ವಿಡಿಯೋ: ಚುನಾವಣೆ ಸಮಯದಲ್ಲಿ ಇಡಿ ದಾಳಿ, ಹಣದ ರಾಶಿ ನೋಡಿ
ನವದೆಹಲಿ, ಮೇ 06: ಲೋಕಸಭೆ ಚುನಾವಣೆಯ ಸಮಯದಲ್ಲಿಯೇ ಜಾರಿ ನಿರ್ದೇಶನಾಲಯ ಬಹುದೊಡ್ಡ ದಾಳಿಯೊಂದನ್ನು ನಡೆಸಿದೆ. ಸಚಿವರೊಬ್ಬರ ಆಪ್ತ ಕಾರ್ಯದರ್ಶಿಯ ಸಹಾಯಕನ ಮನೆಯಲ್ಲಿ ರಾಶಿಗಟ್ಟಲೇ ಹಣ ಪತ್ತೆಯಾಗಿದ್ದು, ಎಣಿಕೆ ಕಾರ್ಯವನ್ನು ಮಾಡಲಾಗುತ್ತಿದೆ.
ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ರಾಜ್ಯದ ರಾಂಚಿಯ ವಿವಿಧ ಪ್ರದೇಶಗಳ ಮೇಲೆ ದಾಳಿಯನ್ನು ನಡೆಸಿದೆ. ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜಯ್ ಲಾಲ್ ಸಹಾಯಕನ ಮನೆಯಲ್ಲಿ ಹಣದ ರಾಶಿ ಪತ್ತೆಯಾಗಿದೆ.

ಸುಮಾರು 20 ಕೋಟಿ ಹಣ ಇರಬಹುದು ಎಂದು ಇಡಿ ಅಧಿಕಾರಿಗಳು ಅಂದಾಜಿಸಿದ್ದಾರೆ. ಹಣದ ಎಣಿಕೆ ಕಾರ್ಯವನ್ನು ಅಧಿಕಾರಿಗಳು ಆರಂಭಿಸಿದ್ದು, ಸಂಜೆಯ ವೇಳೆಗೆ ಎಷ್ಟು ಹಣ ಇದೆ ಎಂಬ ಅಧಿಕೃತ ಮಾಹಿತಿ ತಿಳಿಯುವ ನಿರೀಕ್ಷೆ ಇದೆ.
ಮನೆಯಲ್ಲಿನ ಬ್ಯಾಗ್, ಕಮೋಡ್, ಅಲ್ಮೇರಾಗಳಲ್ಲಿ ಸಿಕ್ಕ ಹಣವನ್ನು ಎಣಿಕೆ ಮಾಡಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒಂದು ಕಡೆ ರಾಶಿ ಹಾಕಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಇದು ಅತಿ ದೊಡ್ಡ ದಾಳಿ ಎಂದು ಅಂದಾಜಿಸಲಾಗಿದೆ.
ಹಗರಣದ ತನಿಖೆ ನಡೆಸುತ್ತಿರುವ ಇಡಿ: ಜಾರಿ ನಿರ್ದೇಶನಾಲಯ ಈಗಾಗಲೇ ಜಾರ್ಖಂಡ್ ರಾಜ್ಯದಲ್ಲಿ ವಿರೇಂದ್ರ ಕೆ. ರಾಮ್ ಪ್ರಕರಣದ ತನಿಖೆ ನಡೆಸುತ್ತಿದೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ವಿರೇಂದ್ರ ಕೆ. ರಾಮ್ ಅವರನ್ನು ಇಡಿ 2023ರ ಫೆಬ್ರವರಿಯಲ್ಲಿಯೇ ಬಂಧಿಸಿದೆ.
ವಿಡಿಯೋ ವೈರಲ್
#WATCH | The Enforcement Directorate is conducting raids at multiple locations in Ranchi. Huge amount of cash recovered from household help of Sanjiv Lal - PS to Jharkhand Rural Development minister Alamgir Alam, in Virendra Ram case.
— ANI (@ANI) May 6, 2024
ED arrested Virendra K. Ram, the chief… pic.twitter.com/VTpUKBOPE7
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿರೇಂದ್ರ ಕೆ. ರಾಮ್ ಬಂಧಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಲವು ಯೋಜನೆ ಜಾರಿಗೊಳಿಸುವಾಗ ಅಕ್ರಮಗಳನ್ನು ಮಾಡಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬುದು ಆರೋಪ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಡಿ ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿಯನ್ನು ಮಾಡಿದೆ.
ಇಡಿ ವಿರೇಂದ್ರ ಕೆ. ರಾಮ್ ಬಂಧಿಸಿದಾಗ ಸುಮಾರು 100 ಕೋಟಿ ಅಕ್ರಮ ಆಸ್ತಿ ಸಂಗ್ರಹ ಮಾಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿತ್ತು. ಅವರ ಮನೆಯಲ್ಲಿ ವಶಕ್ಕೆ ಪಡೆದ ಪೆನ್ ಡ್ರೈವ್ನಲ್ಲಿನ ಮಾಹಿತಿಗಳನ್ನು ಆಧರಿಸಿ ಇಡಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.
2023ರಲ್ಲಿ ವಿರೇಂದ್ರ ಕೆ. ರಾಮ್ ಬಂಧಿಸಿದ ಕೆಲವೇ ದಿನಗಳಲ್ಲಿ ಇಡಿ ರಾಂಚಿ, ಜೆಮ್ಶೆಡ್ಪುರ, ಬಿಹಾರ, ದೆಹಲಿ ಸೇರಿದಂತೆ ಕೆಲವು ಪ್ರದೇಶಗಳ ಮೇಲೆ ದಾಳಿ ಮಾಡಿತ್ತು. ಆಗಲೂ ಕಂತೆ ಕಂತೆ ಹಣ ಪತ್ತೆಯಾಗಿತ್ತು. ಈಗ ನಡೆದಿರುವ ದಾಳಿಯಲ್ಲಿ 20 ರಿಂದ 30 ಕೋಟಿ ಹಣವಿರಬಹುದು ಎಂದು ಅಂದಾಜಿಸಲಾಗಿದೆ.
ವಿರೇಂದ್ರ ಕೆ. ರಾಮ್ ಬಗ್ಗೆ ದೂರು ಬಂದ ಬಳಿಕ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಲಾಗಿತ್ತು. ಆಗ ಹಣ ಪತ್ತೆಯಾಗಿತ್ತು. ಬಳಿಕ ವಿರೇಂದ್ರ ಕೆ. ರಾಮ್ ವಿಚಾರಣೆಗೆ ಕರೆದಿದ್ದ ಇಡಿ, ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು. ಬಳಿಕ ಅವರಿಗೆ ಸೇರಿದ ಹಲವು ಪ್ರದೇಶಗಳಲ್ಲಿ ಮತ್ತೆ ದಾಳಿಯನ್ನು ನಡೆಸಿತ್ತು.
ವಿರೇಂದ್ರ ಕೆ. ರಾಮ್ ಬಂಧಿಸಿದ ಬಳಿಕ 30 ಪ್ರದೇಶಗಳ ಮೇಲೆ ಇಡಿ ದಾಳಿ ನಡೆಸಿತ್ತು. ಆಗ 30 ಲಕ್ಷ ರೂ. ಹಣ, 1.5 ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದ್ದವು. ಹಲವು ವಾಹನಗಳನ್ನು ಖರೀದಿ ಮಾಡಿದ ದಾಖಲೆಗಳು ಸಿಕ್ಕಿದ್ದವು. 2019ರಲ್ಲಿಯೂ ರಾಜ್ಯದ ಎಸಿಬಿ ವಿರೇಂದ್ರ ಕೆ. ರಾಮ್ ಮನೆ ಮೇಲೆ ಅಕ್ರಮ ಆಸ್ತಿಗಳಿಕೆ ಪ್ರಕರಣ ದಾಖಲಿಸಿಕೊಂಡು ದಾಳಿ ಮಾಡಿತ್ತು. ಆಗ 2.82 ಕೋಟಿ ಹಣ ಪತ್ತೆಯಾಗಿತ್ತು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications