Earthquake: ಬೆಳ್ಳಂಬೆಳಗ್ಗೆ ಅಂಡಮಾನ್ & ನಿಕೋಬಾರ್ ದ್ವೀಪಗಳಲ್ಲಿ ಭಾರೀ ಭೂಕಂಪ!
ದೆಹಲಿ, ಜುಲೈ 29: ಇಂದು ಮಂಗಳವಾರ (ಜುಲೈ 29) ಬೆಳ್ಳಂಬೆಳಗ್ಗೆ ಅಂದರೆ ತಡರಾತ್ರಿ 12:11 ಗಂಟೆಗೆ ಬಂಗಾಳಕೊಲ್ಲಿಯ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪದ ಮಧ್ಯ 6.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಈ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಅಧಿಕೃತಿ ಮಾಹಿತಿ ನೀಡಿದೆ.
ಈ ಭೂಕಂಪವು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂಬುದು ಗೊತ್ತಾಗಿದೆ. ಭೂಕಂಪನದ ಕೇಂದ್ರಬಿಂದು 6.82° ಉತ್ತರ ಅಕ್ಷಾಂಶ ಮತ್ತು 93.37° ಪೂರ್ವ ರೇಖಾಂಶದಲ್ಲಿದೆ. ಅದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕ್ಯಾಂಪ್ಬೆಲ್ ಕೊಲ್ಲಿಯ ಪಶ್ಚಿಮಕ್ಕೆ 62 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಜ್ಞರು ಮಾಹಿತಿ ನೀಡಿದ್ದಾರೆ.

ಇಂದಿನ ಈ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಹಾನಿ ಆದ ಬಗ್ಗೆ ವರದಿ ಆಗಿಲ್ಲ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (GFZ) ಅನ್ನು ಉಲ್ಲೇಖಿಸಿ ರಾಯಿಟರ್ಸ್ನ ವರದಿಯಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಮೊನ್ನೆಯಷ್ಟೇ ಶುಕ್ರವಾರ ಅಂಡಮಾನ್ ಸಮುದ್ರದಲ್ಲಿ 4.9 ತೀವ್ರತೆಯ ಭೂಕಂಪ ಉಂಟಾಗಿತ್ತು. ಅದರ ಬೆನ್ನಲ್ಲೆ ಇಂದು ಮತ್ತೆ ಭೂಕಂಪವಾಗಿದೆ. ಮೊನ್ನೆಯ ಭೂಕಂಪನವು ಅಂಡಮಾನ್ ಸಮುದ್ರದ ಮಧ್ಯದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ದಾಖಲಾಗಿದೆ. ಸಂಜೆ 6.44 ಗಂಟೆಗೆ ಈ ಘಟನೆ ನಡೆದಿತ್ತು ಎಂದು ತಿಳಿಸಲಾಗಿದೆ.
ಅದೇ ರೀತಿ ನೆನ್ನೆ ಸೋಮವಾರ ರಾತ್ರಿ ಉತ್ತರ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಅರುಣಾಚಲ ಪ್ರದೇಶದ ತಿರಪ್ ಜಿಲ್ಲೆಯಲ್ಲಿ ಸಂಜೆ 6.36 ಕ್ಕೆ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಇತ್ತೀಚೆಗೆ ದೆಹಲಿ ಎನ್ಸಿಆರ್ನಲ್ಲಿ ಸರಣಿ ಭೂಮಿ ಕಂಪಿಸಿದ್ದವು. ಅದರ ಬೆನ್ನಲ್ಲೆ ದೇಶದ ಬೇರೆ ಬೇರೆ ಕಡೆಗಳಲ್ಲಿ ಭೂಕಂಪನಗಳು ಮೇಲಿಂದ ಮೇಲೆ ವರದಿ ಆಗುತ್ತಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications