Breaking: ಉತ್ತರ ಕಾರ್ಗಿಲ್ನಲ್ಲಿ 4.3 ತೀವ್ರತೆ ಭೂಕಂಪ
ಕಾರ್ಗಿಲ್, ನವೆಂಬರ್ 22: ಕಣಿವೆ ರಾಜ್ಯದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ. ಮಂಗಳವಾರ ಜಮ್ಮು-ಕಾಶ್ಮೀರದಲ್ಲಿ ಭೂಮಿ ಕಂಪಿಸಿರುವ ಅನುಭವ ಆಗಿದೆ. ಉತ್ತರ ಕಾರ್ಗಿಲ್ನಲ್ಲಿ ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ.
ಮಂಗಳವಾರ ಲಡಾಖ್ನಲ್ಲಿ ಉತ್ತರ ಭಾಗದಲ್ಲಿರುವ ಕಾರ್ಗಿಲ್ನಲ್ಲಿ ಭೂಕಂಪನ ಸಂಭವಿಸಿದೆ. ಬೆಳಗ್ಗೆ 10 ಗಂಟೆ 5 ನಿಮಿಷಕ್ಕೆ ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ.
ಭೂಕಂಪನದ ಕೇಂದ್ರ ಬಿಂದು ಲಡಾಖ್ನ ಕಾರ್ಗಿಲ್ನಿಂದ ಉತ್ತರಕ್ಕೆ 191 ಕಿಲೋ ಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರವು ಮಾಹಿತಿ ನೀಡಿದೆ.

ಮಂಗಳವಾರ ಬೆಳಗ್ಗೆ 7 ಗಂಟೆಗೆ ಸೊಲೊಮನ್ ದ್ವೀಪದಲ್ಲಿ ಕಂಪನ:
ಮಂಗಳವಾರ ಬೆಳಗ್ಗೆ 7 ಗಂಟೆ 33 ನಿಮಿಷಕ್ಕೆ ಸೊಲೊಮನ್ ದ್ವೀಪಗಳ ಮಲಂಗೋ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾದಕದಲ್ಲಿ ಭೂಕಂಪನದ ತೀವ್ರತೆಯು 7.0ರಷ್ಟು ದಾಖಲಾಗಿತ್ತು. 7.0 ತೀವ್ರತೆಯ ಭೂಕಂಪದ ನಂತರ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಪೆಸಿಫಿಕ್ ಎಚ್ಚರಿಕೆ ಕೇಂದ್ರದಿಂದ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಎಎಫ್ಪಿ ವರದಿ ಮಾಡಿದೆ.
ಇಂಡೋನೆಷ್ಯಾದಲ್ಲಿ ಭೂಕಂಪಕ್ಕೆ 162 ಮಂದಿ ಬಲಿ:
ಸೊಲೊಮನ್ ದ್ವೀಪದಲ್ಲಿ ಇದೀಗ ಸುನಾಮಿ ಎಚ್ಚರಿಕೆಯನ್ನು ನೀಡಲಾಗುತ್ತಿದೆ. ಇನ್ನೊಂದು ಮಗ್ಗಲಿನಲ್ಲಿ ಇಂಡೋನೆಷ್ಯಾದಲ್ಲಿ ಅದೇ ಪ್ರಕೃತಿ ವಿಕೋಪವು ಮರಣ ಮೃದಂಗವನ್ನು ಬಾರಿಸಿದೆ. ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು 162 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿರುವವರ ಹುಡುಕಾಟ ಕಾರ್ಯ ಮುಂದುವರೆದಿದೆ.
ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪ ಪಶ್ಚಿಮ ಜಾವಾದ ಪರ್ವತದ ಸಿಯಾಂಜೂರ್ ಪಟ್ಟಣದ ಸಮೀಪ ಸಂಭವಿಸಿದೆ. ಈ ಪ್ರದೇಶದಲ್ಲಿ 2.5 ದಶಲಕ್ಷಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಭೂಕಂಪದ ಬಳಿಕ, ಪಶ್ಚಿಮ ಜಾವಾ ಗವರ್ನರ್ ರಿದ್ವಾನ್ ಕಾಮಿಲ್ ಇನ್ಸ್ಟಾಗ್ರಾಮ್ನಲ್ಲಿ 162 ಜನರು ಸಾವನ್ನಪ್ಪಿದ್ದಾರೆ ಮತ್ತು 326 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಭೂಕಂಪದಿಂದ ಹಲವು ಕಟ್ಟಡಗಳು ಕುಸಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ರಿದ್ವಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications