ಛತ್ತೀಸ್ಗಢ ವಿಧಾನಸಭೆ ಚುನಾವಣೆ: ನಕ್ಸಲರ ದಾಳಿ, ಐಇಡಿ ಸ್ಫೋಟ, ಭದ್ರತಾ ಸಿಬ್ಬಂದಿಗೆ ಗಾಯ
ಛತ್ತೀಸ್ಗಢದಲ್ಲಿ ಮಂಗಳವಾರ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ನಕ್ಸಲೀಯರು ಐಇಡಿ ಸ್ಫೋಟಿಸಿದ್ದು ಮತ್ತು ಭದ್ರತಾ ಪಡೆಗಳ ನಡುವೆ ಎಂಟು ಎನ್ಕೌಂಟರ್ಗಳು ನಡೆದಿವೆ ಅಧಿಕಾರಿಗಳು ತಿಳಿಸಿದ್ದಾರೆ.
ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರೆ, ಅದೇ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಪ್ರಮುಖ ಘಟಕವಾದ ಕೋಬ್ರಾ ಕಮಾಂಡೋ ಗಾಯಗೊಂಡಿದ್ದಾರೆ.

ಚುನಾವಣಾ ಕರ್ತವ್ಯದ ವೇಳೆ ಕಂಕೇರ್ ಜಿಲ್ಲೆಯಲ್ಲಿ ಸೋಮವಾರ ನಡೆದ ಐಇಡಿ ಸ್ಫೋಟದಲ್ಲಿ ಗಾಯಗೊಂಡಿದ್ದ ಗಡಿ ಭದ್ರತಾ ಪಡೆಯ ಯೋಧ ಮಂಗಳವಾರ ರಾಯ್ಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಭದ್ರತಾಪಡೆಗಳು- ನಕ್ಸಲರ ಮುಖಾಮುಖಿ
ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಬಂದಾ, ಮಿಂಪಾ ಮತ್ತು ಲಕಾಹಪಾಲ್ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್ಕೌಂಟರ್ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಿಂಪಾ ಎನ್ಕೌಂಟರ್ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಕಂಕೇರ್ ಜಿಲ್ಲೆಯಲ್ಲಿ, ಛೋಟೆ ಪಖಂಜೂರ್ ಮತ್ತು ಛೋಟೆಬೆಥಿಯಾ ಪ್ರದೇಶಗಳಲ್ಲಿ ಎನ್ಕೌಂಟರ್ಗಳು ನಡೆದಿವೆ ಎಂದು ಮಾಹಿತಿ ನೀಡಿದ್ದಾರೆ.
ಬಿಎಸ್ಎಫ್ನ ಜಂಟಿ ತಂಡ ಮತ್ತು ರಾಜ್ಯ ಪೊಲೀಸ್ನ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಮತ್ತು ನಕ್ಸಲೀಯರ ನಡುವಿನ ಘರ್ಷಣೆಯ ನಂತರ ಎಕೆ-47 ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಈ ಎನ್ಕೌಂಟರ್ನಲ್ಲಿ ಕೆಲವು ನಕ್ಸಲೀಯರು ಸಾವನ್ನಪ್ಪಿರಬಹುದು ಅಥವಾ ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿ ಹೇಳಿದ್ದಾರೆ.
ಬಿಜಾಪುರ ಜಿಲ್ಲೆಯ ಪಡೇದ ಗ್ರಾಮದ ಬಳಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಪಡೆಡಾ ಎನ್ಕೌಂಟರ್ನಲ್ಲಿ ಕನಿಷ್ಠ ಮೂವರು ನಕ್ಸಲೀಯರು ಸಾವನ್ನಪ್ಪಿದ್ದಾರೆ, ಮೃತದೇಹಗಳ ಜೊತೆ ನಕ್ಸಲೀಯರು ತಪ್ಪಿಸಿಕೊಂಡು ಹೋಗುವುದನ್ನು ಡ್ರೋನ್ ಕ್ಯಾಮೆರಾಗಳು ಸೆರೆ ಹಿಡಿದಿವೆ ಎಂದು ಹೇಳಿದ್ದಾರೆ.
ನಕ್ಸಲೀಯರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಾರಾಯಣಪುರ ಜಿಲ್ಲೆಯ ಗುಡಾಡಿ ಗ್ರಾಮದ ಬಳಿ ಮತ್ತು ದಾಂತೇವಾಡ ಜಿಲ್ಲೆಯ ಮಂಗ್ನಾರ್ ಗ್ರಾಮದ ಬಳಿ ಮತ್ತೊಂದು ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಗೆ ಯಾವುದೇ ಹಾನಿ ಸಂಭವಿಸಿಲ್ಲ.
90 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಎರಡು ಹಂತದ ಚುನಾವಣೆಯ ಮೊದಲ ಹಂತದಲ್ಲಿ ಮಂಗಳವಾರ 20 ಕ್ಷೇತ್ರಗಳಲ್ಲಿ ಮತದಾನ ನಡೆಯಿತು, ಅವುಗಳಲ್ಲಿ 12 ನಕ್ಸಲೈಟ್ ಪೀಡಿತ ಬಸ್ತಾರ್ ವಿಭಾಗದಲ್ಲಿದೆ. ನಕ್ಸಲೀಯರ ಹಿಂಸಾಚಾರ ಮತ್ತು ಬಹಿಷ್ಕಾರದ ಕರೆ ಮಧ್ಯೆ ಶೇ.71.48ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications