ಆಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಹಗರಣ: ಕಮಲ್ ನಾಥ್ ಮಕ್ಕಳು, ಸೋದರಳಿಯ ಕೂಡ ಭಾಗಿ
ನವದೆಹಲಿ, ನವೆಂಬರ್ 18: ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಐಷಾರಾಮಿ ಹೆಲಿಕಾಪ್ಟರ್ ಹಗರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದ್ದು, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ಹಿರಿಯ ಮುಖಂಡ ಕಮಲ್ ನಾಥ್ ಅವರ ಸೋದರಳಿಯ ಹಾಗೂ ಇಬ್ಬರು ಮಕ್ಕಳು ಸಹ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಸಿದೆ.
ಕಮಲ್ ನಾಥ್ ಅವರ ಸೋದರಳಿಯ ರುತುಲ್ ಪುರಿ ಮತ್ತು ಮಕ್ಕಳಾದ ನಕುಲ್ ನಾಥ್ ಹಾಗೂ ಬಕುಲ್ ನಾಥ್ ಅವರು ಹೆಲಿಕಾಪ್ಟರ್ ಡೀಲ್ನಲ್ಲಿ ಪಡೆದ ಕಿಕ್ ಬ್ಯಾಕ್ನ ಫಲಾನುಭವಿಗಳಾಗಿದ್ದಾರೆ ಎಂದು ಇ.ಡಿ ಮೂಲಗಳು ಹೇಳಿವೆ. ಕಮಲ್ ನಾಥ್ ಸೋದರಳಿಯ ರುತುಲ್ ಪುರಿ ಬ್ರಿಟಿಷ್ ಪ್ರಜೆ ಹಾಗೂ ಈ ಒಪ್ಪಂದ ಮಧ್ಯವರ್ತಿ ಕ್ರಿಸ್ಟಿಯನ್ ಮೈಕಲ್ ಜೇಮ್ಸ್ನಿಂದ 1 ಮಿಲಿಯನ್ ಡಾಲರ್ ಪಡೆದಿದ್ದರು ಎಂದು 'ಟೈಮ್ಸ್ ನೌ' ವರದಿ ಮಾಡಿದೆ.
ಅಗಸ್ಟಾವೆಸ್ಟ್ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದ ಕಿಕ್ ಬ್ಯಾಕ್ ಪಾವತಿ ಅವ್ಯವಹಾರಗಳ ಸರಪಣಿಯನ್ನು ಭೇದಿಸುವಲ್ಲಿ ಜಾರಿ ನಿರ್ದೇಶನಾಲಯ ಯಶಸ್ವಿಯಾಗಿದೆ. ಒಟ್ಟು 385 ಕೋಟಿ ರೂದಷ್ಟು ಲಂಚವನ್ನು ಈ ಹಗರಣದಲ್ಲಿ ನೀಡಲಾಗಿದೆ. ಮೈಕಲ್ ಒಂದು ಮಿಲಿಯನ್ ಡಾಲರ್ ಹಣವನ್ನು ಪುರಿಗೆ ನೀಡಿದ್ದ. ಬಕುಲ್ ಮತ್ತು ನಕುಲ್ ಟ್ರಸ್ಟಿಗಳಾಗಿರುವ ಟ್ರಸ್ಟ್ ಫಂಡ್ ಒಂದರಲ್ಲಿ ಪುರಿ ಕೂಡ ಪಾಲುದಾರನಾಗಿದ್ದಾನೆ ಎಂದು ಇ.ಡಿ. ತಿಳಿಸಿದೆ.

ಈ ಟ್ರಸ್ಟ್ ಪ್ರಿಸ್ಟೀನ್ ರಿವರ್ ಎಂಬ ಕಂಪೆನಿಯೊಂದನ್ನು ಹೊಂದಿದ್ದು, ಅದು 14 ಮಿಲಿಯನ್ ಡಾಲರ್ ಲಂಚದ ಮೊತ್ತವನ್ನು ಪಡೆದುಕೊಂಡಿದೆ. ಕಮಲ್ ನಾಥ್ ಅವರ ಇಬ್ಬರು ಮಕ್ಕಳು ಇದರ ನೇರ ಫಲಾನುಭವಿಗಳಾಗಿದ್ದಾರೆ ಎನ್ನುವುದು ಕೂಡ ಇಡಿ ತನಿಖೆಯಿಂದ ತಿಳಿದುಬಂದಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಯುಪಿಎ-2 ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿ ಅವರಂತಹ ವಿವಿಐಪಿಗಳ ಓಡಾಟಕ್ಕಾಗಿ 3,600 ಕೋಟಿ ರೂ ವೆಚ್ಚದಲ್ಲಿ ಐಷಾರಾಮಿ ಹೆಲಿಕಾಪ್ಟರ್ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈ ಒಪ್ಪಂದದಲ್ಲಿ ಕಿಕ್ ಬ್ಯಾಕ್ ಪಡೆಯಲಾಗಿದ್ದು, ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications