ಚುನಾವಣಾ ಅಕ್ರಮ ತಡೆಯಲು ಶುರುವಾದ cVIGIL ಆ್ಯಪ್ ಕುರಿತು ಮಾಹಿತಿ
ನವದೆಹಲಿ, ಜನವರಿ 08: ಚುನಾವಣಾ ಸಂದರ್ಭದಲ್ಲಿ ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಕೇಂದ್ರ ಚುನಾವಣಾ ಆಯೋಗವು ಸಿ-ವಿಜಿಲ್(cVIGIL) ಆ್ಯಪ್ ಬಿಡುಗಡೆ ಮಾಡಿದೆ.
ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ರೆಡ್ ಹ್ಯಾಂಡ್ ಆಗಿ ಅಕ್ರಮವನ್ನು ತಮ್ಮ ಮೊಬೈಲ್ಗಳಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿ ಇಡುವ ಭರವಸೆಯನ್ನು ಕೂಡ ನೀಡಿದೆ.
ಸಿವಿಜಿಲ್ ಅಪ್ಲಿಕೇಷನ್ ಬಳಕೆ ಹೇಗೆ?
ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಸಿ-ವಿಜಿಲ್ ಆಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿತ್ತು.
ಸ್ಮಾರ್ಟ್ ಫೋನ್ ನಲ್ಲಿ ಗೂಗಲ್ ಪ್ಲೇ ನಲ್ಲಿ ಸಿ- ವಿಜಿಲ್ ಆಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು ನೀಡಬಹುದು. ಆ್ಯಪ್ನಲ್ಲಿ ತಮ್ಮ ಸ್ವವಿವರ ನೀಡಿಯಾದರೂ, ಅಥವಾ ನೀಡದೆಯೂ ದೂರು ನೀಡಬಹುದು. ಆ್ಯಪ್ನಲ್ಲಿ ತಿಳಿಸಿದ 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಸೆಂಡ್ ಮಾಡಬಹುದು.

ಇಷ್ಟು ದಿನ ಆಯೋಗವೇ ವಿವಿಧ ತಂಡಗಳನ್ನು ರಚಿಸಿ ಚುನಾವಣಾ ಅಕ್ರಮಗಳನ್ನು ತಡೆಯಲು ಪ್ರಯತ್ನ ಮಾಡುತ್ತಿತ್ತು. ಆದರೆ ಈ ಬಾರಿ ಮೊಬೈಲ್ ಆ್ಯಪ್ ಮೂಲಕ ನೇರವಾಗಿ ದೂರು ನೀಡಲು ಸಾರ್ವಜನಿಕರಿಗೆ ಅಧಿಕಾರ ನೀಡಿದೆ. ಆದ್ರೆ ಈ ಅಂಡ್ರಾಯ್ಡ್ ಆಪ್ ಸಂಪೂರ್ಣವಾಗಿ ಹಿಂದಿ- ಇಂಗ್ಲೀಷ್ ನಲ್ಲಿದ್ದು, ಕನ್ನಡದಲ್ಲಿ ಇಲ್ಲದಿರೋದು, ಆಪ್ ಬಳಕೆ ಬಗ್ಗೆ ಹೆಚ್ಚಿನ ಜಾಗೃತಿ ಇಲ್ಲದ ಕಾರಣ ರಾಜ್ಯದಲ್ಲಿ ಹೆಚ್ಚಿನವರು ಈ ಆ್ಯಪ್ ಬಳಸುತ್ತಿಲ್ಲ. ಬಳಸುತ್ತಿರುವುದು ಕೆಲವರೇ ಆದರೂ ನಕಲಿ ದೂರುಗಳು ಹೆಚ್ಚಿರುವುದು ವಿಪರ್ಯಾಸವೇ ಸರಿ.
ಚುನಾವಣಾ ಅಕ್ರಮಗಳು ಯಾವುವು?: ಇಂತವರಿಗೆ ಮತ ಕೊಡಿ ಎಂದು ಹಣ, ವಸ್ತು ನೀಡಿ ಆಮಿಷವೊಡ್ಡುವುದು, ಮತದಾರರನ್ನು ಮತಗಟ್ಟೆಗಳಿಗೆ ಕರೆದೊಯ್ಯುವುದು, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸುವುದು, ತಾವು ಹೇಳಿದವರಿಗೆ ಮತ ಕೊಡಬೇಕು ಎಂದು ಹೆಸರಿಸುವುದು, ಮತೀಯ ಭಾವನೆಗಳನ್ನು ಕೆರಳಿಸುವ ಭಾಷಣ, ಬಹಿರಂಗ ಹೇಳಿಕೆ ಕೊಡುವುದು.
ಮಾಧ್ಯಮಗಳಲ್ಲಿ ಒಬ್ಬ ಅಭ್ಯರ್ಥಿಯ ಪರ ಸುದ್ದಿಯ ರೂಪದಲ್ಲಿ ಪ್ರಚಾರ ಮಾಡುವುದು, ಸುಳ್ಳು ಸುದ್ದಿಗಳನ್ನು ಹರಡುವುದು, ಕಟ್ಟಡ ಮುಂತಾದವುಗಳ ಮೇಲೆ ಪ್ರಚಾರ ಸಾಮಗ್ರಿಗಳನ್ನು ಅಂಟಿಸಿ ವಿರೂಪಗೊಳಿಸುವುದು ಇತ್ಯಾದಿ ಚುನಾವಣಾ ಅಕ್ರಮಗಳಾಗಿರುತ್ತದೆ.
ಆಯೋಗ ಏನು ಮಾಡುತ್ತದೆ? ನಾಗರಿಕರು ಅಪ್ಲೋಡ್ ಮಾಡಿದ ದೂರನ್ನು ಮತ್ತು ಅಪ್ಲಿಕೇಷನ್ ಸ್ವಯಂ ದಾಖಲಿಸಿಕೊಳ್ಳುವ ಸ್ಥಳದ ಮಾಹಿತಿಯನ್ನು ಆಧರಿಸಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸ್ಥಳಕ್ಕೆ ಕೇವಲ 15 ನಿಮಿಷಗಳಲ್ಲಿ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ. 30 ನಿಮಿಷಗಳಲ್ಲಿ ಪರಿಶೀಲನಾ ವರದಿಯನ್ನು ಶುನಾವಣಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳ ಗಮನ ಸೆಳೆಯುವರು.
ಕೇವಲ 100 ನಿಮಿಷಗಳಲ್ಲಿ ಎಲ್ಲಾ ಪ್ರಕ್ರಿಯೆ ಮುಗಿದು, ದೂರಿನ ಸ್ಥಿತಿಯ ಬಗ್ಗೆ ಅಧಿಕಾರಿಗಳು ದೂರುದಾರರಿಗೆ ಮಾಹಿತಿ ನೀಡುತ್ತಾರೆ, ಈಗಾಗಲೇ ದೇಶಾದ್ಯಂತ ಲಕ್ಷಕ್ಕೂ ಅಧಿಕ ನಾಗರಿಕರು ಅಪ್ಲಿಕೇಷನ್ ಡೌನ್ಲೋಡ್ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ಚುನಾವಣೆಯನ್ನು ಪಾರದರ್ಶಕವಾಗಿ ಮುಕ್ತವಾಗಿ ನಡೆಸಬೇಕು ಎಂಬ ಆಯೋಗದ ಆಶಯಕ್ಕೆ ಪ್ರಜೆಗಳು ಸ್ಪಂದಿಸಬೇಕಾಗಿದೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications