ಜಾಕಿರ್ ನಾಯಕ್ ಗೆ ಶೀಘ್ರವೇ ಜಾಮೀನು ರಹಿತ ಬಂಧನ ವಾರೆಂಟ್?
ಸದ್ಯಕ್ಕೆ ಸೌದಿ ಅರೇಬಿಯಾದಲ್ಲಿರುವ ಜಾಕಿರ್ ನಾಯಕ್ ಗೆ ಸಂಬಂಧಿಸಿದ ಆರ್ಥಿಕ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಆಯೋಗ (ಎನ್ ಐಎ) ಕೂಡ ಈವರೆಗೆ 3 ಸಮನ್ಸ್ ಜಾರಿಗೊಳಿಸಿದೆ.
ನವದೆಹಲಿ, ಏಪ್ರಿಲ್ 11: ಇಸ್ಲಾಂ ಧರ್ಮ ಬೋಧಕ ಡಾ. ಜಾಕಿರ್ ನಾಯಕ್ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸುವಂತೆ ಮುಂಬೈನ ಆರ್ಥಿಕ ಅವ್ಯವಹಾರ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ (ಏಪ್ರಿಲ್ 11) ಅರ್ಜಿ ಸಲ್ಲಿಸಿದೆ.
ಸದ್ಯಕ್ಕೆ ಸೌದಿ ಅರೇಬಿಯಾದಲ್ಲಿರುವ ಜಾಕಿರ್ ನಾಯಕ್ ಗೆ ಸಂಬಂಧಿಸಿದ ಆರ್ಥಿಕ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಆಯೋಗ (ಎನ್ ಐಎ) ಕೂಡ ಈವರೆಗೆ 3 ಸಮನ್ಸ್ ಜಾರಿಗೊಳಿಸಿದೆ. ಆದರೆ, ಇದ್ಯಾವುದನ್ನೂ ಜಾಕಿರ್ ಮಾನ್ಯ ಮಾಡಿಲ್ಲ.

ಜಾಕಿರ್ ಅವರು ಸೌದಿ ಅರೇಬಿಯಾದಲ್ಲಿರುವ ಮಾಹಿತಿ ಇರುವುದರಿಂದ ಅವರ ಇ-ಮೇಲ್ ಗೂ ಸಮನ್ಸ್ ಜಾರಿಗೊಳಿಸಲಾಗಿದೆ. ಆದರೆ, ಇದ್ಯಾವುದಕ್ಕೂ ಜಾಕಿರ್ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ.
ಮೊದಲ ಸಮನ್ಸ್ ಜಾರಿಯಾದಾಗ, ಭಾರತದಲ್ಲಿರುವ ತಮ್ಮ ವಕೀಲರ ಮೂಲಕ ಮುಂಬೈ ನ್ಯಾಯಾಲಯಕ್ಕೆ ತನ್ನದೇ ಪ್ರತ್ಯೇಕ ಸಲ್ಲಿಸಿದ್ದ ಜಾಕಿರ್, ತಾವು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುವುದಾಗಿ ಕೋರಿದ್ದರು. ಆದರೆ, ಇದನ್ನು ಎನ್ ಐಎ ತಿರಸ್ಕರಿಸಿತ್ತು.
ಆನಂತರ, ಜಾರಿಗೊಂಡ ಸುಮಾರು ಎರಡು ಸಮನ್ಸ್ ಗಳಿಗೆ ಜಾಕಿರ್ ಉತ್ತರಿಸಿಲ್ಲ. ಇತ್ತೀಚೆಗೆ ಜಾರಿಗೊಂಡ ಮೂರನೇ ಸಮನ್ಸ್ ನಲ್ಲಿ ಏಪ್ರಿಲ್ 17ರಂದು ಮುಂಬೈನಲ್ಲಿರುವ ಎನ್ ಐಎ ಕಚೇರಿಗೆ ಖುದ್ದಾಗಿ ಹಾಜರಾಗುವಂತೆ ತಿಳಿಸಿತ್ತು. ಆದರೆ, ಇದಕ್ಕೂ ಜಾಕಿರ್ ಅವರಿಂದ ಉತ್ತರ ಬಂದಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಾರಿ ನಿರ್ದೇಶನಾಲಯ ಜಾಕಿರ್ ವಿರುದ್ಧ ವಾರಂಟ್ ಜಾರಿಗೊಳಿಸುವಂತೆ ಕೋರ್ಟ್ ಮೊರೆ ಹೋಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications