ಈದ್ 2018: ಕೇರಳದಲ್ಲಿ ಶುಕ್ರವಾರ, ಇತರೆಡೆ ಶನಿವಾರ ಆಚರಣೆ
ನವದೆಹಲಿ, ಜೂನ್ 14: ಮುಸ್ಲಿಮರ ಪವಿತ್ರ ಹಬ್ಬ ಈದ್- ಉಲ್ ಫಿತ್ರ್ ವನ್ನು ಕೇರಳದಲ್ಲಿ ಶುಕ್ರವಾರದಂದೇ ಹಬ್ಬ ಆಚರಿಸಿದರೆ, ಭಾರತದ ಉಳಿದೆಡೆ ಶನಿವಾರದಂದು ಹಬ್ಬ ಆಚರಿಸಲಾಗುವುದು ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ಸಯದ್ ಅಹ್ಮದ್ ಬುಖಾರಿ ಅವರು ಹೇಳಿದ್ದಾರೆ.
ಕೇರಳದ ರಾಜಧಾನಿ ತಿರುವನಂತಪುರಂನಿಂದ ಸುಮಾರು 370 ಕಿ.ಮೀದಲ್ಲಿರುವ ಕೋಯಿಕ್ಕಾಡ್ ಜಿಲ್ಲೆಯಲ್ಲಿ ಚಂದ್ರ ದರ್ಶನವಾಗಿದ್ದರಿಂದ ಕೇರಳದಲ್ಲಿ ನಾಳೆ ದಿನ ಹಬ್ಬ ಆಚರಿಸಲಾಗುತ್ತದೆ.

ಚಂದ್ರ ದರ್ಶನದ ಮಾಹಿತಿ ಸಿಕ್ಕ ಬಳಿಕ ಜಾಮಾ ಮಸೀದಿಯ ಶಾಹಿ ಇಮಾಮ್ ಅವರು ಸಭೆ ನಡೆಸಿ, ಹಬ್ಬ ಆಚರಣೆ ಕುರಿತಂತೆ, ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ರಮ್ಜಾನ್ ತಿಂಗಳ ಅಂತ್ಯದಲ್ಲಿ ಈದ್ -ಉಲ್ ಫಿತ್ರ್ ಆಚರಿಸಲಾಗುತ್ತದೆ. ಒಂದು ತಿಂಗಳ ಅತ್ಯಂತ ಶ್ರದ್ಧೆಯ ಉಪವಾಸ ವ್ರತ (ರೋಜಾ) ತೆರೆಬಿದ್ದಿದೆ. ಸೂರ್ಯೋದಯದ ನಂತರ ಮತ್ತು ಸೂರ್ಯಾಸ್ತವಾಗುವ ಮೊದಲು ಹನಿ ನೀರು ಕೂಡ ಹೊಟ್ಟೆಗಿಳಿಸದಂತಹ ಕಠಿಣ ವ್ರತ ಪಾಲನೆ ಸುಲಭವಲ್ಲ. ಒಂದು ತಿಂಗಳ ರೋಜಾ ನಂತರ ವಿಶ್ವದೆಲ್ಲೆಡೆ ಈದ್ ಉಲ್ ಫಿತ್ರ್ ಆಚರಣೆ ಅಂಗವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications