ಚಿಟ್ ಫಂಡ್ ವಂಚನೆ: ಅಪರ್ಣಾ ಸೇನ್ ವಿಚಾರಣೆ
ಕೋಲ್ಕತ್ತಾ, ಆ.18: - ಬಹುಕೋಟಿ ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ ಪ್ರಶಸ್ತಿ ವಿಜೇತೆ, ನಿರ್ದೇಶಕಿ ಅಪರ್ಣಾ ಸೇನ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಡಿಸಿದೆ.
ಕೋಲ್ಕತ್ತಾದ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಬೆಳಗ್ಗೆ 11ರ ವೇಳೆಗೆ ಅಪರ್ಣಾ ಸೇನ್ ಅವರು ಹಾಜರಾಗಿದ್ದರು. ಚಿಟ್ ಫಂಡ್ ಮುಖ್ಯಸ್ಥ ಸುದೀಪ್ತೋ ಸೇನ್ ಅವರಿಗೆ ಅಪರ್ಣಾ ಅವರು ತಮ್ಮ ಮ್ಯಾಗಜೀನ್ ಪರಮ ದಲ್ಲಿ ಭಾರಿ ಪ್ರಚಾರ ನೀಡಿದ್ದರು.
ಇದೇ ಸಂದರ್ಭದಲ್ಲಿ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯ ಜವಳಿ ಸಚಿವ ಶ್ಯಾಮ್ಪಾದ ಮುಖರ್ಜಿ ಅವರನ್ನೂ ವಿಚಾರಣೆಗೊಳಪಡಿಸುವ ಸಂಭವವಿದೆ. 2009ರಲ್ಲಿ ನಡೆದ ಶಾರದಾ ಚಿಟ್ಫಂಡ್ ಹಗರಣದಲ್ಲಿ ತಮ್ಮದೇನೂ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಶ್ಯಾಮ್ಪಾದ ಮುಖರ್ಜಿ, ಶಾರದಾ ಚಿಟ್ ಫಂಡ್ ಸಮೂಹಕ್ಕೆ ನನಗೆ ಸೇರಿದ್ದ ಕೊಂಚ ಭೂಮಿಯನ್ನು ಮಾರಾಟ ಮಾಡಿದ್ದೇನಷ್ಟೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಶಾರದಾ ಸಮೂಹ ಕಳೆದ ಹಲವಾರು ವರ್ಷಗಳಿಂದ ಹಲವು ಹಂತದ ಚಿಟ್ಫಂಡ್ ವ್ಯವಹಾರ ನಡೆಸುತ್ತಿದ್ದು, ಕಳೆದ ಏಪ್ರಿಲ್ನಲ್ಲಿ ದಿವಾಳಿಯಾಗಿತ್ತು. ಇದರಿಂದ ಸಾವಿರಾರು ಸಣ್ಣ ಹೂಡಿಕೆದಾರರು ತಮ್ಮ ಉಳಿತಾಯದ ಹಣವನ್ನು ಕಳೆದುಕೊಂಡು ಕಂಗಾಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಪ್ರಕರಣದಲ್ಲಿ ಸುದೀಪ್ತೋ ಸೇನ್ ಅವರ ಪತ್ನಿ ಪಿಯಾಲಿ ಸೇನ್ ಗೆ ಜಾಮೀನು ದೊರೆತಿದೆ.
ಅದರೆ, ಮಗ ಸುಭೋಜಿತ್ ಸೇನ್ ಗೆ ಜಾಮೀನು ಸಿಕ್ಕಿಲ್ಲ. ಜು.24ರಂದು ತೃಣಮೂಲ ಕಾಂಗ್ರೆಸ್ ಸಂಸದ ಮಿಥುನ್ ಚಕ್ರವರ್ತಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ಮಾಡಿತ್ತು. ಇದಕ್ಕೂ ಮುನ್ನ ಬಿಜೆಡಿ ಶಾಸಕ ಪ್ರವತಾ ತ್ರಿಪಾಠಿ ಅವರ ಕಚೇರಿ ಸೇರಿದಂತೆ 60ಕ್ಕೂ ಅಧಿಕ ತಾಣಗಳ ಮೇಲೆ ಸಿಬಿಐ ಇತ್ತೀಚೆಗೆ ದಾಳಿ ನಡೆಸಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications