ದೆಹಲಿ, ತಮಿಳುನಾಡು, ಉತ್ತರ ಪ್ರದೇಶ ಚನಾವಣೊತ್ತರ 'ಎಕ್ಸಿಟ್ ಪೋಲ್' ನಿಷೇಧ: ECI
ಬೆಂಗಳೂರು, ಫೆಬ್ರವರಿ 03: ದೆಹಲಿ ವಿಧಾನಸಭಾ ಚುನಾವಣೆ ಹಾಗೂ ತಮಿಳುನಾಡು ಮತ್ತು ಉತ್ತರ ಪ್ರದೇಶದ ಒಂದು ಕ್ಷೇತ್ರಕ್ಕೆ ಉಪ ಚುನಾವಣೆಗೆ ಎರಡೇ ದಿನ ಬಾಕಿ ಇದೆ. ನಾಡಿದ್ದು ಬುಧವಾರ (ಫೆಬ್ರವರಿ 5) ಮತದಾನ ನೆಡಯಲಿದೆ. ಬೆಳಗ್ಗೆ 07 ಗಂಟೆಯಿಂದಲೇ ಬೆಳಿಗ್ಗೆ 7.00 ರಿಂದ ಸಂಜೆ 6.30 ರವರೆಗೆ ಯಾವುದೇ ಎಕ್ಸಿಟ್ ಪೋಲ್ (ಚುನಾವಣೋತ್ತರ) ಸಮೀಕ್ಷೆಗಳನ್ನು ನೀಡದಂತೆ ಕೇಂದ್ರ ಚುನಾವಣೆ ಆಯೋಗವು ನಿಷೇಧ ಹೇರಿದೆ.
ಕೇಂದ್ರ ಚುನಾವಣೆ ಆಯೋಗುವ ಚುನಾವಣೆಗಳಿಗೆ ಸಂಬಂಧಿಸಿದಂತೆ ಜನವರಿ 22 ರಂದು ಅಧಿಸೂಚನೆ ಹೊರಡಿಸಿದೆ. ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳ ಅಡಿ ಮತದಾನದ ಬಳಿಕ ಸೂಚಿತ ಸಮಯದಲ್ಲಿ ಅಭಿಪ್ರಾಯ ಇನ್ನಾವುದೇ ಸಮೀಕ್ಷೆ ಪ್ರಕಟಿಸದಂತೆ ಎಚ್ಚರಿಕೆ ನೀಡಲಾಗಿದೆ. ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟಿಸದಂತೆ ಮಾಧ್ಯಮಗಳ ಮೇಲೆ ಚುನಾವಣಾಧಿಕಾರಿಗಳು ನಿರ್ಬಂಧ ವಿಧಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

70 ಸೀಟುಗಳು ಇರುವ ದೆಹಲಿ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ನಡೆಯಲಿದೆ. ಇದೇ ಫೆ.5ರಂದು ಉತ್ತರ ಪ್ರದೇಶದ ಮಿಲ್ಕಿಪುರ ವಿಧಾನಸಭಾ ಕ್ಷೇತ್ರಕ್ಕೆ ಮತ್ತು ತಮಿಳುನಾಡಿನ ಈರೋಡ್ (ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಇದರ ಫಲಿತಾಂಶವನ್ನು ಫೆಬ್ರವರಿ 08ರಂದು ಬಿಡುಗಡೆಯಾಗಲಿದೆ.
ದೆಹಲಿ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲೇ ದೆಹಲಿಯಲ್ಲಿ ವಿವಿಧ ರಾಜಕೀಯ ಪಕ್ಷಗಳೂ ಪ್ರಚಾರ ಭರಾಟೆಯನ್ನು ತೀವ್ರಗೊಳಿಸಿವೆ. ಆರೋಪ ಪ್ರತ್ಯಾರೋಪಗಳಲ್ಲಿ, ವಾಗ್ದಾಳಿಗಳನ್ನು ಮುಂದುವರೆಸಿವೆ. ಇತ್ತೀಚೆಗೆ ಪ್ರಿಯಾಂಕಾ ಗಾಂಧಿ ಮಾತನಾಡಿ, ಅರವಿಂದ್ರ ಕೇಜ್ರಿವಾಲ್ ಮತ್ತು ಪ್ರಧಾನಿ ಮೋದಿ ಇಬ್ಬರು ಭ್ರಷ್ಟಚಾರಿಗಳು ಮತ್ತು ಹೇಡಿಗಳು ಎಂದು ಟೀಕಿಸಿದ್ದರು. ಇತ್ತ ರಾಹುಲ್ ಗಾಂಧಿಯವರು, ಪ್ರಧಾನಿ ಹಾಗೂ ಕೇಜ್ರಿವಾಲ್ ಇಬ್ಬರು ಸುಳ್ಳು ಭರವಸೆ ನೀಡುತ್ತಿದ್ದಾರೆ. ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಫೆಬ್ರವರಿ 2ರಂದು ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, "AAP-DA" ಸರ್ಕಾರ ದೆಹಲಿ ರಾಜ್ಯದಲ್ಲಿ ಕಳೆದ ಹನ್ನೊಂದು ವರ್ಷಗಳಲ್ಲಿ ದೆಹಲಿಯನ್ನು ಹಾಳು ಮಾಡಿದೆ. ಇಲ್ಲಿ ಬಿಜೆಪಿ ಅಧಿಕಾರ ಹಿಡಿದರೆ ಒಂದೇ ಒಂದು ಕೊಳೆಗೇರಿಯನ್ನು ಕೆಡವಲಾಗುವುದಿಲ್ಲ. ಯಾವುದೇ ಕಲ್ಯಾಣ ಯೋಜನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಮತದಾರರಿಗೆ ಭರವಸೆ ನೀಡುವ ಜೊತೆಗೆ ಎಎಪಿಗೆ ಟಕ್ಕರ್ ಕೊಟ್ಟಿದ್ದಾರೆ.
ದೆಹಲಿಯಲ್ಲಿ ಮತ್ತೆ ಐದು ವರ್ಷದ ಮಹತ್ವದ ಸಮಯವನ್ನು ವ್ಯರ್ಥ ಮಾಡಲು ಎಎಪಿ ಅಧಿಕಾರ ಹಿಡಿಯಲು ಮುಂದಾಗುತ್ತಿದೆ. ಇದಕ್ಕೆ ಅವಕಾಶ ಕೊಡದೇ ಮತದಾರರು ಬಿಜೆಪಿಗೆ ಮತ ನೀಡುವಂತೆ, ಕಮಲ ಅರಳಿಸುವಂತೆ ಕೋರಿದ್ದಾರೆ. ದೆಹಲಿ ಈ ಬಾರಿ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications