ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪ, No ಸುನಾಮಿ ಅಲರ್ಟ್
ಪೋರ್ಟ್ ಬ್ಲೇರ್, ಏಪ್ರಿಲ್ 10: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾನುವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.9ರಷ್ಟು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ವರದಿಗಳು ಬಂದಿಲ್ಲ.
ಭಾನುವಾರ ಬೆಳಗ್ಗೆ 7.02ರ ಸುಮಾರಿಗೆ ಕಂಪನ ಕಂಡು ಬಂದಿದೆ. ಸದ್ಯಕ್ಕೆ ಯಾವುದೇ ಸುನಾಮಿ ಅಲರ್ಟ್ ನೀಡಲಾಗಿಲ್ಲ. ಭೂಕಂಪದ ತೀವ್ರತೆ:4.9 ಎಂದು ರಿಕ್ಟರ್ ಮಾಪಕ ಸೂಚಿಸಿದೆ.
ಸಮಯ ಸುಮಾರು 07:02:26 IST, ಅಕ್ಷಾಂಶ: 7.50 & ರೇಖಾಂಶ: 94.31, ಆಳ: 10 ಕಿಮೀ ,ಸ್ಥಳ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕ್ಯಾಂಪ್ಬೆಲ್ ಬೇ ಇಂದ 70ಕಿಮೀ ಈಶಾನ್ಯಕ್ಕೆ ಸಂಭವಿಸಿದೆ.

ಇತ್ತೀಚೆಗೆ ಪೋರ್ಟ್ಬ್ಲೇರ್ನ ಆಗ್ನೇಯ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಕ್ಕೂ ಮುನ್ನ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉತ್ತರ-ವಾಯುವ್ಯಕ್ಕೆ 276 ಕಿಮೀ ದೂರದಲ್ಲಿರುವ ದಿಗ್ಲಿಪುರ್ ಬಳಿ ಕಂಪನದ ಅನುಭವವಾಗಿತ್ತು.
Earthquake of Magnitude:4.9, Occurred on 10-04-2022, 07:02:26 IST, Lat: 7.50 & Long: 94.31, Depth: 10 Km ,Location: 70km NE of Campbell Bay, Andaman and Nicobar island, India for more information Download the BhooKamp App https://t.co/5qRtopE3Po@Indiametdept @ndmaindia pic.twitter.com/jBWiFrDYyR
— National Center for Seismology (@NCS_Earthquake) April 10, 2022
ಭೂಕಂಪದ ಕೇಂದ್ರಬಿಂದು 15.66 ಅಕ್ಷಾಂಶ ಮತ್ತು 92.30 ರೇಖಾಂಶದಲ್ಲಿ 39 ಕಿ.ಮೀ ಆಳದಲ್ಲಿತ್ತು. ಮಾರ್ಚ್ 13 ರಂದು, ಭಾನುವಾರ ದ್ವೀಪಗಳಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ದಿಗ್ಲಿಪುರದ 25 ಕಿಮೀ ದೂರದಲ್ಲಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications