ದೆಹಲಿ ಸೇರಿದಂತೆ ಉತ್ತರ ಭಾರತದ ಹಲೆವೆಡೆ ಭೂಕಂಪ
ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಸೋಮವಾರ ರಾತ್ರಿ ಭೂಕಂಪದ ಅನುಭವವಾಗಿದೆ. ದೆಹಲಿ, ನೋಯ್ಡಾ, ಉತ್ತರಾಖಂಡ್ ಸೇರಿದಂತೆ ಹಲವೆಡೆ 30 ಸೆಕೆಂಡುಗಳಿಗೂ ಅಧಿಕ ಕಾಲ ಭೂಮಿ ಕಂಪಿಸಿದೆ.
ನವದೆಹಲಿ, ಫೆಬ್ರವರಿ 06: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಸೋಮವಾರ ರಾತ್ರಿ ಭೂಕಂಪದ ಅನುಭವವಾಗಿದೆ. ದೆಹಲಿ, ನೋಯ್ಡಾ, ಉತ್ತರಾಖಂಡ್ ಸೇರಿದಂತೆ ಹಲವೆಡೆ 30 ಸೆಕೆಂಡುಗಳಿಗೂ ಅಧಿಕ ಕಾಲ ಭೂಮಿ ಕಂಪಿಸಿದೆ.
ಸೋಮವಾರ ರಾತ್ರಿ 10.35 ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ಉತ್ತರಾಖಂಡ್ ನ ರುದ್ರ ಪ್ರಯಾಗ ಭೂಕಂಪನ ಕೇಂದ್ರ ಬಿಂದುವಾಗಿದ್ದು, ರಿಕ್ಚರ್ ಮಾಪಕದಲ್ಲಿ 5.8ರಷ್ಟು ಪ್ರಮಾಣ ದಾಖಲಾಗಿದೆ.

ಹರ್ಯಾಣ, ಪಂಜಾಬ್, ಉತ್ತರಪ್ರದೇಶ, ಹಿಮಾಚಲಪ್ರದೇಶ, ಎನ್ ಸಿಆರ್ ಪ್ರದೇಶಗಳಲ್ಲಿ ಭೂ ಕಂಪನದ ಅನುಭವವಾಗಿದೆ. ಮನೆಯಲ್ಲಿದ್ದವರು ಹೊರಗಡೆ ಬಂದು ಆತಂಕದಿಂದ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂದಿದೆ.
Earthquake tremors felt in Uttarakhand, people evacuated their buildings (Visuals from Dehradun) pic.twitter.com/WIiDo5wJz9
— ANI (@ANI_news) February 6, 2017
ಇನ್ನಷ್ಟು ಭೂಕಂಪದ ಎಚ್ಚರಿಕೆ: ಇದು ರಿಕ್ಟರ್ ಮಾಪಕದಲ್ಲಿ 6 ರಿಂದ 8ರ ತನಕದ ಭೂಕಂಪ ಹಿಮಾಲಯ ಭಾಗದಲ್ಲಿ ಸಂಭವಿಸುವ ಸಾಧ್ಯತೆಯಿದೆ. ಭೂಗರ್ಭಶಾಸ್ತ್ರಜ್ಞ ಎಚ್ಎಸ್ ಎಂ ಪ್ರಕಾಶ್ ಅವರು ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡುತ್ತಾ ಹೇಳಿದರು. ಹಿಮಾಲಯದ ನೇಪಾಳ, ಕಾಶ್ಮೀರದ ಭಾಗದ ನಂತರ ಉತ್ತರಾಖಂಡ್ ನಲ್ಲಿ ಭೂಕಂಪವನ್ನು ನಿರೀಕ್ಷಿಸಲಾಗಿತ್ತು ಎಂದಿದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications