ಇಂದಿನಿಂದ ಬಜೆಟ್ ಅಧಿವೇಶನ: ಈ ಬಾರಿಯ ಆರ್ಥಿಕ ಸಮೀಕ್ಷೆಯಲ್ಲಿ ಏನಿರಲಿದೆ?
ನವದೆಹಲಿ, ಜನವರಿ 29: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಮೂರನೇ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದ್ದು, ಅದಕ್ಕೂ ಮೊದಲು ಇಂದಿನಿಂದ ಮಹತ್ವದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಭಾರತದ ಆರ್ಥಿಕ ಸಮೀಕ್ಷೆಯ ಪ್ರಸ್ತುತಿಯೊಂದಿಗೆ ಬಜೆಟ್ ಅಧಿವೇಶ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.
ಕೇಂದ್ರ ಬಜೆಟ್ ದಿನಕ್ಕೂ ಮೊದಲು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ಪ್ರತಿ ಬಾರಿಯು ಕೇಂದ್ರ ಬಜೆಟ್ ಮಂಡನೆಯ ಒಂದು ದಿನ ಮೊದಲು ಮಂಡಿಸಲಾಗುತ್ತದೆ. ಆದರೆ ಈ ವರ್ಷ ಇದನ್ನು ಸಾಮಾನ್ಯಕ್ಕಿಂತ ಮೊದಲೇ ತರಲಾಗುತ್ತಿದೆ. ಏಕೆಂದರೆ ಬಜೆಟ್ಗೆ ಮುಂಚಿನ ದಿನವು ಭಾನುವಾರವಾಗಿದೆ.
ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 29 ರಿಂದ ಫೆಬ್ರವರಿ 15 ರವರೆಗೆ ಮತ್ತು ಎರಡನೇ ಭಾಗವು ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಇರುತ್ತದೆ.

ಪ್ರತಿ ವರ್ಷದಂತೆ, 2020-21ರ ಸಮೀಕ್ಷೆಯು ಹಿಂದಿನ 12 ತಿಂಗಳ ಅವಧಿಯಲ್ಲಿ ಭಾರತೀಯ ಆರ್ಥಿಕತೆಯ ಪ್ರಗತಿಯ ಅಂದಾಜನ್ನು ಪ್ರಸ್ತುತಪಡಿಸುತ್ತದೆ. ಸಮೀಕ್ಷೆಯಿಂದ ಹೊರಡಿಸಲಾದ ಮುನ್ಸೂಚನೆಗಳು, ಅವುಗಳಿಗೆ ಉಲ್ಲೇಖಿಸಲಾದ ಕಾರಣಗಳು ಆರ್ಥಿಕ ವಿಶ್ಲೇಷಕರಲ್ಲಿ ಚರ್ಚೆಗೆ ಕಾರಣವಾಗುತ್ತದೆ.
ಆರ್ಥಿಕ ಸಮೀಕ್ಷೆಯ ಪರಿಶೀಲನೆಯಲ್ಲಿ ಸರ್ಕಾರವು ಜಾರಿಗೆ ತಂದ ಯೋಜನೆಗಳು ಮತ್ತು ನೀತಿಗಳ ವಿವರಗಳು ಮತ್ತು ಫಲಿತಾಂಶಗಳನ್ನು ಸಮೀಕ್ಷೆಯು ಒಳಗೊಂಡಿರುತ್ತದೆ. ಇದಲ್ಲದೆ, ಸಮೀಕ್ಷೆಯು ಮುಂದಿನ ದಿನಗಳಲ್ಲಿ ದೇಶದ ಆರ್ಥಿಕತೆಯ ಕುರಿತು ಸುಳಿವು ನೀಡುತ್ತದೆ.
ಈ ವರ್ಷದ ಸಮೀಕ್ಷೆಯು 2020ರ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿರುವ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರವು ತೀರಾ ಕುಸಿದ ನಂತರ, ಜೊತೆಗೆ ಕಳೆದ ತ್ರೈಮಾಸಿಕದಲ್ಲಿ ಚೇತರಿಕೆ ಕಂಡು ಬಂದಿರುವ ಕುರಿತು ಒಳಗೊಂಡಿರುತ್ತದೆ.
ಆರ್ಥಿಕತೆಯ ಮೇಲೆ ಸಾಂಕ್ರಾಮಿಕ ರೋಗದ ಪರಿಣಾಮಗಳನ್ನು ತೀಕ್ಷ್ಣವಾಗಿ ಕೇಂದ್ರೀಕೃತವಾಗಿದೆ. ಈ ಸೂಚಕಗಳಲ್ಲಿ ಕೃಷಿ ಉತ್ಪಾದನೆ, ಕಾರ್ಖಾನೆ ಉತ್ಪಾದನೆ, ವಿದೇಶಿ ವ್ಯಾಪಾರ, ಹಣದುಬ್ಬರ, ಉದ್ಯೋಗಗಳು ಇತ್ಯಾದಿಗಳು ಸೇರಿವೆ.
ಕೊರೊನಾವೈರಸ್ನಿಂದಾಗಿ ಆರ್ಥಿಕತೆಯ ಮೇಲೆ ಆಗಿರುವ ಹಾನಿ ಕುರಿತಾಗಿ ಅಧಿಕೃತವಾಗಿ ಅಂಕಿ-ಅಂಶಗಳು ಹೊರಬರಲು ಸದ್ಯಕ್ಕೆ ಸಾಧ್ಯವಿಲ್ಲ. ಹೀಗಾಗಿ ಈ ವರ್ಷದ ಆರ್ಥಿಕ ಸಮೀಕ್ಷೆಯಲ್ಲಿ ಏನಿರಲಿದೆ ಎಂಬುದು ಹೆಚ್ಚು ಆಸಕ್ತಿಗೆ ಕಾರಣವಾಗಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications