ಡಿಜಿಟಲ್ ಡ್ರೈವಿಂಗ್ ಲೈಸೆನ್ಸ್, ಆರ್ಸಿಯನ್ನು ಸ್ವೀಕರಿಸಲು ಆದೇಶ
ಬೆಂಗಳೂರು, ಆಗಸ್ಟ್ 10 : ಇನ್ನು ಮುಂದೆ ಟ್ರಾಫಿಕ್ ಪೊಲೀಸ್ ಕೇಳಿದಾಗ ವಾಹನ ಚಾಲನಾ ಪರವಾನಗಿಯಾಗಲಿ, ನೋಂದಣಿ ಪತ್ರವನ್ನಾಗಲಿ ಕಾಗದ ರೂಪದಲ್ಲಿ ತೋರಿಸುವ ಬದಲು ನಮ್ಮ ಮೊಬೈಲಿನಲ್ಲಿಯೇ ಡಿಜಿಟಲ್ ರೂಪದಲ್ಲಿ ತೋರಿಸಬಹುದು.
ಈ ಡಿಜಿಟಲ್ ದಾಖಲೆಗಳನ್ನು ಪರಿಗಣಿಸುವಂತೆ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಆದೇಶ ನೀಡಿದೆ. ಮೇಲೆ ತಿಳಿಸಿದ ಎರಡು ದಾಖಲೆಗಳು ಮಾತ್ರವಲ್ಲ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ಡಿಜಿಲಾಕರ್ ಅಥವಾ ಎಂಪರಿವರ್ತನ್ ಆಪ್ ನಲ್ಲಿ ಕೂಡಿಟ್ಟುಕೊಂಡು ಅಗತ್ಯ ಬಿದ್ದಾಗ ತೋರಿಸಬಹುದು.
ರಸ್ತೆ ಸಾರಿಗೆ ಮತ್ತು ಹೆದ್ದಾಗಿ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದ್ದು, ಡ್ರೈವಿಂಗ್ ಲೆಸೆನ್ಸ್, ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ಮುಂತಾದವುಗಳನ್ನು ಡಿಜಿಲಾಕರ್ ಆಪ್ ಮೂಲಕ ಪ್ರಸ್ತುತಪಡಿಸುವುದು ಮೋಟರ್ ವೆಹಿಕಲ್ ಆಕ್ಟ್ 1988 ಅಡಿಯಲ್ಲಿ, ಸಾರಿಗೆ ಅಧಿಕಾರಿಗಳು ನೀಡಿರುವ ದಾಖಲೆಗಳಷ್ಟೇ ಸ್ವೀಕಾರಾರ್ಹವಾಗಿದೆ ಎಂದು ಸ್ಪಷ್ಟಪಡಿಸಿದೆ.

ಡಿಜಿಲಾಕರ್ ಅಥವಾ ಎಂಪರಿವರ್ತನ್ ಆಪ್
ಡಿಜಿಲಾಕರ್ ಅಥವಾ ಎಂಪರಿವರ್ತನ್ ಆಪ್ ಗಳಲ್ಲಿ ಕೂಡಿಟ್ಟ ದಾಖಲೆಗಳನ್ನು ಟ್ರಾಫಿಕ್ ಪೊಲೀಸರು ಅಥವಾ ಆರ್ಟಿಓ ಅಧಿಕಾರಿಗಳು ಪರಿಗಣಿಸುತ್ತಿಲ್ಲ ಎಂಬ ಬಗ್ಗೆ ಹಲವಾರು ದೂರುಗಳು ಮತ್ತು ಆರ್ಟಿಐ ಅರ್ಜಿಗಳನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಕ್ರಮವನ್ನು ತೆಗೆದುಕೊಂಡಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಆಪ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಂಪರಿವರ್ತನ್ ಆಪ್ ಗಳಲ್ಲಿ ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಷನ್ ಸರ್ಟಿಫಿಕೇಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಸ್ಟೋರ್ ಮಾಡಲು ಅವಕಾಶ ನೀಡಲಾಗಿದೆ. ಇವು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅಡಿಯಲ್ಲಿ ಮೂಲರೂಪದ ದಾಖಲೆಗಳಷ್ಟೇ ಸಮಾನವಾಗಿವೆ.

ಹೊಸ ವಾಹನಗಳ ವಿಮೆ ಮತ್ತು ಹಳೆ ವಾಹನಗಳ ವಿಮಾ ನವೀಕರಣ
ಇದರ ಜೊತೆಗೆ, ಹೊಸ ವಾಹನಗಳ ವಿಮೆ ಮತ್ತು ಹಳೆ ವಾಹನಗಳ ವಿಮಾ ನವೀಕರಣ ದಾಖಲೆಗಳನ್ನು ಕೂಡ ವಿಮಾ ಮಾಹಿತಿ ಮಂಡಳಿ ವಾಹನ್ ಡೇಟಾಬೇಸ್ ನಲ್ಲಿ ಅಪ್ಲೋಡ್ ಮಾಡುತ್ತಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಂಪರಿವರ್ತನ್ ಅಥವಾ ಈಚಲನ್ ಆಪ್ ನಲ್ಲಿ ಈ ದಾಖಲೆಗಳಲ್ಲಿ ಕೂಡ ಅಪ್ಲೋಡ್ ಆಗುತ್ತಿವೆ. ಎಂಪರಿವರ್ತನ್ ಅಥವಾ ಈಚಲನ್ ಆಪ್ ಗಳಲ್ಲಿ ವಿಮಾ ದಾಖಲಾತಿಗಳು ಇದ್ದರೆ ಮೂಲ ದಾಖಲೆಗಳನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ
ಆದರೆ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ, ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಸಂದರ್ಭ ಬಂದಾಗ ಹೇಗೆ ವಶಪಡಿಸಿಕೊಳ್ಳುವುದು? ಇದಕ್ಕೂ ಇಲ್ಲಿ ಪರಿಹಾರವಿದೆ. ಈಚಲನ್ ವ್ಯವಸ್ಥೆಯ ಮೂಲಕ ಈ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಾಧ್ಯವಿದೆ. ಹೀಗೆ ವಶಪಡಿಸಿಕೊಂಡಿದ್ದು ವಾಹನ್ ಡೇಟಾಬೇಸ್ ನಲ್ಲಿ ದಾಖಲಾಗಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications