Breaking: ದೆಹಲಿಯಲ್ಲಿ ಭೂಕಂಪನ; ಮನೆಯಿಂದ ಓಡಿಬಂದ ಜನ!
ನವದೆಹಲಿ, ನವೆಂಬರ್ 12: ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಕೆಲವು ನಗರಗಳಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪಿಸಿದಂತೆ ಭಾಸವಾಗುತ್ತಿದ್ದಂತೆ ಜನರು ಮನೆಗಳು ಹಾಗೂ ಕಚೇರಿಗಳಿಂದ ಹೊರ ಓಡಿ ಬಂದಿದ್ದಾರೆ ಎಂದು ವರದಿಯಾಗಿದೆ.
ಕಳೆದೊಂದು ವಾರದಲ್ಲಿ ನವದೆಹಲಿಯಲ್ಲಿ ಈ ರೀತಿಯ ಭೂಕಂಪನದ ಅನುಭವ ಎರಡನೇ ಬಾರಿ ಆಗುತ್ತಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಿದೆ ಎಂದು ದೂರದರ್ಶನ ಸಾರ್ವಜನಿಕ ಪ್ರಸಾರಕ ವರದಿ ಮಾಡಿದೆ.
ಇದೇ ವಾರದ ಆರಂಭದಲ್ಲಿ ದೆಹಲಿ ಪ್ರದೇಶದಲ್ಲಿ ಅನುಭವಿಸಿದ ಭೂಕಂಪದ ತೀವ್ರತೆಗಿಂತ ಕಡಿಮೆಯಾಗಿದೆ. ಈ ಭೂಕಂಪನದ ಆಳ ಮತ್ತೆ ಭೂಮಿಯ ಮೇಲ್ಮೈಯಿಂದ 10 ಕಿಲೋ ಮೀಟರ್ ಕೆಳಗಿರುವ ಬಗ್ಗೆ ವರದಿಯಲ್ಲಿ ಹೇಳಲಾಗಿದೆ. ನೋಯ್ಡಾ ಮತ್ತು ಗುರುಗ್ರಾಮದಲ್ಲಿ ಭೂಕಂಪನದ ಅನುಭವ ಆಗಿರುವ ಬಗ್ಗೆ ವರದಿಯಾಗಿವೆ.

ಬುಧವಾರವೂ ದೆಹಲಿಯಲ್ಲಿ ನಡುಗಿದ ಭೂಮಿ:
ಬುಧವಾರ ನಸುಕಿನ ವೇಳೆ ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತು. ಇದರ ಬೆನ್ನಲ್ಲೇ ದೆಹಲಿ-ಎನ್ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಯಿತು. ಬುಧವಾರ ನಸುಕಿನ 1.57ರ ಸುಮಾರಿಗೆ ಭೂಕಂಪ ಸಂಭವಿಸಿತು, ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಪ್ರಕಾರ ನೇಪಾಳ ಭೂಕಂಪದ ಕೇಂದ್ರಬಿಂದುವಾಗಿತ್ತು.
ನೇಪಾಳದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದ್ದು, ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಮಾಹಿತಿಯ ಪ್ರಕಾರ, ನೇಪಾಳದಲ್ಲಿ ಮಂಗಳವಾರ ರಾತ್ರಿ 8.52 ಕ್ಕೆ 4.9 ತೀವ್ರತೆಯ ಮೊದಲ ಭೂಕಂಪವಾಗಿತ್ತು. ನಂತರ 9.41 ಕ್ಕೆ 3.5 ತೀವ್ರತೆಯ ಭೂಕಂಪ ದಾಖಲಾಯಿತು. ಬುಧವಾರ ಮುಂಜಾನೆ 1.57ಕ್ಕೆ 6.3 ತೀವ್ರತೆಯ ಮೂರನೇ ಭೂಕಂಪನ ಸಂಭವಿಸಿದ್ದು, ಇದರ ಕಂಪನವು ದೆಹಲಿಯಲ್ಲಿ ಅನುಭವವಾಯಿತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications