ಜಾರಿ ನಿರ್ದೇಶನಾಲಯ ಭರ್ಜರಿ ಬೇಟೆ: 2300 ಬೇನಾಮಿ ಕಂಪನಿಗಳು ಪತ್ತೆ
ಮುಂಬೈ ಹಾಗೂ ದೆಹಲಿಯಲ್ಲೇ ಸುಮಾರು 1000 ಬೇನಾಮಿ ಕಂಪನಿಗಳು ಪತ್ತೆಯಾಗಿದ್ದು, ಇವುಗಳಲ್ಲಿ ಒಬ್ಬನೇ ವ್ಯಕ್ತಿಯ ಹೆಸರಲ್ಲಿ 700 ಕಂಪನಿಗಳು ಅಸ್ತಿತ್ವದಲ್ಲಿರುವುದು ಪತ್ತೆಯಾಗಿದೆ.
ನವದೆಹಲಿ, ಏಪ್ರಿಲ್ 1: ದೇಶದ 16 ರಾಜ್ಯಗಳಲ್ಲಿ ಶನಿವಾರ ಜಾರಿ ನಿರ್ದೇಶನಾಲಯ (ಇಡಿ) ಏಕಕಾಲದಲ್ಲಿ ನಡೆಸಿದ ದಾಳಿಯಲ್ಲಿ 2300ಕ್ಕೂ ಹೆಚ್ಚು ಬೇನಾಮಿ ಕಂಪನಿಗಳು ಪತ್ತೆಯಾಗಿವೆ. ಪ್ರಧಾನಿ ನರೇಂದ್ರ ಮೋದಿಯವರ ಆದೇಶದ ಮೇರೆಗೆ ಜಾರಿ ನಿರ್ದೇಶನಾಲಯ ಈ ದಾಳಿಗಳನ್ನು ಕೈಗೊಂಡಿದೆ ಎಂದು ಹೇಳಲಾಗಿದೆ.
ಮುಂಬೈ ಹಾಗೂ ದೆಹಲಿಯಲ್ಲೇ ಸುಮಾರು 1000 ಬೇನಾಮಿ ಕಂಪನಿಗಳು ಪತ್ತೆಯಾಗಿದ್ದು, ಇವುಗಳಲ್ಲಿ ಒಬ್ಬನೇ ವ್ಯಕ್ತಿಯ ಹೆಸರಲ್ಲಿ 700 ಕಂಪನಿಗಳು ಅಸ್ತಿತ್ವದಲ್ಲಿರುವುದು ಪತ್ತೆಯಾಗಿದೆ.

ನೋಯ್ಡಾದ ಮಾಜಿ ಇಂಜಿನಿಯರ್ ಯಾದವ್ ಸಿಂಗ್ ಅವರಿಗೆ ಸೇರಿದ ಕೆಲ ಕಂಪನಿಗಳೂ ಇವೆ ಎಂದು ಹೇಳಲಾಗಿದೆ. ಬೆಂಗಳೂರು, ಚೆನ್ನೈಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.
ಈ ಬೇನಾಮಿ ಕಂಪನಿಗಳ ನಡುವೆ ಹಲವಾರು ಬಾರಿ ಲಕ್ಷಗಟ್ಟಲೆ ಹಣವು ಹರಿದಾಡಿದೆ. ಸರ್ಕಾರಿ ತೆರಿಗೆ ಕಟ್ಟದಂತೆ ಯಾಮಾರಿಸಿ ಇಂಥ ವ್ಯವಹಾರಗಳನ್ನು ನಡಸಲಾಗಿದೆ.
ಇಂಥ ಬೇನಾಮಿ ಕಂಪನಿಗಳ ಮೂಲಕವೇ ರಾಜಕಾರಣಿಗಳು, ದೊಡ್ಡ ಕಂಪನಿಗಳು ತಮ್ಮಲ್ಲಿನ ಕಪ್ಪು ಹಣವನ್ನು ತೊಡಗಿಸಿ ಅವು ಭದ್ರವಾಗಿ, ಸರ್ಕಾರದ ಕಣ್ಣಿಗೆ ಬೀಳದಂತೆ ಮರೆ ಮಾಚಿವೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ನಿರ್ದಿಷ್ಟ ಕಂಪನಿಯೊಂದರಲ್ಲಿ ಮಹಾರಾಷ್ಟ್ರದ ಎನ್ ಸಿಪಿ ನಾಯಕ ಛಗನ್ ಭುಜಬಲ್ ಅವರ ಹೆಸರಿನಲ್ಲಿ ಸುಮಾರು 45 ಕೋಟಿ ರು. ಜಮೆಯಾಗಿರುವುದು ಇಂಥ ಹನುಮಾನಗಳಿಗೆ ಪುಷ್ಟಿ ನೀಡಿದೆ. ಇಂಥ ಹಣದಲ್ಲಿ ಆಂಧ್ರ ಪ್ರದೇಶದ ವೈಎಸ್ ಆರ್ ಪಕ್ಷದ ನಾಯಕ ಜಗನ್ ರೆಡ್ಡಿ ಅವರಿಗೆ ಸೇರಿದ ಕಂಪನಿಗಳೂ ಇವೆ ಎಂದು ಹೇಳಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications