ಕಲ್ಲಿದ್ದಲು ಗಣಿಗಾರಿಕೆ ಅವ್ಯವಹಾರ: 4 ರಾಜ್ಯಗಳ 45 ಸ್ಥಳಗಳಲ್ಲಿ ಸಿಬಿಐ ದಾಳಿ
ನವದೆಹಲಿ, ನವೆಂಬರ್ 28: ಅಕ್ರಮ ಗಣಿಗಾರಿಕೆ ಮತ್ತು ಸರ್ಕಾರಿ ಸ್ವಾಮ್ಯದ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ನಿಂದ (ಇಸಿಎಲ್) ಕಲ್ಲಿದ್ದಲು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ರಾಜ್ಯಗಳಲ್ಲಿನ 45 ಸ್ಥಳಗಳ ಮೇಲೆ ಸಿಬಿಐ ಶನಿವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ.
ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ಗಳಲ್ಲಿ ಇಸಿಎಲ್ ಕಾರ್ಯನಿರ್ವಹಿಸುತ್ತದೆ. ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿ ಕೂಡ ಸಿಬಿಐ ದಾಳಿ ನಡೆಸಿದೆ.
ಶುಕ್ರವಾರ ದಾಖಲಾದ ಎಫ್ಐಆರ್ಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಇಸಿಎಲ್ನ ಇಬ್ಬರು ಪ್ರಧಾನ ವ್ಯವಸ್ಥಾಪಕರು, ಇಬ್ಬರು ಇತರೆ ಅಧಿಕಾರಿಗಳು ಮತ್ತು ಮುಖ್ಯ ಭದ್ರತಾ ಅಧಿಕಾರಿ ಹಾಗೂ ಖಾಸಗಿ ವ್ಯಕ್ತಿ ಅನೂಪ್ ಮಾಝಿ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ಅನೂಪ್ ಮಾಝಿ ಪಶ್ಚಿಮ ಬಂಗಾಳದಲ್ಲಿ ಮುಖ್ಯವಾಗಿ ನಡೆಯುವ ಅಕ್ರಮ ಕಾರ್ಯಾಚರಣೆಗಳ ಪ್ರಮುಖ ಕಿಂಗ್ ಪಿನ್ ಎನ್ನಲಾಗಿದೆ. ಅನೂಪ್ ಮನೆ ಮತ್ತು ಕಚೇರಿಗಳ ಮೇಲೆ ವ್ಯಾಪಕ ಪರಿಶೀಲನೆ ನಡೆಸಲಾಗಿದ್ದು, ಆತನ ಸಹವರ್ತಿಗಳ ಮನೆ ಮೇಲೂ ದಾಳಿ ನಡೆದಿದೆ.
ಅಸಾನ್ಸೋಲ್, ದುರ್ಗಾಪುರ, ರಾಣಿಗಂಜ್, ಬಿಷ್ಣುಪುರ್ ಮುಂತಾದ ಸ್ಥಳಗಳಲ್ಲಿ ಕೂಡ ದಾಳಿ ನಡೆದಿದೆ. ಲಾಲಾ ಎಂದು ಗುರುತಿಸಿಕೊಳ್ಳುತ್ತಿದ್ದ ಮಾಝಿ, ಬಂಗಾಳ-ಜಾರ್ಖಂಡ್ ಗಡಿಯಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ.
ಆದಾಯ ತೆರಿಗೆ ಇಲಾಖೆ ಕೂಡ ಆತನ ತನಿಖೆ ಮಾಡುತ್ತಿದ್ದು, ಈ ತಿಂಗಳ ಆರಂಭದಲ್ಲಿ ಆತನಿಗೆ ನೋಟಿಸ್ ನೀಡಿತ್ತು. ಅಮಿತ್ ಶಾ ಅವರ ಎರಡು ದಿನ ಕೋಲ್ಕತಾ ಭೇಟಿ ಸಮಯದಲ್ಲಿಯೇ ಈ ನೋಟಿಸ್ ನೀಡಲಾಗಿತ್ತು. 'ಲಾಲಾ ಮೇಲಿನ ದಾಳಿಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಏಕೆ ಕಳವಳ ಹೊಂದಿದ್ದಾರೆ?' ಎಂದು ಸುದ್ದಿಗೋಷ್ಠಿಯಲ್ಲಿ ಅಮಿತ್ ಶಾ ಪ್ರಶ್ನಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications