ಡಿಜಿಟಲ್ ಡ್ರೈವಿಂಗ್ ಲೈಸೆನ್ಸ್, ಆರ್ಸಿಯನ್ನು ಸ್ವೀಕರಿಸಲು ಆದೇಶ
ಬೆಂಗಳೂರು, ಆಗಸ್ಟ್ 10 : ಇನ್ನು ಮುಂದೆ ಟ್ರಾಫಿಕ್ ಪೊಲೀಸ್ ಕೇಳಿದಾಗ ವಾಹನ ಚಾಲನಾ ಪರವಾನಗಿಯಾಗಲಿ, ನೋಂದಣಿ ಪತ್ರವನ್ನಾಗಲಿ ಕಾಗದ ರೂಪದಲ್ಲಿ ತೋರಿಸುವ ಬದಲು ನಮ್ಮ ಮೊಬೈಲಿನಲ್ಲಿಯೇ ಡಿಜಿಟಲ್ ರೂಪದಲ್ಲಿ ತೋರಿಸಬಹುದು.
ಈ ಡಿಜಿಟಲ್ ದಾಖಲೆಗಳನ್ನು ಪರಿಗಣಿಸುವಂತೆ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಆದೇಶ ನೀಡಿದೆ. ಮೇಲೆ ತಿಳಿಸಿದ ಎರಡು ದಾಖಲೆಗಳು ಮಾತ್ರವಲ್ಲ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ಡಿಜಿಲಾಕರ್ ಅಥವಾ ಎಂಪರಿವರ್ತನ್ ಆಪ್ ನಲ್ಲಿ ಕೂಡಿಟ್ಟುಕೊಂಡು ಅಗತ್ಯ ಬಿದ್ದಾಗ ತೋರಿಸಬಹುದು.
ರಸ್ತೆ ಸಾರಿಗೆ ಮತ್ತು ಹೆದ್ದಾಗಿ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದ್ದು, ಡ್ರೈವಿಂಗ್ ಲೆಸೆನ್ಸ್, ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ಮುಂತಾದವುಗಳನ್ನು ಡಿಜಿಲಾಕರ್ ಆಪ್ ಮೂಲಕ ಪ್ರಸ್ತುತಪಡಿಸುವುದು ಮೋಟರ್ ವೆಹಿಕಲ್ ಆಕ್ಟ್ 1988 ಅಡಿಯಲ್ಲಿ, ಸಾರಿಗೆ ಅಧಿಕಾರಿಗಳು ನೀಡಿರುವ ದಾಖಲೆಗಳಷ್ಟೇ ಸ್ವೀಕಾರಾರ್ಹವಾಗಿದೆ ಎಂದು ಸ್ಪಷ್ಟಪಡಿಸಿದೆ.

ಡಿಜಿಲಾಕರ್ ಅಥವಾ ಎಂಪರಿವರ್ತನ್ ಆಪ್
ಡಿಜಿಲಾಕರ್ ಅಥವಾ ಎಂಪರಿವರ್ತನ್ ಆಪ್ ಗಳಲ್ಲಿ ಕೂಡಿಟ್ಟ ದಾಖಲೆಗಳನ್ನು ಟ್ರಾಫಿಕ್ ಪೊಲೀಸರು ಅಥವಾ ಆರ್ಟಿಓ ಅಧಿಕಾರಿಗಳು ಪರಿಗಣಿಸುತ್ತಿಲ್ಲ ಎಂಬ ಬಗ್ಗೆ ಹಲವಾರು ದೂರುಗಳು ಮತ್ತು ಆರ್ಟಿಐ ಅರ್ಜಿಗಳನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಕ್ರಮವನ್ನು ತೆಗೆದುಕೊಂಡಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಆಪ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಂಪರಿವರ್ತನ್ ಆಪ್ ಗಳಲ್ಲಿ ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಷನ್ ಸರ್ಟಿಫಿಕೇಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಸ್ಟೋರ್ ಮಾಡಲು ಅವಕಾಶ ನೀಡಲಾಗಿದೆ. ಇವು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅಡಿಯಲ್ಲಿ ಮೂಲರೂಪದ ದಾಖಲೆಗಳಷ್ಟೇ ಸಮಾನವಾಗಿವೆ.

ಹೊಸ ವಾಹನಗಳ ವಿಮೆ ಮತ್ತು ಹಳೆ ವಾಹನಗಳ ವಿಮಾ ನವೀಕರಣ
ಇದರ ಜೊತೆಗೆ, ಹೊಸ ವಾಹನಗಳ ವಿಮೆ ಮತ್ತು ಹಳೆ ವಾಹನಗಳ ವಿಮಾ ನವೀಕರಣ ದಾಖಲೆಗಳನ್ನು ಕೂಡ ವಿಮಾ ಮಾಹಿತಿ ಮಂಡಳಿ ವಾಹನ್ ಡೇಟಾಬೇಸ್ ನಲ್ಲಿ ಅಪ್ಲೋಡ್ ಮಾಡುತ್ತಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಂಪರಿವರ್ತನ್ ಅಥವಾ ಈಚಲನ್ ಆಪ್ ನಲ್ಲಿ ಈ ದಾಖಲೆಗಳಲ್ಲಿ ಕೂಡ ಅಪ್ಲೋಡ್ ಆಗುತ್ತಿವೆ. ಎಂಪರಿವರ್ತನ್ ಅಥವಾ ಈಚಲನ್ ಆಪ್ ಗಳಲ್ಲಿ ವಿಮಾ ದಾಖಲಾತಿಗಳು ಇದ್ದರೆ ಮೂಲ ದಾಖಲೆಗಳನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ
ಆದರೆ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ, ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಸಂದರ್ಭ ಬಂದಾಗ ಹೇಗೆ ವಶಪಡಿಸಿಕೊಳ್ಳುವುದು? ಇದಕ್ಕೂ ಇಲ್ಲಿ ಪರಿಹಾರವಿದೆ. ಈಚಲನ್ ವ್ಯವಸ್ಥೆಯ ಮೂಲಕ ಈ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಾಧ್ಯವಿದೆ. ಹೀಗೆ ವಶಪಡಿಸಿಕೊಂಡಿದ್ದು ವಾಹನ್ ಡೇಟಾಬೇಸ್ ನಲ್ಲಿ ದಾಖಲಾಗಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications