Delhi Election Results 2025: ಬೂತ್ ಮತಗಳ ವಿವರ, 17ಸಿ ಅಪ್ಲೋಡ್ಗೆ EC ನಕಾರ: ಅರವಿಂದ್ ಕೇಜ್ರಿವಾಲ್ ಗರಂ
ದೆಹಲಿ, ಜನವರಿ 08: ದೆಹಲಿ ರಾಜ್ಯ ವಿಧಾನಸಭಾ ಚುಣಾವಣೆ ಮುಗಿದು ಇಂದು ಶನಿವಾರ ಮತ ಎಣಿಕೆ ನಡೆಯುತ್ತಿದೆ. ಆದರೆ ಚುನಾವಣೆ ಆಯೋಗವು ಸಾಕಷ್ಟು ಭಾರಿ ವಿನಂತರಿಸಿದರೂ ಸಹಿತ ಪ್ರತಿ ವಿಧಾನಸಭೆಯಲ್ಲಿ ಪ್ರತಿ ಬೂತ್ಗೆ ಚಲಾವಣೆಯಾದ ಮತಗಳ ಸಂಖ್ಯೆಯನ್ನು ಮತ್ತು ಫಾರ್ಮ್ 17C ಅನ್ನು ಅಪ್ಲೋಡ್ ಮಾಡಲು ನಿರಾಕರಿಸಿದೆ. ಈ ಕುರಿತು ಮಾಜಿ ಸಿಎಂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದ್ದಾರೆ.
ಇಂದು ದೆಹಲಿ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ಇದಕ್ಕ ಮುನ್ನ ಚುನಾವಣೆ ಆಯೋಗವು ಎಎಪಿ ಮನವಿ ನಿರಾಕರಿಸಿದೆ. ಬೂತ್ ಮತಗಳ ಸಂಖ್ಯೆಯ ವಿವರ, ಫಾರ್ಮ್ 17C ಅನ್ನು ಅಪ್ಲೋಡ್ ಮಾಡಬೇಕು. ಆದರೆ ಮಾಡದೇ ನಮ್ಮ ಮನವಿಗೆ ಬೆಲೆ ಕೊಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ಆದ್ದರಿಂದ ಮತಗಳ ಸಂಖ್ಯೆ, ಫಾರ್ಮ್ ಅನ್ನು ಆಮ್ ಆದ್ಮಿ ಪಕ್ಷವು ತನ್ನ ಈ http://transparentelections.in ವೆಬ್ಸೈಟ್ ಅನ್ನು ರಚಿಸಿದೆ. ಇಲ್ಲಿ ದೆಹಲಿಯ ಪ್ರತಿ ವಿಧಾನಸಭೆಯ ಎಲ್ಲಾ ಫಾರ್ಮ್ 17C ಅನ್ನು ಅಪ್ಲೋಡ್ ಮಾಡಲಿದೆ. ಈ ಫಾರ್ಮ್ ಪ್ರತಿ ಬೂತ್ನಲ್ಲಿ ಚಲಾವಣೆಯಾದ ಮತಗಳ ಎಲ್ಲಾ ವಿವರಗಳನ್ನು ಮತದಾರರು, ಸಾರ್ವಜನಿಕರು, ಅಭ್ಯರ್ಥಿಗಳು ನೋಡಬಹುದು ಎಂದು ಅವರು ತಿಳಿಸಿದ್ದಾರೆ.
ಇಂದು ಮತ ಎಣಿಕೆ ನಡೆಯುವ ಎಲ್ಲ ವಿಧಾನಸಭೆ ಮತ್ತು ಪ್ರತಿ ಬೂತ್ ಮತಗಳ ಡೇಟಾವನ್ನು ಕೋಷ್ಟಕ ರೂಪದಲ್ಲಿ ನೀಡುತ್ತೇವೆ. ಇದರಿಂದ ಪ್ರತಿಯೊಬ್ಬ ಮತದಾರರಿಗೆ ಆಯಾ ಬೂತ್ಗಳ ಮಾಹಿತಿ ಲಭ್ಯವಾಗುವಂತೆ ಮಾಡಲಿದ್ದೇವೆ. ಪಾರದರ್ಶಕತೆಯ ಹಿತದೃಷ್ಟಿಯಿಂದ ಚುನಾವಣಾ ಆಯೋಗ ಮಾಡಬೇಕಿದ್ದ ಕೆಲಸ ಮಾಡುತ್ತಿಲ್ಲ. ಹೀಗಾಗಿ ಆಯೋಗದ ನಿರಾಕರಣೆ ಬೆನ್ನಲ್ಲೆ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್ ಅವರು ತಿಳಿಸಿದ್ದಾರೆ.
ಹಿಂದಿನಿಂದಲೇ ಎಎಪಿ, ಕಾಂಗ್ರೆಸ್ ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆಗಳ ವಿರುದ್ಧ ಕಿಡಿ ಕಾರುತ್ತಿವೆ. ದೆಹಲಿ ಚುನಾವಣೆ ವೇಳೆ ಮತ ಯಂತ್ರಗಳ ಕುರಿತು ಆರೋಪಗಳು, ಅನುಮಾನಗಳು ವ್ಯಕ್ತವಾಗಿದ್ದವು. ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೆ ಬೂತ್ ಮತಗಳ ವಿವರ ನೀಡಲು ನಿರಾಕರಿಸಿದೆ ಎಂಬ ಆರೋಪ ಚುನಾವಣೆ ಆಯೋಗದ ವಿರುದ್ಧ ಕೇಳಿ ಬಂದಿದೆ.
ಇಂದು ಶನಿವಾರ ಫೆಬ್ರವರಿ 8ರಂದು ದೆಹಲಿ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ. ಒಟ್ಟು 70 ಕ್ಷೇತ್ರಗಳಿಗೆ ಏಕಕಾಲದಲ್ಲಿ ಕಳೆದ ಬುಧವಾರ ಚುನಾವಣೆ ನಡೆದಿತ್ತು. 699 ಮಂದಿ ಅಭ್ಯರ್ಥಿಗಳು ವಿವಿಧ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ. ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ಪ್ರಕಾರ, ಬಹುತೇಕ ಸಂಸ್ಥೆಗಳು ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಗ್ಗೆ ಅಧಿಕೃತ ಮಾಹಿತಿ ಇಂದು ಗೊತ್ತಾಗಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications