ನೀಟ್, ಜೆಇಇ ಪರೀಕ್ಷೆಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರದ ಮಹತ್ವದ ಚಿಂತನೆ
ನವದೆಹಲಿ, ಡಿಸೆಂಬರ್ 10: ವೈದ್ಯಕೀಯ ಕೋರ್ಟ್ಗಳ ಪ್ರವೇಶಕ್ಕೆ ನಡೆಯುವ ನೀಟ್ 2021ರ ಪರೀಕ್ಷೆಯನ್ನು ರದ್ದುಗೊಳಿಸುವ ಯಾವುದೇ ಉದ್ದೇಶ ಸರ್ಕಾರದ ಮುಂದೆ ಇಲ್ಲ. ಜತೆಗೆ ಜೆಇಇ ಮುಖ್ಯ ಪರೀಕ್ಷೆಯನ್ನು ಹಲವು ಅವಧಿಗಳಲ್ಲಿ ನಡೆಸಲು ಚಿಂತಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಗುರುವಾರ ತಿಳಿಸಿದರು.
ನೇರ ಪ್ರಸಾರದಲ್ಲಿ ಮಾತನಾಡಿದ ಅವರು, ಸಿಬಿಎಸ್ಸಿ ಮಂಡಳಿ ಪರೀಕ್ಷೆ 2021, ಜೆಇಇ ಮೇನ್ 2021 ಮತ್ತು ನೀಟ್ 2021 ಪರೀಕ್ಷೆಗಳ ಕುರಿತಾದ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪರೀಕ್ಷೆಗಳ ಕುರಿತು ಸಲಹೆಗಳನ್ನು ನೀಡುವಂತೆ ಆಹ್ವಾನಿಸಿದ ಅವರು, ಅವರ ಎಲ್ಲ ಕಳವಳಗಳನ್ನು ಪರಿಶೀಲಿಸುವ ಭರವಸೆ ನೀಡಿದರು.
ಕೊರೊನಾ ವೈರಸ್ ಸೋಂಕಿನ ಭೀತಿ ನಡುವೆ ಯಶಸ್ವಿಯಾಗಿ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು (ಎನ್ಟಿಎ) ಶ್ಲಾಘಿಸಿದ ಪೋಖ್ರಿಯಾಲ್, ಇದು ರಾಜ್ಯ ಚುನಾವಣೆಗಳನ್ನು ಆಯೋಜಿಸಲು ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಕೂಡ ನೆರವಾಗಿತ್ತು ಎಂದರು. ಮುಂದೆ ಓದಿ.

ಮೂರು ನಾಲ್ಕು ಬಾರಿ ಪರೀಕ್ಷೆ
ಜೆಇಇ ಕುರಿತು ವಿದ್ಯಾರ್ಥಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ನಾವು ಜೆಇಇ ಪರೀಕ್ಷೆಗಳನ್ನು ಎರಡಕ್ಕೂ ಹೆಚ್ಚು ಬಾರಿ ನಡೆಸುವ ಕಾರ್ಯಸಾಧ್ಯತೆಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಜೆಇಇಗೆ ಮೂರು ಅಥವಾ ನಾಲ್ಕು ಬಾರಿ ಕುಳಿತುಕೊಳ್ಳುವ ಅವಕಾಶಗಳು ಮುಂದೆ ಸಿಗಬಹುದು' ಎಂದು ತಿಳಿಸಿದರು.

ಪ್ರಾಕ್ಟಿಕಲ್ ಪರೀಕ್ಷೆ ಬಗ್ಗೆ ಆತಂಕ
ಪ್ರಾಕ್ಟಿಕಲ್ ಪರೀಕ್ಷೆಗಳ ಬಗ್ಗೆ ಅನೇಕ ಪ್ರಶ್ನೆಗಳು ಕೇಳಿಬಂದವು. ಶಾಲೆಗಳು ಇನ್ನೂ ತೆರೆದಿಲ್ಲ. ಇದರಿಂದ ಪ್ರಾಕ್ಟಿಕಲ್ ವಿದ್ಯಾರ್ಥಿಗಳು ತಮಗೆ ಪ್ರಾಕ್ಟಿಕಲ್ ಪರೀಕ್ಷೆಗಳು ಇರುತ್ತವೆಯೇ ಎಂಬ ಚಿಂತೆಗೆ ಒಳಗಾಗಿದ್ದಾರೆ ಎಂದು ಅನೇಕರು ಹೇಳಿದರು.

ದಿನಾಂಕ ಪ್ರಕಟಿಸಿ
2021ರ ಸಿಬಿಎಸ್ಇ ಮಂಡಳಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿಲ್ಲ. ಹೀಗಾಗಿ ಪಠ್ಯ ಮತ್ತು ಪರೀಕ್ಷೆಗೆ ಸಿದ್ಧವಾಗಲು ವಿದ್ಯಾರ್ಥಿಗಳಿಗೆ ಸಿಗುವ ಸಮಯದ ಬಗ್ಗೆ ಪ್ರಶ್ನಿಸಲಾಯಿತು. ಸಿಬಿಎಸ್ಇ ಮಂಡಳಿ ಪರೀಕ್ಷೆಯ ಸಿಲಬಸ್ ಕಡಿತಕ್ಕೆ ವಿದ್ಯಾರ್ಥಿಗಳು ಕೋರಿದರು.

ಶಿಕ್ಷಕರು ಮಾಹಿತಿ ನೀಡಲಿ
ಈಗಾಗಲೇ ಸಿಲಬಸ್ ಅನ್ನು ಶೇ 30ರಷ್ಟು ತಗ್ಗಿಸಲಾಗಿದೆ. ಯಾವ ಅಧ್ಯಾಯಗಳನ್ನು ತೆಗೆಯಲಾಗಿದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಶಿಕ್ಷಕರು ನೀಡಬೇಕು. ಪರೀಕ್ಷೆಯ ದಿನಾಂಕದ ಬಗ್ಗೆ ಪರಿಸ್ಥಿತಿಗಳನ್ನು ಅವಲೋಕಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಚಿವರು ಸೂಚಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications