ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶರದ್ ಯಾದವ್ ಕೈಯಿಂದ ಜೆಡಿಯು 'ಬಾಣ' ಕಸಿದ ನಿತೀಶ್ ಕುಮಾರ್

By Sachhidananda Acharya
|
Google Oneindia Kannada News

ನವದೆಹಲಿ, ನವೆಂಬರ್ 17: ಬಂಡಾಯ ಜೆಡಿಯು ನಾಯಕ ಶರದ್ ಯಾದವ್ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಚುನಾವಣಾ ಆಯೋಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಣವನ್ನು ನೈಜ ಜೆಡಿಯು ಎಂದು ಪರಿಗಣಿಸಿದ್ದು 'ಬಾಣ'ದ ಗುರುತನ್ನು ಬಳಸಲು ಅನುಮತಿ ನೀಡಿದೆ.

ಇದು ಅಧಿಕೃತ, ಎನ್ ಡಿಎ ಮೈತ್ರಿಕೊಟದೊಳಗೆ ಜೆಡಿಯು ಸೇರ್ಪಡೆಇದು ಅಧಿಕೃತ, ಎನ್ ಡಿಎ ಮೈತ್ರಿಕೊಟದೊಳಗೆ ಜೆಡಿಯು ಸೇರ್ಪಡೆ

ಜೆಡಿಯು ಬಿಹಾರದಲ್ಲಿ ನೋಂದಣಿಗೊಂಡಿರುವ ರಾಜ್ಯ ಪಕ್ಷವಾಗಿದೆ. ನಿತೀಶ್ ಕುಮಾರ್ ತಮ್ಮ ಬಣಕ್ಕೆ ಹೆಚ್ಚಿನ ಶಾಸಕರು ಹಾಗೂ ಪಕ್ಷದ ನ್ಯಾಷನಲ್ ಕೌನ್ಸಿಲ್ ನ ಸದಸ್ಯರ ಬೆಂಬಲ ಇದೆ ಎಂದು ಚುನಾವಣಾ ಆಯೋಗದ ಮುಂದೆ ಸಾಕ್ಷಿ ಸಮೇತ ಸಾಬೀತು ಪಡಿಸಿದ್ದರಿಂದ ಜೆಡಿಯು ಬಿಹಾರ ಸಿಎಂ ಬಣದ ಪಾಲಾಗಿದೆ.

EC recognises Nitish Kumar-led group as JD(U)

ಕೆಲವು ತಿಂಗಳ ಹಿಂದೆ ನಿತೀಶ್ ಕುಮಾರ್ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್.ಜೆ.ಡಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿ ಮುರಿದುಕೊಂಡು ಬಿಜೆಪಿ ಜತೆ ಕೈಜೋಡಿಸಿದ್ದರು. ಇದನ್ನು ಜೆಡಿಯು ಮಾಜಿ ರಾಷ್ಟ್ರಾಧ್ಯಕ್ಷ ಶರದ್ ಯಾದವ್ ವಿರೋಧಿಸಿದ್ದರು.

ತಮ್ಮ ಬಣದ ಜೆಡಿಯು ನೈಜ ಜೆಡಿಯು ಎಂದು ಶರದ್ ಯಾದವ್ ಪ್ರತಿಪಾದಿಸಿದ್ದರು. ಇದೀಗ ನಿತಿಸ್ ಕುಮಾರ್ ನೇತೃತ್ವದ ಜೆಡಿಯು ನಿಜವಾದ ಜೆಡಿಯು ಎಂದು ಚುನಾವಣಾ ಆಯೋಗ ಹೇಳಿದೆ.

English summary
In a setback to Sharad Yadav, the Election Commission today ruled that the group led by Bihar Chief Minister Nitish Kumar is the real Janata Dal (United) and is entitled to use the 'Arrow' poll symbol of the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X