿಯಾಗಿದೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಚಾಂದಿಪುರ್ ನಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ಮಂಗಳವಾರದಂದು ಕ್ಷಿಪಣಿಗಳ ಪರೀಕ್ಷೆ ನಡೆಸಲಾಯಿತು. ಭೂಮೇಲ್ಮೆಯಿಂದ ಆಗಸಕ್ಕೆ ಚಿಮ್ಮುವ(surface to air missile) ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ವಿನ್ಯಾಸಗೊಳಿಸಿದೆ. 15 ಕಿ.ಮೀ ವ್ಯಾಪ್ತಿಯಲ್ಲಿರುವ ಬಹುಸ್ತರ ಗುರಿಯನ್ನು ನಿಖರವಾಗಿ ಮುಟ್ಟಿ ಕ್ಷಣಾರ್ಧದಲ್ಲಿ ನಾಶ ಪಡಿಸುವ ಸಾಮರ್ಥ್ಯ ಈ ಕ್ಷಿಪಣಿಗಿದೆ.
ಭಾರತದಲ್ಲಿರುವ ಮಧ್ಯಮ ಶ್ರೇಣಿಯಲ್ಲಿರುವ ಕ್ಷಿಪಣಿಗಳಿಗೆ ಇದು ಪೂರಕವಾಗಿವೆ. ನೌಕೆಗಳ ಮೇಲೆ ನಡೆಯುವ ದಾಳಿಯನ್ನು ಪಡೆಯಲು ಅಥವಾ ಭೂಸೇನೆ ಬಳಕೆಗೂ ಇದನ್ನು ಬಳಸಬಹುದು ಎಂದು ಡಿಆರ್ ಡಿ ಒ ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ಜೈಪುರದ ಮರಭೂಮಿಯಲ್ಲಿ 7 ಕಿ. ಮೀ ದೂರದ ಗುರಿಯನ್ನು ತಲುಪಬಹುದಾದ ಶಸ್ತ್ರಸಜ್ಜಿತ ಮಿಲಿಟರಿ ವಾಹನಗಳನ್ನು ಹೊಡೆಯಲು ಮತ್ತು ನಾಶಮಾಡಲು ವಿನ್ಯಾಸಗೊಳಿಸಲಾಗಿರುವ 'ನಾಗ್' ಕ್ಷಿಪಣಿಯ ಪ್ರಯೋಗ ಯಶಸ್ವಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
. @DefenceMinIndia congratulates @DRDO_India 4 successful test firing of indigenous QRSAM (Quick Reaction Surface to Air Msls) demonstrating robust control, aerodynamics & manoeuvring capabilities. @nsitharaman conveys her appreciation to the team on achieving all main objective pic.twitter.com/lNvLDQTvu8
— Defence Spokesperson (@SpokespersonMoD) February 26, 2019
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕುದಾಪುರ ಬಳಿ ವಿಜ್ಞಾನ ನಗರಿಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ)ದ ಮಾನವ ರಹಿತ (ಯುಎವಿ) ಯುದ್ಧ ವಿಮಾನಗಳ ಪರೀಕ್ಷಾರ್ಥ ವಾಯುನೆಲೆ ಕೂಡಾ ಈಗ ಡಿಆರ್ ಡಿಒನ ಪರೀಕ್ಷೆ, ಪ್ರಯೋಗಕ್ಕೆ ಮುಕ್ತವಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications