Edappadi Palaniswami: ಎಡಪ್ಪಾಡಿ ಕೆ. ಪಳನಿಸ್ವಾಮಿ ತಮಿಳುನಾಡು ಎನ್ಡಿಎ ಒಕ್ಕೂಟದ ಸಿಎಂ ಅಭ್ಯರ್ಥಿ
ದಕ್ಷಿಣ ಭಾರತದ ಪ್ರಮುಖ ರಾಜ್ಯ, ಅದರಲ್ಲೂ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಕ್ಕೆ ಸವಾಲಾಗಿ ಪರಿಣಮಿಸಿರುವ ತಮಿಳುನಾಡು ರಾಜ್ಯದಲ್ಲಿ ಈ ಬಾರಿ ಹೈವೋಲ್ಟೇಜ್ ಎಲೆಕ್ಷನ್ ನಡೆಯುತ್ತಿದೆ. ಇಲ್ಲಿ ಗೆದ್ದು ದಕ್ಷಿಣ ಭಾರತದಲ್ಲಿ ಕೂಡ ತನ್ನ ಹವಾ ಎಬ್ಬಿಸಲು ಸಜ್ಜಾಗಿದ್ದಾರೆ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ನಾಯಕರು. ಇದೇ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದ ಅಭ್ಯರ್ಥಿ ಆಯ್ಕೆಗೂ ಸಾಕಷ್ಟು ಚಿಂತನೆ ನಡೆಸಲಾಗಿತ್ತು. ಎಲ್ಲಾ ಚರ್ಚೆಗಳ ನಂತರ ಇದೀಗ ಅಧಿಕೃತವಾಗಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನ ತಮಿಳುನಾಡು ವಿಧಾನಸಭೆ ಚುನಾವಣೆಗೆ ಎನ್ಡಿಎ ಒಕ್ಕೂಟದ ಸಿಎಂ ಅಭ್ಯರ್ಥಿ ಎಂದು ಘೋಷಿಸಲಾಗಿದೆ.
ತಮಿಳುನಾಡು ರಾಜ್ಯ ಇಡೀ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳ ಪೈಕಿ ಒಂದಾಗಿದೆ. ಅಲ್ಲದೆ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಭಾವಿ ರಾಜ್ಯ ಕೂಡ ತಮಿಳುನಾಡು ಎಂದು ಹೇಳಬಹುದು. ಆದರೆ ಇಡೀ ದೇಶದಲ್ಲಿ ತಮ್ಮ ಸಾಮರ್ಥ್ಯ ತೋರಿಸಿರುವ ಬಿಜೆಪಿ ನಾಯಕರಿಗೆ ಈ ರಾಜ್ಯ ಸಾಕಷ್ಟು ಸವಾಲು ಹಾಕಿತ್ತು. ಹೇಗಾದರೂ ಮಾಡಿ ತಮಿಳುನಾಡು ರಾಜ್ಯ ಗೆಲ್ಲಬೇಕು ಎಂಬುದೇ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ನಾಯಕರ ಒನ್ಲೈನ್ ಅಜೆಂಡಾ ಆಗಿದ್ದು, ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡು ಎಲೆಕ್ಷನ್ ಎದುರಿಸಲು ಸಜ್ಜಾಗಿದ್ದಾರೆ.

ಡಿಎಂಕೆ ಸೋಲಿಸಲು ಬಿಜೆಪಿ ಅಸ್ತ್ರ
ತಮಿಳುನಾಡು ಚುನಾವಣೆ ಗೆಲುವಿಗೆ ಈಗ ಪೂರಕವಾಗಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ಇದೀಗ ಸಿಎಂ ಅಭ್ಯರ್ಥಿ ಪಟ್ಟ ಕಟ್ಟಲಾಗಿದೆ. ಇದರ ಹಿಂದೆ ಎನ್ಡಿಎ ನಾಯಕರ ಭಾರಿ ದೊಡ್ಡ ರಣತಂತ್ರವು ಕೂಡ ಅಡಗಿದೆ. ಈಗ ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕ ಅಧ್ಯಕ್ಷರಾದ ನೈನಾರ್ ನಾಗೇಂದ್ರನ್ ಅವರು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಆಯ್ಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದು, ಈ ಮೂಲಕ ಕೆಲವರಿಗೆ ನಿರಾಸೆಯಾಗಿದ್ದರೆ ಹೈಕಮಾಂಡ್ ನಾಯಕರಿಗೆ ಇದು ಹೊಸ ಅಸ್ತ್ರವನ್ನೇ ನೀಡಿದಂತೆ ಆಗಿದೆ. ಡಿಎಂಕೆ ಸೋಲಿಸಲು ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟ ಹೊಸ ಅಸ್ತ್ರ ಪ್ರಯೋಗಿಸಿದೆ.
ಪಳನಿಸ್ವಾಮಿಗೆ ಪಟ್ಟ ಕಟ್ಟಿದ್ದು ಏಕೆ?
ತಮಿಳುನಾಡು ರಾಜಕೀಯದಲ್ಲಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ಹೆಚ್ಚು ಹಿಡಿತ ಇದೆ, ಅದರಲ್ಲೂ ಈ ಸಮಯದಲ್ಲಿ ಪಳನಿಸ್ವಾಮಿಗೆ ಠಕ್ಕರ್ ಕೊಡುವಂತಹ ನಾಯಕರು ತಮಿಳುನಾಡು ಬಿಜೆಪಿ ಪಕ್ಷದಲ್ಲೂ ಇಲ್ಲ. ಇದರ ಜೊತೆಗೆ ಸ್ವತಃ ಪಳನಿಸ್ವಾಮಿ ಅವರ ಎಐಎಡಿಎಂಕೆ ಪಕ್ಷದಲ್ಲಿ ಕೂಡ ಇವರನ್ನು ಮೀರಿಸಿ ಸಿಎಂ ಅಭ್ಯರ್ಥಿ ಆಗುವ ಮತ್ತೊಬ್ಬ ನಾಯಕ ಕಂಡಿಲ್ಲ. ಹೀಗಾಗಿ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವಕ್ಕೇ ಜೈ ಎನ್ನಲಾಗಿದ್ದು, ತಮಿಳುನಾಡು ಚುನಾವಣೆಗೆ ಮತ್ತಷ್ಟು ರಂಗು ಬಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications