ಪಂಚರಾಜ್ಯ ಚುನಾವಣೆಗೆ ವೆಚ್ಚ ನಿಗದಿ ಮಾಡಿದ ಕೇಂದ್ರ ಚುನಾವಣಾ ಆಯೋಗ
ನವದೆಹಲಿ, ಜನವರಿ 08: ಪಂಜರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಅಭ್ಯರ್ಥಿಗಳ ವೆಚ್ಚದ ಮಿತಿಯನ್ನು ನಿಗದಿಗೊಳಿಸಿದೆ.
ಗೋವಾ, ಪಂಜಾಬ್, ಮಣಿಪುರ್, ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ ಘೋಷಿಸಿರುವ ಚುನಾವಣಾ ಆಯೋಗ ಈ ಕುರಿತು ಮತ್ತೊಮ್ಮೆ ಮಾಹಿತಿ ನೀಡಿದೆ.
ಭಾರತೀಯ ಚುನಾವಣಾ ಆಯೋಗವು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿಯನ್ನು ಹೆಚ್ಚಿಸಿದೆ. ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಿರುವ 20 ಲಕ್ಷ ರೂ., ನಿಂದ 28 ಲಕ್ಷ ರೂ ಮತ್ತು 28 ಲಕ್ಷ ರೂ. ನಿಂದ 40 ಲಕ್ಷ ರೂಗೆ ಹೆಚ್ಚಿಸಲಾಗಿದೆ.

ಸಂಸತ್ ಕ್ಷೇತ್ರದಲ್ಲಿ ಮಿತಿಯನ್ನು ಪ್ರಸ್ತುತ ಇರುವ 54 ಲಕ್ಷ ರೂ. ನಿಂದ 70 ಲಕ್ಷ ರೂ. ಗಳಿಗೆ ಹಾಗೂ 70 ಲಕ್ಷದಿಂದ 95 ಲಕ್ಷ ರೂ,ಗಳಿಗೆ ಹೆಚ್ಚಿಸಲಾಗಿದೆ ಎಂದು ಚುನಾವಣಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ.
ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ.
ಕೋವಿಡ್-19 ಸುರಕ್ಷತಾ ಕ್ರಮಗಳ ಹಿನ್ನೆಲೆಯಲ್ಲಿ ಮತದಾನದ ಗಡುವನ್ನು 1 ಗಂಟೆ ಹೆಚ್ಚು ವಿಸ್ತರಿಸಲಾಗಿದೆ. ಹಾಗೂ ರಾಜಕೀಯ ಪಕ್ಷಗಳು ಹೆಚ್ಚು ವರ್ಚ್ಯುಯಲ್ ರ್ಯಾಲಿಗಳತ್ತ ಗಮನ ಹರಿಸಬೇಕೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಚುನಾವಣೆ ಎದುರಿಸಲಿರುವ 5 ರಾಜ್ಯಗಳಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಫೆ.10 ರಿಂದ ಮತದಾನ ಪ್ರಾರಂಭವಾಗಿ ಮಾ.7 ವರೆಗೆ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಮಾ.10 ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
ಪಂಜಾಬ್, ಗೋವಾ, ಉತ್ತರಾಖಂಡ್ ಗಳಲ್ಲಿ ಫೆ.14 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದರೆ, ಮಣಿಪುರದಲ್ಲಿ ಫೆ.27 ರಂದು ಮೊದಲ ಹಂತ ಹಾಗೂ ಮಾ.03 ರಂದು 2 ನೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 7 ಹಂತದ ಚುನಾವಣೆ ನಡೆಯಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 7 ಹಂತಗಳ ಮತದಾನ
-ಫೆ.10 ರಂದು ಮೊದಲ ಹಂತದ ಮತದಾನ
-ಫೆ.14- ದ್ವಿತೀಯ ಹಂತದ ಮತದಾನ
-ಫೆ.20- ತೃತೀಯ ಹಂತ
-ಫೆ.23-4 ನೇ ಹಂತ
-ಫೆ.27-5 ನೇ ಹಂತ
-ಮಾ.3 ರಂದು 6 ನೇ ಹಂತ
-ಮಾ.07- 7 ನೇ ಹಂತ
ಮಾ.10 ರಂದು ಫಲಿತಾಂಶ
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications