ಟಿಮೋರ್ ಕರಾವಳಿಯಲ್ಲಿ ಭೂಕಂಪ: ಸುನಾಮಿ ಎಚ್ಚರಿಕೆ
ನವದೆಹಲಿ ಮೇ 27: ಪೂರ್ವ ಟಿಮೋರ್ ಕರಾವಳಿಯಲ್ಲಿ ಶುಕ್ರವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಜಿಯೊಲಾಜಿಕಲ್ ಸರ್ವೆ ಹೇಳಿದ್ದು, ಹಿಂದೂ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆಯನ್ನೂ ನೀಡಿದೆ.
ಭೂ ಕಂಪದ ತೀವ್ರತೆಯು ಹಿಂದೂ ಮಹಾಸಾಗರದ ಪ್ರದೇಶದ ಮೇಲೆ ಪರಿಣಾಮ ಬೀರಲಿದ್ದು, ಭಾರೀ ಪ್ರಮಾಣದ ಅಲೆಗಳು ಸುನಾಮಿಯನ್ನು ಉಂಟುಮಾಡಬಹುದು ಎಂದು ಮುನ್ನೆಚ್ಚರಿಕೆ ನೀಡಿದೆ.
ಟಿಮೋರ್ ದ್ವೀದಪ ಪೂರ್ವ ಆರಂಭದಿಂದ 51.4 ಕಿಲೋ ಮೀಟರ್ ಆಳದಲ್ಲಿ ಭೂ ಕಂಪ ಸಂಭವಿಸಿದೆ ಎಂದು ಅಮೆರಿಕ ಜಿಯಾಲಾಜಿಕಲ್ ಸರ್ವೆ ಹೇಳಿದೆ. ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ಭೂಕಂಪನ ಕೇಂದ್ರಬಿಂದುವಾಗಿದ್ದು. ಹಿಂದೂ ಮಹಾಸಾಗರದಲ್ಲಿ ಸುನಾಮಿ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಸ್ಥಳೀಯರೊಬ್ಬರು ಹೇಳಿದ ಪ್ರಕಾರ "ಭೂಕಂಪನದ ಅನುಭವ ನಮಗೆ ಆಯಿತು, ಆದರೆ ಅದು ತುಂಬಾ ಸಮಯ ಇರಲಿಲ್ಲ, ಆದರೆ ಸದ್ಯಕ್ಕೆ ಯಾವುದೇ ಹಾನಿಯಾಗಿಲ್ಲ, ಸಾರ್ವಜನಿಕರು ಎಂದಿನಂತೆ ದೈನಂದಿನ ಚಟುವಟಿಕೆಯಲ್ಲಿ ತೊಡಗಿದ್ದಾರೆ" ಎಂದು ಹೇಳಿದರು.
ರಿಂಗ್ ಆಫ್ ಫೈರ್; ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ಪೆಸಿಫಿಕ್ ಸಾಗರದ "ರಿಂಗ್ ಆಫ್ ಫೈರ್" ಪ್ರದೇಶದಲ್ಲಿ ಇವೆ, ರಿಂಗ್ ಆಫ್ ಫೈರ್ ಪ್ರದೇಶದಲ್ಲಿ ಜ್ವಾಲಾಮುಖಿಯಂತಹ ಘಟನೆ ಸಾಮಾನ್ಯವಾಗಿದೆ, ಆಗಾಗ್ಗೆ ಈ ಪ್ರದೇಶದಲ್ಲಿ ಭೂಕಂಪನ ಸಂಭವಿಸುತ್ತಲೇ ಇರುತ್ತದೆ. ಸುಮಾರು 450 ಜ್ವಾಲಾಮುಖಿಗಳು ಈ ಪ್ರದೇಶದಲ್ಲಿದೆ. ಪ್ರಪಂಚದಲ್ಲಿರುವ ಒಟ್ಟು ಜ್ವಾಲಾಮುಖಿಗಳ ಪೈಕಿ ಶೇ.75 ರಷ್ಟು ರಿಂಗ್ ಆಫ್ ಫೈರ್ ಪ್ರದೇಶದಲ್ಲಿವೆ.
ಪೂರ್ವ ಟಿಮೋರ್ 13 ಲಕ್ಷ ಜನಸಂಖ್ಯೆಯನ್ನು ಹೊಂದಿದೆ ಮತ್ತು ಆಗ್ನೇಯ ಏಷ್ಯಾದ ಚಿಕ್ಕ ದೇಶವಾಗಿದೆ, ಇತ್ತೀಚೆಗೆ ಸ್ವಾತಂತ್ರ್ಯದ 20 ನೇ ವಾರ್ಷಿಕೋತ್ಸವವನ್ನು ಆಚರಿಸಿದೆ.

ಫೆಬ್ರವರಿಯಲ್ಲಿ, ನೆರೆಯ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ 6.2 ತೀವ್ರತೆಯ ಭೂಕಂಪವು 12 ಜನರ ಸಾವಿಗೆ ಕಾರಣವಾಗಿತ್ತು. 2004 ರಲ್ಲಿ ಸಂಭವಿಸಿದ 9.1-ತೀವ್ರತೆಯ ಭೂಕಂಪದಿಂದ ಸುಮಾತ್ರಾ ಕರಾವಳಿಯನ್ನು ಅಪ್ಪಳಿಸಿದ ಸುನಾಮಿ ಇಂಡೋನೇಷ್ಯಾದಲ್ಲಿ ಸುಮಾರು 1,70,000 ಸೇರಿದಂತೆ ಪ್ರದೇಶದಾದ್ಯಂತ 2,20,000 ಜನರನ್ನು ಬಲಿ ಪಡೆದಿತ್ತು.
2018ರಲ್ಲಿ ಲಾಂಬೋಕ್ ದ್ವೀಪದಲ್ಲಿ ಪ್ರಬಲ ಭೂಕಂಪನ ಉಂಟಾಗಿತ್ತು. ಅದರ ಬಳಿಕ ಹಲವು ವಾರಗಳ ಕಾಲ ನಿರಂತರ ಕಂಪನಗಳಾಗಿದ್ದವು. ಇದರಿಂದ ಲಾಂಬೋಕ್ ದ್ವೀಪ ಮತ್ತು ನೆರೆಯ ಸುಂಬಾವಾದಲ್ಲಿ 550ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications