ಲೋಕಸಭಾ ಚುನಾವಣೆ: 2014ಕ್ಕಿಂತ ಮೂರು ಪಟ್ಟು ಹೆಚ್ಚು ಹಣ, ಹೆಂಡ ವಶ
ನವದೆಹಲಿ, ಮೇ 22: ಲೋಕಸಭಾ ಚುನಾವಣೆ 2019 ಮಾರ್ಚ್ 10 ಕ್ಕೆ ಘೋಷಣೆ ಆಗಿತ್ತು, ಅಂದಿನಿಂದಲೇ ದೇಶದಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಿತ್ತು. ಅಲ್ಲಿನಿಂದ ಮತದಾನದ ದಿನದ ವರೆಗೂ ಆಯೋಗವು 3449.12 ಕೋಟಿ ಮೌಲ್ಯದ ಹಣ, ಹೆಂಡ ಮತ್ತು ಇತರೆ ವಸ್ತುಗಳನ್ನು ದೇಶದಾದ್ಯಂತ ವಶಪಡಿಸಿಕೊಂಡಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಈ ಸಾರ್ವತ್ರಿಕ ಚುನಾವಣೆಯಲ್ಲಿ ವಶಪಡಿಸಿಕೊಂಡಿರುವ 3449 ಕೋಟಿ ಮೌಲ್ಯದ ಹಣ, ಹೆಂಡ, ಇತರೆ ವಸ್ತುಗಳು ಕಳೆದ 2014 ರಲ್ಲಿ ವಶಪಡಿಸಿಕೊಂಡಿದ್ದಕ್ಕಿಂತಲೂ ಮೂರು ಪಟ್ಟು ಹೆಚ್ಚು ಎಂದು ಆಯೋಗ ಹೇಳಿದೆ. 2014 ರಲ್ಲಿ ಆಯೋಗವು 1206 ಕೋಟಿ ಮೌಲ್ಯದ ಅಕ್ರಮ ವಸ್ತು, ಹಣ, ಹೆಂಡಗಳನ್ನು ಆಯೋಗ ವಶಪಡಿಸಿಕೊಂಡಿತ್ತು.
ಮಾರ್ಚ್ 10 ರಿಂದ ಮೇ 19 ರವರೆಗೆ ಆಯೋಗವು 839.03 ಕೋಟಿ ನಗದು ಹಣವನ್ನು ವಶಪಡಿಸಿಕೊಂಡಿದೆ. 294.41 ಕೋಟಿ ಮದ್ಯ ವಶಪಡಿಸಿಕೊಂಡಿದೆ. 1270.30 ಕೋಟಿ ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಂಡಿದೆ. 986.76 ಕೋಟಿ ಮೌಲ್ಯದ ಚಿನ್ನಾಭರಣ, ಅಥವಾ ಇನ್ನಿತರೆ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ. 58.56 ಕೋಟಿ ಮೌಲ್ಯದ ಸೀರೆ, ವಾಚು ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾಗಿ ಆಯೋಗ ಹೇಳಿದೆ.

ಕರ್ನಾಕದಲ್ಲಿ 88.20 ಕೋಟಿ ಮೌಲ್ಯದ ಅಕ್ರಮ ಹಣ, ವಸ್ತು ವಶಪಡಿಸಿಕೊಳ್ಳಲಾಗಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು 951.9 ಕೋಟಿ ಮೌಲ್ಯದ ಹಣ, ಹೆಂಡ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಜರಾತ್ನಲ್ಲಿ 55.27 ಕೋಟಿ ಮೌಲ್ಯದ ಅಕ್ರಮ ಪತ್ತೆಯಾಗಿದೆ. ಉತ್ತರ ಪ್ರದೇಶದಲ್ಲಿ 193.7 ಕೋಟಿ ಮೌಲ್ಯದ ಅಕ್ರಮ ಹಣ, ಮದ್ಯ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications