ನಿರ್ಭಯಾ ಅತ್ಯಾಚಾರಿಗಳ ಜೊತೆ ನೇಣಿಗೇರಲಿದ್ದಾರೆ 8 ಅಪರಾಧಿಗಳು
Recommended Video
ನವದೆಹಲಿ, ಡಿಸೆಂಬರ್ 12: ನಿರ್ಭಾಯಾ ಅತ್ಯಾಚಾರಿಗಳಿಗೆ ನೇಣು ಶಿಕ್ಷೆ ವಿಧಿಸಲು ದಿನಗಣನೆ ಶುರುವಾಗಿದ್ದು, ಡಿಸೆಂಬರ್ 16 ರಂದು ಅವರನ್ನು ನೇಣಿಗೆ ಏರಿಸಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿವೆ ಆದರೆ ಅಧಿಕೃತ ದಿನಾಂಕ ಹೊರಬಿದ್ದಿಲ್ಲ.
ನೇಣಿಗೇರಿಸಲು ನುರಿತ ಸಿಬ್ಬಂದಿ ಇಲ್ಲದ ಕಾರಣ ನಿರ್ಭಯಾ ಅತ್ಯಾಚರಿಗಳು ಇನ್ನೂ ಉಸಿರಾಡುತ್ತಿದ್ದಾರೆ. ಇವರು ಮಾತ್ರವಲ್ಲದೆ ಇವರೊಂದಿಗೆ ಇನ್ನೂ ಎಂಟು ಮಂದಿ ನೇಣು ಶಿಕ್ಷೆ ವಿಧಿಸಲ್ಪಟ್ಟವರು ಸಹ ನೇಣು ಶಿಕ್ಷೆಯ ಸರತಿಯಲ್ಲಿದ್ದಾರೆ.
ನಿರ್ಭಯಾ ಅತ್ಯಾಚಾರ ಆರೋಪಿಗಳಾದ ಪವನ್ ಗುಪ್ತಾ, ಅಕ್ಷಯ್ ಠಾಕೂರ್, ವಿನಯ್ ಶರ್ಮಾ, ಮುಖೇಶ್ ಸಿಂಗ್ ಅವರಿಗೆ ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಒಟ್ಟು ಆರ್ವರು ಅಪರಾಧಿಗಳಲ್ಲಿ ರಾಮ್ ಸಿಂಗ್ ಎಂಬಾತ ಜೈಲಿನಲ್ಲಿ ನೇಣು ಹಾಕಿಕೊಂಡು ಅಸುನೀಗಿದ್ದ. ಮತ್ತೊಬ್ಬನು ಅಪ್ತಾಪ್ತನಾಗಿದ್ದ ಕಾರಣ ಆತನನ್ನು ಪುನಶ್ಚೇತನ ಗೃಹಕ್ಕೆ ಕಳುಹಿಸಲಾಗಿದೆ.
ಅಪರಾಧಿಗಳೆಲ್ಲರೂ ತಿಹಾರ್ ಜೈಲಿನಲ್ಲಿದ್ದು, ಇಲ್ಲಿಯೇ ಇವರನ್ನು ಗಲ್ಲಿಗೇರಿಸಲಾಗುತ್ತದೆ. ತಿಹಾರ್ ಜೈಲಿನಲ್ಲಿರುವ ಜೈಲು ನಂಬರ್ 3, ಫಾಸಿ ಕೋತಾ ಎಂಬಲ್ಲಿ ಗಲ್ಲು ಶಿಕ್ಷೆ ಜಾರಿಯಾಗುತ್ತದೆ. ಇದೇ ಸ್ಥಳದಲ್ಲಿ ಅಫ್ಜಲ್ ಗುರು, ಮಕ್ಬೂಲ್ ಭಟ್ ಅನ್ನೂ ಗಲ್ಲಿಗೇರಿಸಲಾಗಿತ್ತು. ಅವರನ್ನು ಇಲ್ಲಿಯೇ ಮಣ್ಣು ಮಾಡಲಾಗಿದೆ.
ನಿರ್ಭಯಾ ಅಪರಾಧಿಗಳನ್ನು ಏಕಾಂತ ವಾಸದಲ್ಲಿ ಇಡಲಾಗಿಲ್ಲ. ಅವರ ಆರೋಗ್ಯ, ವರ್ತನೆಯ ಮೇಲೆ ನಿಗಾ ವಹಿಸಲಾಗಿದೆ. ಅವರು ಆರೋಗ್ಯದಿಂದಿದ್ದು, ವರ್ತನೆ ಸಹಜವಾಗಿದೆ ಎಂದು ತಿಹಾರ್ ಅಧಿಕಾರಿಗಳು ಹೇಳಿದ್ದಾರೆ.

ಅವಕಾಶ ಕೊಡುವಂತೆ ಪತ್ರ ಬರೆದಿದ್ದಾರೆ 12 ಮಂದಿ
ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ಸಹಾಯ ಮಾಡಲು 12 ಮಂದಿ ಮುಂದೆ ಬಂದಿದ್ದು, ತಿಹಾರ್ ಜೈಲಿನ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ವಿದೇಶದಿಂದಲೂ ಪತ್ರಗಳು ಬಂದಿವೆ. ಲಾಯರ್, ಚಾರ್ಟೆಡ್ ಅಕೌಂಟೆಂಟ್, ಕೆಲವು ಪೊಲೀಸರು ಪತ್ರ ಬರೆದಿರುವುದಾಗಿ ತಿಹಾರ್ ಜೈಲು ಅಧಿಕಾರಿಗಳು ಹೇಳಿದ್ದಾರೆ.

ನಮ್ಮ ಸಿಬ್ಬಂದಿಯೇ ಗಲ್ಲಿಗೇರಿಸುತ್ತಾರೆ
ಆದರೆ ಹೀಗೆ ಸ್ವಯಂಪ್ರೇರಿತರಾಗಿ ಮುಂದೆ ಬಂದಿರುವವರ ಸೇವೆಯನ್ನು ಬಳಸಿಕೊಳ್ಳುವುದಿಲ್ಲ ಎಂದಿರುವ ಅಧಿಕಾರಿಗಳು, ಅವಶ್ಯಕತೆ ಬಿದ್ದಲ್ಲಿ ನಮ್ಮ ಪೊಲೀಸ್ ಸಿಬ್ಬಂದಿಯೇ ಗಲ್ಲಿಗೇರಿಸುವ ಕಾರ್ಯ ಮಾಡುತ್ತಾರೆ. ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಹೀಗೆ ಮಾಡಲಾಗಿದೆ. ಅವಶ್ಯಕತೆ ಬಿದ್ದಲ್ಲಿ ಹೊರರಾಜ್ಯಗಳಿಂದ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗುವುದು ಎಂದಿದ್ದಾರೆ.

ಒಬ್ಬ ಮಾತ್ರ ಕ್ಷಮಾದಾನ ಅರ್ಜಿ ಹಾಕಿದ್ದಾನೆ
ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬ ಮಾತ್ರ ಕ್ಷಮಾದಾನಕ್ಕೆ ಅರ್ಜಿ ಹಾಕಿದ್ದ ಆತನಿಗೆ ಕ್ಷಮಾಧಾನ ನಿರಾಕರಿಸಲಾಗಿದೆ. ಇನ್ನುಳಿದ ಮೂವರು ಅರ್ಜಿ ಹಾಕಿಲ್ಲ. ಆದರೆ ಅವರಿಗೆ ತಿಹಾರ್ ಜೈಲು ಅಧಿಕಾರಿ ಜ್ಞಾಪನಾ ಪತ್ರ ರವಾನಿಸಿದ್ದು, ಕ್ಷಮಾ ಅರ್ಜಿ ಹಾಕುವ ಇಚ್ಛೆಯಿದ್ದರೆ ಹಾಕಬಹುದು ಇಲ್ಲವಾದರೆ ಗಲ್ಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸಲಿದ್ದಾನೆ ಅಪರಾಧಿ
ಆದರೆ ಈ ನಡುವೆ ಅಕ್ಷಯ್ ಠಾಕೂರ್ ಸುಪ್ರೀಂಕೋರ್ಟ್ ಗೆ ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸಲು ತಯಾರಾಗಿದ್ದು, ಅರ್ಜಿ ಇತ್ಯರ್ಥವಾಗುವ ವರೆಗೂ ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲ. ಈಗಾಗಲೇ ಮೂವರು ಅಪರಾಧಿಗಳು ಸಲ್ಲಿಸಿದ್ದ ಗಲ್ಲು ಶಿಕ್ಷೆ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.

2012 ಡಿಸೆಂಬರ್ 16 ರಂದು ನಡೆದಿತ್ತು ಘೋರ ಘಟನೆ
2012 ರ ಡಿಸೆಂಬರ್ 16 ರಂದು ಆರು ಮಂದಿ ಕಾಮುಕರು ಚಲಿಸುವ ಬಸ್ನಲ್ಲಿ ನಿರ್ಭಯಾಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಹಿಂಸಿಸಿ ಚಲಿಸುವ ಬಸ್ನಿಂದ ಕೆಳಕ್ಕೆ ದಬ್ಬಿದ್ದರು. ಜೀವನ್ಮರಣದ ನಡುವೆ ಹೋರಾಡಿ 16 ದಿನಗಳ ನಂತರ ಆಕೆ ಸಾವನ್ನಪ್ಪಿದ್ದರು.

ದೇಶದಾದ್ಯಂತ ಆಕ್ರೋಶ ಕೆರಳಿಸಿದ್ದ ಘಟನೆ
ಈ ಪ್ರಕರಣ ದೇಶದಾದ್ಯಂತ ಆಕ್ರೋಶ ಕೆರಳಿಸಿತ್ತು. ಆರ್ವರು ಅಪರಾಧಿಗಳನ್ನು ಕೆಲವೇ ದಿನಗಳಲ್ಲಿ ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಅಪರಾಧಿಗಳೆಂದು ತೀರ್ಪು ಸಹ ಬಂದು ನೇಣು ಶಿಕ್ಷೆ ಸಹ ವಿಧಿಸಲಾಗಿದೆ. ಆದರೆ ಅವರಿಗಿನ್ನೂ ನೇಣು ಹಾಕಲಾಗಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications