ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ವಿದ್ಯುತ್ ಸಚಿವ ಸೆಂಥಿಲ್‌ ಬಾಲಾಜಿ ಬಂಧನ

ಚೆನ್ನೈ, ಜೂನ್. 14: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ವಿದ್ಯುತ್ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಮೂಲಗಳು ಖಚಿತಪಡಿಸಿವೆ. ಚೆನ್ನೈನಲ್ಲಿರುವ ಸಚಿವರ ಮನೆಯಲ್ಲಿ 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ.

ವಿಚಾರಣೆಯ ನಂತರ, ಜೂನ್ 14 ರಂದು ಮಧ್ಯರಾತ್ರಿ 2 ಗಂಟೆಗೆ ಸೆಂಥಿಲ್‌ ಬಾಲಾಜಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಚೆನ್ನೈನ ಓಮಂದೂರಾರ್ ಎಸ್ಟೇಟ್‌ನಲ್ಲಿರುವ ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕಾರಿನಲ್ಲಿ ಕರೆದೊಯ್ಯಲಾಯಿತು. ಈ ವೇಳೆ ದಾಖಲೆಗಳನ್ನು ಹೊತ್ತ ಇನ್ನೂ ಮೂರು ವಾಹನಗಳು ಅವರನ್ನು ಹಿಂಬಾಲಿಸಿದವು.

ED arrested Tamil Nadu Electricity Minister Senthilbalaji in money laundering case

ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್, ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಮತ್ತು ಪಿಡಬ್ಲ್ಯೂಡಿ ಸಚಿವ ಇ.ವಿ. ವೇಲು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಸಚಿವ ಸೇಕರ್ ಬಾಬು ಅವರು ಸೆಂಥಿಲ್‌ ಬಾಲಾಜಿ ಪ್ರಜ್ಞಾಹೀನರಾಗಿದ್ದಾರೆ ಮತ್ತು ಐಸಿಯುನಲ್ಲಿ ನಿಗಾದಲ್ಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಡಿಎಂಕೆ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಎನ್.ಆರ್. ಎಲಂಗೋ ಅವರನ್ನು ಬಂಧಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಂಥಿಲ್‌ ಬಾಲಾಜಿ ಅವರ ಕುಟುಂಬ ಸದಸ್ಯರಿಗೆ ಅಥವಾ ಯಾರಿಗೂ ತಿಳಿಸಿಲ್ಲ ಎಂದು ಹೇಳಿದ್ದಾರೆ. ಒಮಂದೂರಾರ್ ಸರ್ಕಾರಿ ಎಸ್ಟೇಟ್‌ನಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಕೊಡಿಸಲು ಲಂಚ ಪಡೆಯಲಾಗಿದೆ ಎಂದು ಸೆಂಥಿಲ್‌ ಬಾಲಾಜಿ ಅವರ ವಿರುದ್ಧ ಆರೋಪಿಸಲಾಗಿದೆ. ಕಳೆದ ತಿಂಗಳು, ಸುಪ್ರೀಂ ಕೋರ್ಟ್ ತನಿಖೆಗೆ ಸಮ್ಮತಿ ನೀಡಿದ್ದು, "ತನಿಖಾಧಿಕಾರಿಯು ಎಲ್ಲಾ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಯನ್ನು ಮುಂದುವರಿಸಬೇಕು" ಎಂದು ಹೇಳಿದೆ.

ಇತ್ತ, ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ "ಬಿಜೆಪಿಯ ಬೆದರಿಕೆ ಮತ್ತು ಒತ್ತಡಕ್ಕೆ ಮಣಿಯುವುದಿಲ್ಲ. ಪಕ್ಷವು ಕಾನೂನು ಮಾರ್ಗವನ್ನು ಪರಿಗಣಿಸುತ್ತದೆ" ಎಂದು ಹೇಳಿದ್ದಾರೆ.

ಜೂನ್ 13 ರಂದು, ಇಡಿ ರಾಜ್ಯ ಸಚಿವಾಲಯದ ಸೆಂಥಿಲ್ ಬಾಲಾಜಿ ಅವರ ಅಧಿಕೃತ ಚೇಂಬರ್ ಮತ್ತು ಚೆನ್ನೈನಲ್ಲಿರುವ ಬಂಗಲೆ ಮತ್ತು ಕರೂರ್ ಮತ್ತು ಕೊಯಮತ್ತೂರಿನಲ್ಲಿ ಅವರಿಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿತು. ಸಚಿವರೊಬ್ಬರನ್ನು ಗುರಿಯಾಗಿಸಿಕೊಂಡು ಅಧಿಕಾರದ ಗದ್ದುಗೆ ಸೇಂಟ್ ಜಾರ್ಜ್ ಕೋಟೆಗೆ ಕೇಂದ್ರ ಸಂಸ್ಥೆ ಪ್ರವೇಶಿಸಿರುವುದು ಇದೇ ಮೊದಲು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ. ಸ್ಟಾಲಿನ್ ಇದನ್ನು ನರೇಂದ್ರ ಮೋದಿ ಸರ್ಕಾರದ "ಬೆದರಿಕೆಯ ತಂತ್ರ" ಎಂದು ಹೇಳಿದ್ದಾರೆ. ಈ ವರದಿಯನ್ನು ಸಲ್ಲಿಸುವವರೆಗೂ ಕೇಂದ್ರೀಯ ಸಂಸ್ಥೆ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡದಿದ್ದರೂ, ಸೆಂಥಿಲ್ ಬಾಲಾಜಿ ಅವರು 2011- 15 ರಲ್ಲಿ ಜಯಲಲಿತಾ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದಾಗ ನಡೆದ ಉದ್ಯೋಗ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+