ಭೂಗತ ಪಾತಕಿ ರವಿ ಪೂಜಾರಿ ಸೆನೆಗಲ್ ನಿಂದ ಭಾರತಕ್ಕೆ
ಬೆಂಗಳೂರು, ಫೆಬ್ರವರಿ 23: ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಪಾತಕ ಕೃತ್ಯಗಳನ್ನು ಎಸಗಿರುವ ಆರೋಪ ಹೊತ್ತುಕೊಂಡು ನಾಪತ್ತೆಯಾಗಿದ್ದ ಪಾತಕಿ ರವಿ ಪೂಜಾರಿಯನ್ನು ಸೆನೆಗಲ್ ದೇಶದಲ್ಲಿ ಬಂಧಿಸಲಾಗಿದೆ. ಸೆನೆಗಲ್ ನಿಂದ ಭಾರತಕ್ಕೆ ಹಸ್ತಾಂತರಿಸಲಾಗುತ್ತಿದೆ. ಕರ್ನಾಟಕ ಪೊಲೀಸರು ಸೆನೆಗಲ್ ಗೆ ತೆರಳಿ, ಆತನನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ.
ರವಿ ಪೂಜಾರಿ ಹಸ್ತಾಂತರಕ್ಕೆ ಇದ್ದ ಕಾನೂನಿನ ತೊಡಕು ನಿವಾರಣೆಯಾಗಿರುವ ಸುದ್ದಿ ಬಂದಿದೆ. ಈ ಹಿಂದೆ ಪೂಜಾರಿ ಬಂಧನವಾದರೂ ಭಾರತಕ್ಕೆ ಹಸ್ತಾಂತರಿಸಲು ಸಾಧ್ಯವಾಗಿರಲಿಲ್ಲ. ಹಸ್ತಾಂತರ ಕುರಿತಂತೆ ಸೆನೆಗಲ್ ಜೊತೆ ಭಾರತ ಯಾವುದೇ ಒಪ್ಪಂದ ಹೊಂದಿಲ್ಲದ ಕಾರಣ 2019 ರ ಜನವರಿ 19ರಂದು ರವಿ ಪೂಜಾರಿಯನ್ನು ಬಂಧಿಸಿದರೂ ಕಾನೂನು ತೊಡಕಿನಿಂದ ಹಸ್ತಾಂತರ ಸಾಧ್ಯವಾಗಿರಲಿಲ್ಲ. ನಂತರ ಜಾಮೀನು ಪಡೆದು ಮತ್ತೆ ಭೂಗತನಾಗಿದ್ದ ಪೂಜಾರಿಯನ್ನು ಮತ್ತೆ ಬಂಧಿಸಲಾಗಿದೆ. ಈಗ ಕಾನೂನು ತೊಡಕು ನಿವಾರಣೆಯಾಗಿದ್ದು, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಪೊಲೀಸರ ತಂಡ ಸೆನೆಗಲ್ ದೇಶಕ್ಕೆ ತೆರಳಲಿದೆ.
ಕರ್ನಾಟಕದಲ್ಲಿ ರವಿ ಪೂಜಾರಿ ವಿರುದ್ಧ 49 ಕೇಸುಗಳು ದಾಖಲಾಗಿವೆ. ಇಲ್ಲಿ ತನಕ 13 ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿವೆ. ಮಂಗಳೂರಿನ ಪೊಲೀಸರು, RAW ಸಿಬ್ಬಂದಿ ಹಾಗೂ ಸೆನೆಗಲ್ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಪೂಜಾರಿಯನ್ನು ಬಂಧಿಸಲಾಗಿದೆ.

ಪೂಜಾರಿ ಹಸ್ತಾಂತರವಾದ ಬಳಿಕ ಮೊದಲು ಮುಂಬೈಗೆ ಕರೆದೊಯ್ಯಲಾಗುತ್ತದೆ. ನಂತರ ಮಂಗಳೂರು ಅಥವಾ ನವದೆಹಲಿಗೆ ಕರೆ ತಂದು ವಿಚಾರಣೆ ನಡೆಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬುರ್ಕಿನಾ ಫಾಸೋ ನಾಗರಿಕ ಎಂದು ಹೇಳಿಕೊಂಡಿರುವ ಪೂಜಾರಿ ತನ್ನ ಹೆಸರನ್ನು ಅಂಥೋಣಿ ಫರ್ನಾಂಡೀಸ್ ಎಂದು ಬದಲಾಯಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications