"ಫಕೀರ ಸಾಯಿಬಾಬಾ ಪೂಜೆ ಮಾಡಿದ್ದಕ್ಕೆ ಬರಗಾಲ ಬಂತು"
ಹರಿದ್ವಾರ, ಏಪ್ರಿಲ್, 11: ಮಹಾರಾಷ್ಟ್ರದಲ್ಲಿ ಬರ ಪರಿಸ್ಥಿತಿ ಯಾಕೆ ತಲೆದೋರಿತು ಎಂಬುದಕ್ಕೆ ದ್ವಾರಕಾ ಪೀಠದ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಸೋಮವಾರ ವಿವಾದಾತ್ಮಕ ಉತ್ತರ ನೀಡಿದ್ದಾರೆ.
"ಪೂಜೆಗೆ ಅರ್ಹರಲ್ಲದ ಶಿರಡಿ ಸಾಯಿ ಬಾಬಾರನ್ನು ಪೂಜೆ ಮಾಡಿದ್ದೆ ಮಹಾರಾಷ್ಟ್ರಕ್ಕೆ ಬರ ಪರಿಸ್ಥಿತಿ ಬರಲು ಕಾರಣ, ಬಾಬಾಗೆ ದೇವಾಲಯ ಕಟ್ಟುವುದರಲ್ಲಿ ಅರ್ಥವಿಲ್ಲ" ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗುತ್ತಿದೆ. ಹರಿದ್ವಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಇಂಥ ಹೇಳಿಕೆಯನ್ನು ಸ್ವಾಮೀಜಿ ನೀಡಿದ್ದಾರೆ.[ಧರ್ಮ ಸಂಸತ್ತಿನಲ್ಲಿ ಬಾಬಾ vs ಶಂಕರ ಜಟಾಪಟಿ]
ಶನಿ ಸಿಂಗಣಾಪುರ ದೇಗುಲಕ್ಕೆ ಮಹಿಳೆಯರಿಂದ ಪೂಜೆ ಬಗ್ಗೆಯೂ ಮಾತನಾಡಿದ ಸ್ವಾಮೀಜಿ, ಅತ್ಯಾಚಾರ ಹೆಚ್ಚಲು, ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಲು ಇಂಥ ಘಟನಾವಳಿಗಳು ಕಾರಣವಾಗುತ್ತವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.[ಶನೈಶ್ವರನಿಗೆ ಮಹಿಳೆಯಿಂದ ಪೂಜೆ: ಪರ-ವಿರೋಧ ಚರ್ಚೆ ಆರಂಭ]

ಫಕೀರನಿಗೆ ಫೂಜೆ ಬೇಕೆ?
"ಸಾಯಿ ಬಾಬಾ ಓರ್ವ ಫಕೀರ. ಇಂಥವರನ್ನು ಪೂಜೆ ಮಾಡಿ ಅವರ ಹೆಸರಲ್ಲಿ ದೇವಾಲಯ ನಿರ್ಮಾಣ ಮಾಡಿದರೆ ಒಳಿತಾಗುತ್ತದೆಯೇ?" ಎಂದು ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.

ಸಾಯಿಬಾಬಾ ಹಿಂದೂ ದೇವರೇ ಅಲ್ಲ
ಸಾಯಿಬಾಬಾ ಹಿಂದೂ ದೇವರೇ ಅಲ್ಲ. ಅವರೊಬ್ಬ ಮುಸ್ಲಿಂ ಭಿಕ್ಷುಕ. ಇಂಥವರನ್ನು ಪೂಜೆ ಮಾಡುವುದರ ಅರ್ಥವಾದರೂ ಏನು? ದೇಶಕ್ಕೆ ಬರ ಬರದೇ ಇನ್ನೇನಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ವಿದೇಶಿ ಸಂಸ್ಥೆಗಳಿಗೆ ದುಡ್ಡು
ವಿದೇಶದ ಸಂಸ್ಥೆಗಳು ಸಾಯಿಬಾಬಾ ಹೆಸರನ್ನು ದುರುಪಯೋಗ ಮಾಡಿಕೊಂಡು ಹಣ ಮಾಡಿಕೊಳ್ಳುತ್ತಿವೆ. ಪವಾಡದ ಹೆಸರಿನಲ್ಲಿ ನಮ್ಮ ದೇಶದ ಜನರಿಗೆ ಮಂಕುಬೂದಿ ಎರಚುತ್ತಿವೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಅತ್ಯಾಚಾರ ಹೆಚ್ಚುತ್ತದೆ
ಶನಿ ಸಿಂಗಣಾಪುರ ದೇಗುಲಕ್ಕೆ ಮಹಿಳೆಯರಿಂದ ಪೂಜೆ ಮಾಡಿಸಿದ್ದು ಅಧೋಗತಿಯ ಸೂಚನೆ. ಅತ್ಯಾಚಾರ ಹೆಚ್ಚಲು, ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಲು ಇಂಥ ಘಟನಾವಳಿಗಳೇ ಕಾರಣವಾಗುತ್ತವೆ ಎಂದು ಹೇಳಿದ್ದಾರೆ.

ಇದೇ ಮೊದಲಲ್ಲ
ಸಾಯಿಬಾಬಾ ದೇವರಲ್ಲ ಎಂದು ದ್ವಾರಕಾಪೀಠದ ಶಂಕರಾಚಾರ್ಯರು ಈ ಮೊದಲು ಹೇಳಿಕೆ ನೀಡಿದ್ದರು. ಇದಕ್ಕೆ ಅನೇಕ ಹಿಂದೂ ಧಾರ್ಮಿಕ ಮುಖಂಡರು ದನಿಗೂಡಿಸಿದ್ದು ಸಹಜವಾಗೇ ಸಾಯಿಬಾಬಾ ಭಕ್ತರನ್ನು ಕೆರಳಿಸಿದ್ದು ಸುದ್ದಿಯಾಗಿತ್ತು.

ವಿವಾದಕ್ಕೆ ನಾಂದಿ
ಈಗಾಗಲೇ ಸಾಮಾಜಿಕ ತಾಣಗಳಲ್ಲಿ ಸ್ವಾಮೀಜಿ ಹೇಳಿಕೆಗೆ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಲು ಆರಂಭಿಸಿದ್ದು ದೊಡ್ಡ ವಿವಾದ ಉಂಟಾಗುವುದರಲ್ಲಿ ಯಾವ ಅನುಮಾನವಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications