Earthquake: ದೆಹಲಿ & ರಷ್ಯಾದಲ್ಲಿ ತೀವ್ರ ಭೂಕಂಪ, ಸರಣಿ ಕಂಪನಗಳಿಂದ ಜನರಲ್ಲಿ ಭಯ
ನವದೆಹಲಿ, ಜುಲೈ 22: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆಲವೇ ದಿನಗಳಲ್ಲಿ ಮೇಲಿಂದ ಮೇಲೆ ಭೂಕಂಪನ ಎದುರಿಸುವಂತಾಗಿದೆ. ಇಂದು ಮಂಗಳವಾರ (ಜುಲೈ 22) ಬೆಳಗ್ಗೆ 6 ಗಂಟೆಗೆ ಭೂಕಂಪ ಸಂಪವಿಸಿದೆ. ಹರಿಯಾಣದ ಫರಿದಾಬಾದ್ನಲ್ಲಿ 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ದೆಹಲಿ-ಎನ್ಸಿಆರ್ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಭೂಕಂಪದ ತೀವ್ರತೆ ಆಳವು ಅಕ್ಷಾಂಶ, 28.29 ಡಿಗ್ರಿ ಉತ್ತರ ಮತ್ತು 72.21 ಡಿಗ್ರಿ ಪೂರ್ವ ರೇಖಾಂಶದಲ್ಲಿ ಮೇಲ್ಮೈಯಿಂದ 5 ಕಿ.ಮೀ ಆಳದಲ್ಲಿತ್ತು ಎಂದು ವರದಿ ಆಗಿದೆ. ಸದ್ಯ ಈ ಲಘು ಭೂಕಂಪನದಲ್ಲಿ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ದೆಹಲಿ ವ್ಯಾಪ್ತಿಯಲ್ಲಿ ಕಳೆದ ಕೆಲವು ವಾರಗಳಲ್ಲಿ ಸರಣಿ ಭೂಕಂಪಗಳು ಸಂಭವಿಸಿವೆ. ಮನೆಯಿಂದ ಹೊರ ಓಡಿ ಬಂದ ನಿವಾಸಿಗಳಲ್ಲಿ ಭಯ ಮನೆ ಮಾಡಿದೆ. ಇದೇ ತಿಂಗಳ ಜುಲೈ 10 ಮತ್ತು 11 ರಂದು ದೆಹಲಿಯ ಹೊರಗೆ ಹರಿಯಾಣದ ಜಜ್ಜರ್ ನಲ್ಲಿ ಭಾರೀ ಭೂಕಂಪನವಾಗಿದೆ. ತೀವ್ರತೆ ಹೆಚ್ಚಿತ್ತು. ಆಗಲೂ ಜನರು ಭಯಭೀತರಾಗಿದ್ದರು.
ಇನ್ನೂ ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಕರಾವಳಿ ಭಾಗದಲ್ಲಿ ಇಂದು ಬೆಳಗ್ಗೆ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ವರದಿ ಮಾಡಿದೆ. ವಿವಿಧೆಡೆ ಘಟಿಸಿದ ಈ ಭೂಕಂಪ ಘಟನೆಗಳು ಜನರನ್ನು ಬೆಚ್ಚಿ ಬೀಳಿಸಿವೆ.
ನೆನ್ನೆ ಸೋಮವಾರ ಜುಲೈ 21 ರಂದು ಬೆಳಗ್ಗೆ ಕಣಿವೆ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಸಹ ಭೂಕಂಪ ಸಂಭವಿಸಿದೆ. ಇಲ್ಲಿ ಯಾವುದೇ ಜೀವಹಾನಿ ಆಗಿಲ್ಲ. ಆಸ್ತಿಪಾಸ್ತಿಗೆ ನಷ್ಟವಾಗಿಲ್ಲ. ಕೇವಲ ಭೂಮಿ ಕಂಪನಿಸಿದ ಅನುಭವವಾಗಿದೆ. ತಡರಾತ್ರಿ ಕಿಶ್ತ್ವಾರ್ ಸಮೀಪ 3.1 ತೀವ್ರತೆಯ ಭೂಕಂಪ ಆಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಕಳೆದ ಕೆಲವು ದಿನಗಳ ಅಂತರದಲ್ಲಿ ಹರಿಯಾದ, ದೆಹಲಿ, ಜಮ್ಮು ಕಾಶ್ಮೀರ ಹೀಗೆ ವಿವಿಧೆಡೆ ಘಟಿಸಿದ ಸರಣಿ ಭೂಮಿ ಕಂಪನಗಳಿಂದ ಉತ್ತರ ಭಾರತೀಯರಲ್ಲಿ ಜೀವ ಭಯ ಕಾಡುತ್ತಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications