ಚಿದಂಬರಂ, ಕಾರ್ತಿ ವಿರುದ್ಧ ಪಾಸ್ವರ್ಡ್ ಸುರಕ್ಷಿತ ಚಾರ್ಜ್ ಶೀಟ್ ಸಲ್ಲಿಕೆ
ನವದೆಹಲಿ, ಜೂನ್ 3: ಕೇಂದ್ರದ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ವಿರುದ್ಧ ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೋಷಾರೋಪಣ ಪಟ್ಟಿ ಸಲ್ಲಿಸಿದೆ. ವಿಶೇಷ ಕೋರ್ಟ್ ನ್ಯಾ. ಅಜಯ್ ಕುಮಾರ್ ಕುನ್ಹಾರ್ ಅವರಿಗೆ ಪಾಸ್ವರ್ಡ್ ಸುರಕ್ಷಿತ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಲಾಕ್ಡೌನ್ ನಂತರ ಕೋರ್ಟ್ ಕಾರ್ಯನಿರ್ವಹಣೆ ಎಂದಿನಂತೆ ಆರಂಭವಾದ ಬಳಿಕ ಮುದ್ರಿತ ಚಾರ್ಜ್ ಶೀಟ್ ಪ್ರತಿಯನ್ನು ಸಲ್ಲಿಸುವಂತೆ ನ್ಯಾ. ಅಜಯ್ ಕುಮಾರ್ ಸೂಚಿಸಿದರು. ಚಿದಂಬರಂ, ಕಾರ್ತಿ ಅಲ್ಲದೆ, ಕಾರ್ತಿ ಅವರ ಸಿಎ ಎಸ್ಎಸ್ ಭಾಸ್ಕರ್ ರಾಮನ್ ಅವರನ್ನು ಕೂಡಾ ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾಗಿದೆ.
ಯುಪಿಎ 1 ಅಧಿಕಾರದಲ್ಲಿದ್ದಾಗ ವಿತ್ತ ಸಚಿವರಾಗಿದ್ದ ಪಿ ಚಿದಂಬರಂ ಅವರು 2007ರಲ್ಲಿ ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ಸುಮಾರು 305 ಕೋಟಿ ರುಗಳನ್ನು ವಿದೇಶದಿಂದ ಹೂಡಿಕೆ ರೂಪದಲ್ಲಿ ಪಡೆಯಲು ಅನುಮತಿ ದೊರಕಿಸಿಕೊಟ್ಟಿದ್ದರು.
2019ರಲ್ಲಿ ಆಗಸ್ಟ್ 21ರಂದು ಹೈಡ್ರಾಮಾ ನಡುವೆ ಪಿ ಚಿದಂಬರಂ ಅವರನ್ನು ದೆಹಲಿ ನಿವಾಸದಲ್ಲಿ ಸಿಬಿಐ ಬಂಧಿಸಿತ್ತು. ನಂತರ ತಿಹಾರ್ ಜೈಲಿನಲ್ಲಿದ್ದರು. ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅಕ್ಟೋಬರ್ ನಲ್ಲಿ ಬಂಧಿಸಿತ್ತು. ನಂತರ ಸಿಬಿಐ, ಜಾರಿ ನಿರ್ದೇಶನಾಲಯ ಪ್ರಕರಣ ಎರಡರಲ್ಲೂ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದಾರೆ.

ಏನಿದು ಐಎನ್ಎಕ್ಸ್ ಮೀಡಿಯಾ ಕೇಸ್
2007ರಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (Foreign Investment Promotion Board)ಯಿಂದ 4.62 ಕೋಟಿ ರುಪಾಯಿ ಹೂಡಿಕೆ ಮಾಡಲು ಅನುಮೋದನೆ ಸಿಕ್ಕಿತ್ತು. ಆದರೆ ಮಾರಿಷಸ್ ನ ಎರಡು ಕಂಪನಿಗಳಿಂದ ಪೀಟರ್ ಮತ್ತು ಇಂದ್ರಾಣಿ ಒಡೆತನದ ಕಂಪನಿ ಐಎನ್ಎಕ್ಸ್ ಮೀಡಿಯಾ ಪಡೆದದ್ದು 305 ಕೋಟಿ ರುಪಾಯಿಗಳು. ಇದರ ವಿರುದ್ಧ ಕಂದಾಯ ಇಲಾಖೆ ವಿಚಾರಣೆಗೆ ಆದೇಶಿಸಿತ್ತು. ಈ ವಿಚಾರಣೆಯನ್ನು ತಪ್ಪಿಸಲು ಕಾರ್ತಿ ಅವರು ತಮ್ಮ ಕಂಪನಿಯ ಮೂಲಕ ಐಎನ್ಎಕ್ಸ್ ಮೀಡಿಯಾ ಕಂಪನಿಯಿಂದ 10 ಲಕ್ಷ ರುಪಾಯಿ ಕಮಿಷನ್ ಪಡೆದಿದ್ದರು.

ಮಗ ಹಾಗೂ ಈಗ ಅಪ್ಪನ ಬಂಧನಕ್ಕೆ ಕಾರಣವೇನು?
ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮೊದಲು ಮಗ ಹಾಗೂ ಈಗ ಅಪ್ಪನ ಬಂಧನಕ್ಕೆ ಕಾರಣವಾಗಿದ್ದು, ಆ ಹೆಂಗಸು ನೀಡಿದ ತಪ್ಪೊಪ್ಪಿಗೆ ಹೇಳಿಕೆ. ಆ ಹೆಂಗಸು ಮತ್ತ್ಯಾರು ಅಲ್ಲ, ಇಂದ್ರಾಣಿ ಮುಖರ್ಜಿಯಾ, ಮಾಧ್ಯಮ ಲೋಕದ ದೊರೆ ಪೀಟರ್ ಮುಖರ್ಜಿಯಾ ಪತ್ನಿ, ತಮ್ಮ ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದು ನೆನಪಿರಬಹುದು. ಬೇನಾಮಿ ಕಂಪನಿ ಮೂಲಕ ಕಾರ್ತಿ ಚಿದಂಬರಂಗೆ ಇಂದ್ರಾಣಿ ನೆರವಾಗಲು ಮುಂದಾಗಿದ್ದರು.

ಇಂದ್ರಾಣಿ ಅಪ್ರೂವರ್ ಆಗಿ ನೀಡಿದ ಹೇಳಿಕೆ
ಫೆಬ್ರವರಿ 17, 2018ರಲ್ಲಿ ಇಂದ್ರಾಣಿ ಅಪ್ರೂವರ್ ಆಗಿ CrPC ಸೆಕ್ಷನ್ 164 ಅನ್ವಯ ಮ್ಯಾಜಿಸ್ಟ್ರೇಟ್ ಮುಂದೆ ಕಾರ್ತಿ ಚಿದಂಬರಂ ಹಾಗೂ ಪಿ ಚಿದಂಬರಂ ವಿರುದ್ಧ ಹೇಳಿಕೆ ದಾಖಲಿಸಿದ್ದರಿಂದ ಪಿ ಚಿದಂಬರಂ ಬಂಧಿಸಲು ಸಾಧ್ಯವಾಗಿತ್ತು. ಇಂದ್ರಾಣಿ ನೀಡಿರುವ ಇಮೇಲ್ ಸಾಕ್ಷಿ, ಹೋಟೆಲ್ ಹಯಾತ್ ನಲ್ಲಿ ಭೇಟಿ, ಚಿದಂಬರಂ ನೀಡಿದ ಸೂಚನೆ, ಮುಂತಾದ ಸಾಕ್ಷಿಗಳೇ ಸದ್ಯಕ್ಕೆ ಇಡಿ ಹಾಗೂ ಸಿಬಿಐಗೆ ಪ್ರಮುಖ ಅಸ್ತ್ರಗಳಾಗಿವೆ.

300 ಕೋಟಿ ವಿದೇಶಿ ಹೂಡಿಕೆ ಎಂಬ ಮೋಸ
ವಿದೇಶದಿಂದ ನೇರವಾಗಿ ಬಂಡವಾಳ ಹೂಡಿಕೆ ಅನುಮತಿ ಪಡೆದ ಐಎನ್ ಎಕ್ಸ್ ಮೀಡಿಯಾಕ್ಕೆ ಶೇ 26ರಷ್ಟು ಹೂಡಿಕೆಯನ್ನು ಐಎನ್ ಎಕ್ಸ್ ನ್ಯೂಸ್ ನಲ್ಲಿ ತೊಡಗಿಸಿಕೊಳ್ಳಲು ಮುಂದಾಗುತ್ತದೆ. ಆದಾಯ ತೆರಿಗೆ ಇಲಾಖೆ ಗಮನಕ್ಕೆ ಬಂದು ಹೂಡಿಕೆ ಕಷ್ಟವಾಗುತ್ತದೆ. ನಂತರ ಕಾರ್ತಿ ಎಂಟ್ರಿಯಾಗಿ 4.6 ಕೋಟಿ ರು ಹೂಡಿಕೆಗೆ FIPB ಅನುಮತಿ ಪಡೆದು 300 ಕೋಟಿ ವಿದೇಶಿ ಹೂಡಿಕೆ ಪಡೆಯಲಾಗಿದೆ ಎಂಬುದು ಆರೋಪ. ಈ ಡೀಲ್ ಪೂರ್ಣಗೊಳಿಸಲು ಮಧ್ಯವರ್ತಿ ಸಂಸ್ಥೆ, ಕಿಕ್ ಬ್ಯಾಕ್ ಪಡೆಯಲು ಬೇನಾಮಿ ಸಂಸ್ಥೆಯನ್ನು ಕಾರ್ತಿ ಸೂಚಿಸಿದ್ದರು ಎಂಬ ಆರೋಪವಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications