ಶಾಸಕನಿಂದ 100 ಕೋಟಿ ಆಸ್ತಿ ವಶಪಡಿಸಿಕೊಂಡ ಇಡಿ, ಬೆಚ್ಚಿಬಿದ್ದ ಜನ!
ದೇಶದಲ್ಲಿ ಭಾರೀ ದೊಡ್ಡ ಕಾರ್ಯಾಚರಣೆಯೊಂದು ನಡೆದಿದ್ದು. ಜಾರಿ ನಿರ್ದೇಶನಾಲಯವು ರಾಜಕಾರಣಿಯೊಬ್ಬರಿಂದ ಬರೋಬ್ಬರಿ 100 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಹೌದು ಜಾರಿ ನಿರ್ದೇಶನಾಲಯವು ಆಗಾಗ ವಿಶೇಷ ಕಾರ್ಯಾಚರಣೆಗಳನ್ನು ನಡೆಸುವುದು ಇದೆ. ಇದೀಗ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ತಮಿಳುನಾಡಿನ ಶಾಸಕರೊಬ್ಬರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು.
ಇತ್ತೀಚಿನ ದಿನಗಳಲ್ಲಿ ಇಡಿ ನಡೆಸಿದ ದೊಡ್ಡ ಕಾರ್ಯಾಚರಣೆ ಇದಾಗಿದೆ. ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದ್ದು. ದೇಶದಾದ್ಯಂತ ಜನ ಹುಬ್ಬೇರಿಸುವಂತೆ ಮಾಡಿದೆ. ಹಾಗಾದರೆ ಏನಿದು ಘಟನೆ, ಈ ರೀತಿ ಕೋಟ್ಯಾಂತರ ರೂಪಾಯಿ ಆಸ್ತಿ ವಶಪಡಿಸಿಕೊಳ್ಳುವುದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.

ತಮಿಳುನಾಡಿನ ಒರಥನಾಡು ಶಾಸಕ ಹಾಗೂ ಮಾಜಿ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಅವರಿಗೆ ಸೇರಿದ 100 ಕೋಟಿಗೂ ಹೆಚ್ಚು ಮೌಲ್ಯ ಎರಡು ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾರಿ ನಿರ್ದೇಶನಾಲಯದ ಚೆನ್ನೈ ವಲಯ ಕಚೇರಿಯು ಬೃಹತ್ ಕಾರ್ಯಾಚರಣೆ ನಡೆಸಿದೆ. ಶಾಸಕನಿಗೆ ಸೇರಿದ ಬರೋಬ್ಬರಿ 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಎರಡು ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ನಿಬಂಧನೆಗಳ ಅಡಿಯಲ್ಲಿ ಇಡಿ ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಹೇಳಿದೆ. ಇನ್ನು ಜಪ್ತಿ ಮಾಡಲಾದ ಆಸ್ತಿಗಳನ್ನು ಶಾಸಕ ವೈತಿಲಿಂಗಂ ಅವರ ಕುಟುಂಬದ ಒಡೆತನದ ಮುತ್ತಮ್ಮಲ್ ಎಸ್ಟೇಟ್ಸ್ ಪ್ರೈ. ಲಿ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ.
ಪ್ರಕರಣದ ಹಿನ್ನೆಲೆ ಏನು: ಲಂಚ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಬೃಹತ್ ಕಾರ್ಯಾಚರಣೆ ನಡೆದಿದೆ. ಲಂಚ ಸ್ವೀಕರಿಸಿರುವ ಆರೋಪದ ಮೇಲೆ ವೈತಿಲಿಂಗಂ ಹಾಗೂ ಅವರ ಕುಟುಂಬದವರ ಮೇಲೆ ತಮಿಳುನಾಡಿನ ವಿಚಕ್ಷಣಾ ಹಾಗೂ ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120B ಮತ್ತು 1988 ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ಸಹ ದಾಖಲಿಸಿಕೊಳ್ಳಲಾಗಿತ್ತು.
ವೈತಿಲಿಂಗಂ ಅವರು ಸಚಿವರಾಗಿದ್ದಾಗ ರಿಯಲ್ ಎಸ್ಟೇಟ್ ಯೋಜನೆಗೆ ಯೋಜನಾ ಅನುಮತಿ ನೀಡುವ ಸಂದರ್ಭದಲ್ಲಿ ಶ್ರೀರಾಮ್ ಪ್ರಾಪರ್ಟೀಸ್ ಹಾಗೂ ಇನ್ಫ್ರಾಸ್ಟ್ರಕ್ಚರ್ನಿಂದ ಬರೋಬ್ಬರಿ 27.90 ಕೋಟಿ ರೂಪಾಯಿಯನ್ನು ಲಂಚ ರೂಪದಲ್ಲಿ ಸ್ವೀಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.
ಈ ಪ್ರಕರಣ ದಾಖಲಾಗುತ್ತಿದ್ದಂತೆಯೇ ಎಐಎಡಿಎಂಕೆ ಪಕ್ಷದಿಂದ ವೈತಿಲಿಂಗಂ ಅವರನ್ನು ಉಚ್ಛಾಟನೆ ಸಹ ಮಾಡಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಜಾರಿ ನಿರ್ದೇಶನಾಯವು ಶೋಧಕ್ಕೆ ಇಳಿದಿತ್ತು. ವೈತಿಲಿಂಗಂ ಅವರು ಅಕ್ರಮವಾಗಿ ವಹಿವಾಟು ನಡೆಸಿರುವುದಾಗಿಯೂ ಹಾಗೂ ಆ ಮೊತ್ತವನ್ನು ಅಕ್ರಮ ಆಸ್ತಿಗಳಲ್ಲಿ ವಿನಿಯೋಗಿಸಿದಾಗಿಯೂ ವಿಚಾರಣೆಯಲ್ಲಿ ಬಹಿರಂಗವಾದ ಹಿನ್ನೆಲೆಯಲ್ಲಿ ಆಸ್ತಿಗಳನ್ನು ವಶಪಡಿಸಿಕೊಂಡಿರುವುದಾಗಿ ಇಡಿ ಹೇಳಿದೆ.
ಬೆಚ್ಚಿಬಿದ್ದ ತಮಿಳುನಾಡು: ಬಹುಕೋಟಿ ಹಗರಣದ ವಿಷಯವನ್ನು ಕೇಳಿ ತಮಿಳುನಾಡು ಬೆಚ್ಚಿಬಿದ್ದಿದೆ. ಇನ್ನು 100 ಕೋಟಿಗೂ ಹೆಚ್ಚು ಮೊತ್ತವನ್ನು ವಶಪಡಿಸಿಕೊಂಡಿರುವ ಇಡಿಯು ತನಿಖೆಯನ್ನು ಮುಂದುವರಿಸಿದೆ. ಭ್ರಷ್ಟಾಚಾರ ಆರೋಪ ಕೇಳಿ ಬಂದ ಬೆನ್ನಲ್ಲೇ ಎಐಎಡಿಎಂಕೆ ಪಕ್ಷದಿಂದ ವೈತಿಲಿಂಗಂ ಅವರನ್ನು ಉಚ್ಛಾಟನೆ ಮಾಡಲಾಗಿತ್ತು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications