Punjab: ಭ್ರಷ್ಟಾಚಾರ ಪ್ರಕರಣ, ಮತ್ತೊಬ್ಬ ಎಎಪಿ ನಾಯಕ ಬಂಧಿಸಿದ ED
ಚಂಡೀಗಢ, ನವೆಂಬರ್ 06: ಪಂಜಾಬ್ ರಾಜ್ಯದ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸೋಮವಾರ ಬಂಧಿಸಿದೆ. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಬಂಧನವಾಗಿದೆ ಎಂದು ಹೇಳಲಾಗುತ್ತಿದೆ.
ಕಳೆದ ವರ್ಷ 2022ರಲ್ಲಿ ಸೆಪ್ಟೆಂಬರ್ನಲ್ಲಿ ಬ್ಯಾಂಕ್ ವೊಂದರ ₹41 ಕೋಟಿ ವಂಚನೆಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳವು ಆಮ್ ಆದ್ಮಿ ಪಕ್ಷದ ನಾಯಕರ ನಿವಾಸ ಸೇರಿದಂತೆ ಮೂರು ಸ್ಥಳಗಳನ್ನು ಶೋಧಿಸಿತ್ತು. ಈ ವೇಳೆ 16.57 ಲಕ್ಷ ನಗದು ಹಣ ಪತ್ತೆ ಆಗಿತ್ತು. ಬ್ಯಾಂಕ್ ಹಾಗೂ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಆದರೆ ಇಂದು ಶಾಸಕರ ಬಂಧನಕ್ಕೆ ನಿಖರ ಕಾರಣ ಬಗ್ಗೆ ಅಧಿಕಾರಿಗಳು ತಿಳಿಸಿಲ್ಲ.

ಸಿಬಿಐ ಪ್ರಕಾರ, ಪಂಜಾಬ್ ರಾಜ್ಯದ ಲುಧಿಯಾನದಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯು ನೀಡಿದ್ದ ದೂರಿನ ಆಧಾರದಲ್ಲಿ ತಾರಾ ಕಾರ್ಪೊರೇಷನ್ ಲಿಮಿಟೆಡ್ ಸೇರಿದಂತೆ ಬಂಧಿತ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಹಾಗೂ ಇನ್ನಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಬಂಧಿತ ವ್ಯಕ್ತಿಗಳ ಪೈಕಿ ಸಾರ್ವಜನಿಕ ಸೇವೆಯಲ್ಲಿಯೇ ಇದ್ದ ಅಧಿಕಾರಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಪಕ್ಷ ನಾಯಕರ ವಿರುದ್ಧ ಕ್ರಮ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿರೋಧ ಪಕ್ಷಗಳು ಮತ್ತವರ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳು ಕ್ರಮ ಕೈಗೊಂಡ ಬೆನ್ನಲ್ಲೆ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಸಂಕಟ ಎದುರಾಗಿದೆ. ಇದೀಗ ಶಾಸಕ ಮಜ್ರಾ ಅವರನ್ನು ಬಂಧಿಸಲಾಗಿದೆ.
ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಮಹಾದೇವ್ ಬೆಟ್ಟಿಂಗ್ ಆಪ್ ಮಾಲೀಕರಿಂದ ₹508 ಕೋಟಿ ಲಂಚ ಪಡೆದ ಆರೋಪದ ಮೇಲೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದೆ. ಇನ್ನೇನು ಮಂಗಳವಾರದಿಂದ ಮತದಾನ ಆರಂಭವಾಗಲಿದೆ. ಈ ಸಮಯದಲ್ಲಿ ಇಡಿಯನ್ನು 'ಅಸ್ತ್ರ'ವಾಗಿ ಬಳಸಿಕೊಳ್ಳಲಾಗಿದೆ ಎಂದು ಕೇಂದ್ರ ಬಿಜೆಪಿ ವಿರುದ್ಧ ಬಘೇಲ್ ಅವರು ಟೀಕಿಸಿದ್ದಾರೆ.
ವಿಚಾರಣೆಗೆ ಗೈರಾಗಿದ್ದ ದೆಹಲಿ ಸಿಎಂ
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2 ರಂದು ವಿಚಾರಣೆ ನಡೆಸಲು ತನಿಖಾಧಿಕಾರಿಗಳು ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಂಪರ್ಕಿಸಿದರು. ಆದರೆ ಕರೆ ಸ್ವೀಕರಿಸದೇ ನಿರ್ಲಕ್ಷಿಸಿದ್ದಾರೆ. ಇದೇ ವೇಳೆ ಅವರು ಮಧ್ಯ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications