Waqf Bill Passed: ಇಂದಿನಿಂದ ಹೊಸ ಕಾನೂನು ಜಾರಿ, 'ವಕ್ಫ್ ಬಿಲ್ 2025'ಗೆ ರಾಷ್ಟ್ರಪತಿ ಅಂಗೀಕಾರ
ನವದೆಹಲಿ, ಏಪ್ರಿಲ್ 06: ಸಂಸತ್ ಅಧಿವೇಶನದಲ್ಲಿ ಕಳೆದ ಮೂರು ದಿನಗಳಿಂದ ಚರ್ಚೆಯಾಗಿದ್ದ, ಸಾಕಷ್ಟು ವಿರೋಧ, ಆಕ್ರೋಶಕ್ಕೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮಹತ್ವದ ಮಸೂದೆ 'ವಕ್ಫ್ (ತಿದ್ದುಪಡಿ) ಮಸೂದೆ 2025' ಗೆ ರಾಷ್ಟ್ರಪ್ರತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಮಂಡಿಸಲ್ಪಟ್ಟ ಬಳಿಕ ವಿಪಕ್ಷಗಳು, ಮುಸ್ಲಿಮರು ಟೀಕಿಸಿದ್ದರು. ದೇಶವ್ಯಾಪಿ ಹೋರಾಟಗಳು ನಡೆದವು. ಈ ಮಧ್ಯೆ ಏಪ್ರಿಲ್ 5ರಂದು ರಾಷ್ಟ್ರಪತಿಗಳು ಈ ವಕ್ಫ್ ಮಸೂದೆಗೆ ಒಪ್ಪಿಗೆ ನೀಡಿದ್ದು, ರಾಷ್ಟ್ರದಲ್ಲಿ ಹೊಸ ಕಾನೂನು ಜಾರಿಯಾಗಿದೆ.
ರಾಷ್ಟ್ರಪತಿಗಳು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಂತಿಮ ಮುದ್ರೆ ಹಾಕಿದ್ದನ್ನು ಕರ್ನಾಟಕ ಬಿಜೆಪಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಇದು ಸಬ್ ಕಾ ವಿಕಾಸ್ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇತ್ತ ವಿಪಕ್ಷಗಳ ಆಕ್ರೋಶ ಮುಂದುವರಿದಿದೆ. ಇಂದಿನಿಂದ ವಕ್ಟ್ ಕಾನೂನು ಭಾರತಾದ್ಯಂತ ಜಾರಿಯಾಗಿದೆ.

ರಾಜ್ಯ ಸಭೆ ಮತ್ತು ಲೋಕಸಭೆಯಲ್ಲಿ ಕಳೆದ ಮೂರು ದಿನಗಳಿಂದ ಈ ಬಗ್ಗೆ ಪರ ವಿರೋಧ ಚರ್ಚೆ ನಡೆದಿತ್ತು. ವಕ್ಫ್ ಬಿಲ್ ಕಾನೂನು ಜಾರಿಯಾದರೆ ಮುಸ್ಲಿಮರಿಗೆ ಅನ್ಯಾಯ ಮಾಡದಂತೆ ಎಂದು ಕಾಂಗ್ರೆಸ್, ಎಎಪಿ, ಇಂಡಿಯಾ ಮೈತ್ರಿಕೂಟದ ನಾಯಕರು ವಿರೋಧಿಸಿದ್ದರು.
ಕಾನೂನು ಸಚಿವಾಲಯ ಶನಿವಾರ ಹೊರಡಿಸಿದ ಅಧಿಸೂಚನೆಯ ಅನ್ವಯ ಶನಿವಾರವೇ ರಾಷ್ಟ್ರಪತಿಗಳು ವಕ್ಫ್ (ತಿದ್ದುಪಡಿ) ಮಸೂದೆಗೆ ತಮ್ಮ ಒಪ್ಪಿಗೆ ನೀಡಿದ್ದಾರೆ. ಸಂಸತ್ತಿನಲ್ಲಿ ಮಸೂದೆ ಅಂಗೀಕಾರವಾಗಿದೆ. ಇದನ್ನು ರದ್ದುಗೊಳಿಸುವಂತೆ AIMIM ಅಸ್ಸಾವುದ್ದೀನ ಓವೈಸಿ, ಎಎಪಿ ಆಗ್ರಹಿಸಿದೆ. ಇದರ ಬೆನ್ನಲ್ಲೆ ಕೇಂದ್ರದ ಹೊಸ ಕಾನೂನು ವಿರುದ್ಧ ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕ್ಫ್ ಮಸೂದೆ ವಿರುದ್ಧ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಿದೆ.
The Waqf (Amendment) Bill, 2025 has received the President's assent and is now an Act.
— BJP Karnataka (@BJP4Karnataka) April 6, 2025
Sabka Saath, Sabka Vikas, Looteron ka Satyanaash!#WaqfAct2025 pic.twitter.com/jqHnx2t0S0
ವಕ್ಫ್ ಮಂಡಳಿ ಭೂ ಕಬಳಿಕೆ, ಪರಮಾಧಿಕಾರಕ್ಕೆ ಬ್ರೇಕ್
ವಕ್ಫ್ ಮಂಡಳಿಯಿಂದ ಎಲ್ಲೆಂದರಲ್ಲಿ ಜಮೀನು, ಭೂಮಿ ಕಳಬಳಿಕೆಗೆ ಬ್ರೇಕ್ ಹಾಕಲು, ವಕ್ಫ್ ಬೋರ್ಡ್ಗೆ ಇದ್ದ ಪರಮಾಧಿಕಾರ ನಿಯಂತ್ರಿಸಲು ಹಾಗೂ ಮಂಡಳಿಯಲ್ಲಿ ಬಡವರು, ಮಧ್ಯಮ ವರ್ಗದವರಿಗೂ ಅವಕಾಶ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಈ ಹೊಸ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತಂದಿದೆ.

ಮಹತ್ವ ಗುರಿ ಉದ್ದೇಶದಿಂದ ಈ ಬಿಲ್ ಇಂದಿನಿಂದ ಜಾರಿಯಾಗಿದೆ. ದೇಶಾದ್ಯಂತ ವಕ್ಫ್ ಮಂಡಳಿ ವಿರುದ್ಧ ಕಾನೂನು ಜಾರಿಯಾಗಿದೆ ಎಂದು ಕರ್ನಾಟಕ ಬಿಜೆಪಿ ದ್ರೌಪದಿ ಮುರ್ಮು ಅವರಿಗೆ ಮತ್ತು ಕೇಂದ್ರ ನಾಯಕರಿಗೆ ಅಭಿನಂದನೆ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications