ಪ್ರಧಾನಿ ಮೋದಿ ನಿವಾಸದ ಮೇಲೆ ಡ್ರೋನ್ ಹಾರಾಟ, ಪೊಲೀಸರಿಂದ ತನಿಖೆ!
ನವದೆಹಲಿ, ಜುಲೈ 03; ಭಾರತದ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ನಿವಾಸದ ಮೇಲೆ ಡ್ರೋನ್ ಹಾರಾಟ ನಡೆಸಿದೆ. ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸೋಮವಾರ ಮುಂಜಾನೆ 5.30ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರಿ ನಿವಾಸದ ಮೇಲೆ ಡ್ರೋನ್ ಹಾರಾಟ ನಡೆಸಿದೆ. ಭದ್ರತಾ ದೃಷ್ಟಿಯಿಂದ ಮೋದಿ ನಿವಾಸ ನೋ ಫ್ಲೈಯಿಂಗ್ ಝೋನ್ ವ್ಯಾಪ್ತಿಗೆ ಒಳಪಡಲಿದೆ. ಆದರೂ ಸಹ ಅಲ್ಲಿ ಡ್ರೋನ್ ಹಾರಾಟ ನಡೆಸಿರುವ ಪ್ರಕರಣ ನಡೆದಿದೆ.

ನರೇಂದ್ರ ಮೋದಿ ಭದ್ರತಾ ಉಸ್ತುವಾರಿ ನೋಡಿಕೊಳ್ಳುವ ಎಸ್ಪಿಜಿ ಈ ಕುರಿತು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದೆ. ದೆಹಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ.
ದೆಹಲಿ ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದು, 'ಹಾರಾಟ ನಿಷೇಧ ವಲಯವಾದ ಪ್ರಧಾನಿ ನಿವಾಸ ಮೇಲೆ ಡ್ರೋನ್ ಹಾರಾಟ ನಡೆಸಿದ ಮಾಹಿತಿ ಸಿಕ್ಕಿದೆ. ಎಸ್ಪಿಜಿ ಈ ಕುರಿತು ದೆಹಲಿ ಪೊಲೀಸರನ್ನು ಮುಂಜಾನೆ 5.30ಕ್ಕೆ ಸಂಪರ್ಕಿಸಿದೆ. ತನಿಖೆ ನಡೆಯುತ್ತಿದೆ' ಎಂದು ಹೇಳಿದ್ದಾರೆ.
#UPDATE | Information was received at the NDD control room about an unidentified flying object near PM's residence. Thorough searches were made in nearby areas but no such object was detected. The air traffic control room (ATC) was also contacted, they also didn't detect any such…
— ANI (@ANI) July 3, 2023
ಪೊಲೀಸರಿಂದ ಹುಡುಕಾಟ; ನರೇಂದ್ರ ಮೋದಿ ನಿವಾಸದ ಮೇಲೆ ಹಾರಾಟ ನಡೆಸಿದ ಡ್ರೋನ್ಗಾಗಿ ದೆಹಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸಹ ಯಾವುದೇ ಡ್ರೋನ್ ಪತ್ತೆಯಾಗಿಲ್ಲ.
ಪ್ರಧಾನಿ ನರೇಂದ್ರ ಮೋದಿ ಭದ್ರತೆಯನ್ನು Special Protection Group (SPG) ನೋಡಿಕೊಳ್ಳುತ್ತದೆ. ಆದರೆ ಅವರು ದೆಹಲಿಯಲ್ಲಿನ ನಿವಾಸದಲ್ಲಿ ಇರುವಾಗ ದೆಹಲಿ ಪೊಲೀಸರು ಮತ್ತು ಎಸ್ಪಿಜಿ ಗ್ರೂಪ್ ಸೇರಿ ವಿವಿಧ ಹಂತಗಳಲ್ಲಿ ಭದ್ರತೆಯನ್ನು ನೀಡಲಾಗುತ್ತದೆ. ದೆಹಲಿ ಪೊಲೀಸರು ಸಹ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತಾರೆ.
ಭದ್ರತಾ ದೃಷ್ಟಿಯಿಂದ ಮೋದಿ ನಿವಾಸ, ಪ್ರಧಾನಿ ಮೋದಿ ಸಾಗುವ ಮಾರ್ಗ, ಪ್ರಧಾನಿ ಕಾರ್ಯಕ್ರಮಗಳು ನಡೆಯುವ ಪ್ರದೇಶಗಳು ನೋ ಫ್ಲೈಯಿಂಗ್ ಝೋನ್ ವ್ಯಾಪ್ತಿಗೆ ಒಳಪಡುತ್ತವೆ. ಈ ಸ್ಥಳಗಳಲ್ಲಿ ಡ್ರೋನ್, ವಿಮಾನ, ಹೆಲಿಕಾಪ್ಟರ್ ಹಾರಾಟ ನಡೆಸುವಂತಿಲ್ಲ. ಆದರೆ ಮೋದಿ ಸರ್ಕಾರಿ ನಿವಾಸದ ಮೇಲೆ ಡ್ರೋನ್ ಹಾರಿದ್ದು, ಕುತೂಹಲ, ಅಚ್ಚರಿಗೆ ಕಾರಣವಾಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications