Get Updates
Get notified of breaking news, exclusive insights, and must-see stories!

ದೆಹಲಿ ಮದ್ಯ ಹಗರಣ ಪ್ರಕರಣ: ಕೇಜ್ರಿವಾಲ್‌, ಆಪ್‌ ಪಕ್ಷದ ವಿರುದ್ಧ ಇಡಿ ಚಾರ್ಜ್ ಶೀಟ್

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ಸಲ್ಲಿಸಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ 200 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಶೀಘ್ರದಲ್ಲೇ ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡುವುದಾಗಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠದ ಮುಂದೆ ಇಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ನಾವು ಪ್ರಸ್ತಾಪಿಸುತ್ತಿದ್ದೇವೆ ಎಂದು ಹೇಳಿದರು. ಕೋರ್ಟ್‌ಗೆ 200 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 8 ಚಾರ್ಜ್‌ಶೀಟ್‌ಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ಒಂದು ಮುಖ್ಯ ಮತ್ತು 7 ಪೂರಕ ಚಾರ್ಜ್‌ಶೀಟ್‌ ಗಳಾಗಿವೆ.

ED Charges Against AAP Arvind Kejriwal in Money Laundering Case

ಆಪ್‌ ಮೇಲೂ ಚಾರ್ಜ್‌ ಶೀಟ್‌

ಮೂಲಗಳ ಪ್ರಕಾರ, ಮನೀಶ್ ಸಿಸೋಡಿಯಾ ಮತ್ತು ಕೆ ಕವಿತಾ ಜೊತೆಗೆ ಅರವಿಂದ್ ಕೇಜ್ರಿವಾಲ್ ಕೂಡ ಈ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಇಡಿ ಚಾರ್ಜ್ ಶೀಟ್‌ನಲ್ಲಿ ಹೇಳಿದೆ. ಈ ಆರೋಪಪಟ್ಟಿಯಲ್ಲಿ ಇಡಿ ಆಮ್ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ. ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ರಾಜಕೀಯ ಪಕ್ಷವೊಂದು ಆರೋಪಿ ಹೆಸರಿಸಲಾಗಿರುವುದು ಇದೇ ಮೊದಲು.

ಈ ಹಿಂದೆಯೂ ಇಡಿ ಸಿಎಂ ಅವರನ್ನು ದೆಹಲಿ ಮದ್ಯ ಹಗರಣ ಪ್ರಕರಣದ ಕಿಂಗ್‌ಪಿನ್ ಮತ್ತು ಮುಖ್ಯ ಸಂಚುಕೋರ ಎಂದು ಹೇಳಿತ್ತು. ಅವರು ಇತರರೊಂದಿಗೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇನ್ನು ಅರವಿಂದ್‌ ಕೇಜ್ರಿವಾಲ್‌ ಸೆವೆನ್‌ ಸ್ಟಾರ್‌ ಹೊಟೇಲ್‌ನಲ್ಲಿ ತಂಗಿದ್ದರು ಎಂಬುದಕ್ಕೆ ನಮ್ಮಲ್ಲಿ ಪುರಾವೆಗಳು ಇವೆ ಎಂದು ಇಡಿ ಹೇಳಿದೆ. ಆಪಾದಿತ ಹಗರಣಕ್ಕೆ ಎಎಪಿಯ ರಾಷ್ಟ್ರೀಯ ಸಂಚಾಲಕರಾಗಿ ಕೇಜ್ರಿವಾಲ್ ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕೇಜ್ರಿವಾಲ್‌ ಜೂನ್ 2 ರಂದು ಶರಣಾಗಬೇಕು

ಇಡಿ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮೇ 10 ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು. ಅವರು ಜೂನ್ 2 ರಂದು ಶರಣಾಗಬೇಕು. ತಮ್ಮ ಬಂಧನ ಅಕ್ರಮ ಎಂದು ಕೇಜ್ರಿವಾಲ್ ಪರವಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಆಂಧ್ರಪ್ರದೇಶದಿಂದ ಗೋವಾ ಚುನಾವಣೆಗೆ ಹವಾಲಾ ವರ್ಗಾವಣೆಗೆ ತಮ್ಮ ಬಳಿ ಪುರಾವೆಗಳಿವೆ ಎಂದು ಇಡಿ ಹೇಳುತ್ತದೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು. ಈ ಬಗ್ಗೆ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಬಂಧನದ ಆಧಾರದಲ್ಲಿ ಇದು ಯಾವುದೇ ಸಾಕ್ಷ್ಯವಲ್ಲ. ಸಿಂಘ್ವಿ ಅವರ ಉತ್ತರಕ್ಕೆ ಎಎಸ್‌ಜಿ ರಾಜು ಆಕ್ಷೇಪ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+