ಚುನಾವಣಾ ಆಯೋಗದಿಂದ ಎಐಎಡಿಎಂಕೆ ಹೆಸರು, ಚಿಹ್ನೆಗೆ ತಾತ್ಕಾಲಿಕ ತಡೆ
ಮುಂದಿನ ತಿಂಗಳ 12ರಂದು ಕೆ.ಆರ್.ನಗರದ ಉಪಚುನಾವಣೆಯಲ್ಲಿ ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ಅವರ ಬಣಕ್ಕೆ ಎಐಡಿಎಂಕೆ ಪಕ್ಷದ ಹೆಸರು ಹಾಗೂ ಚಿಹ್ನೆಯನ್ನು ಉಪಯೋಗಿಸದಿರುವಂತೆ ಚುನಾವಣಾ ಆಯೋಗ ತಾಕೀತು.
ನವದೆಹಲಿ, ಮಾರ್ಚ್ 22: ಕೇಂದ್ರ ಚುನಾವಣಾ ಆಯೋಗವು, ಎಐಎಡಿಎಂಕೆ ಹೆಸರು ಹಾಗೂ ಎರಡು ಎಲೆಗಳಿರುವ ಚಿಹ್ನೆಯ ಬಳಕೆಯ ಮೇಲೆ ಮಾರ್ಚ್ 22ರ ಮಧ್ಯರಾತ್ರಿ ತಾತ್ಕಾಲಿಕ ತಡೆ ಹೇರಿದೆ.
ಅಲ್ಲದೆ, ಪಕ್ಷದಲ್ಲಿ ಒಡಕಿಗೆ ಕಾರಣವಾಗಿರುವ ಪನ್ನೀರ್ ಸೆಲ್ವಂ ಹಾಗೂ ಶಶಿಕಲಾ - ಈ ಇಬ್ಬರಲ್ಲಿ ಯಾರೊಬ್ಬರಿಗೂ ಸದ್ಯದ ಮಟ್ಟಿಗೆ ಜಯಲಲಿತಾ ಅವರ ಉತ್ತರಾಧಿಕಾರಿಯೆಂದು ಘೋಷಿಸದಿರಲು ನಿರ್ಧರಿಸಿದೆ.

ಜಯಲಲಿತಾ ಅವರ ನಿಧನದ ನಂತರ, ಪಕ್ಷದಲ್ಲಿ ಪನ್ನೀರ್ ಸೆಲ್ವಂ ಬಣ ಹಾಗೂ ಶಶಿಕಲಾ ಅವರ ಬಣಗಳಾಗಿ ಇಬ್ಭಾಗವಾಗಿದೆ. ಏಪ್ರಿಲ್ 12ರಂದು ಜಯಲಲಿತಾ ಅವರ ನಿಧನದಿಂದ ತೆರವಾಗಿರುವ ಚೆನ್ನೈನ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.
ಇಲ್ಲಿ, ಶಶಿಕಲಾ ಬಣ ಹಾಗೂ ಪನ್ನೀರ್ ಸೆಲ್ವಂ ಬಣ ಪ್ರತ್ಯೇಕವಾಗಿ ತಂತಮ್ಮ ಕಡೆಯಿಂದ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಚುನಾವಣೆ ವೇಳೆ ಪಕ್ಷದ ಹೆಸರು ಹಾಗೂ ಎರಡು ಎಲೆಗಳಿರುವ ಚಿಹ್ನೆಯನ್ನು ತಮ್ಮ ಅಭ್ಯರ್ಥಿಗೇ ನೀಡಲು ಅನುಮತಿ ನೀಡಬೇಕೆಂದು ಎರಡೂ ಬಣಗಳು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದವು.
ಇದೀಗ ಚುನಾವಣಾ ಆಯೋಗವು, ಚಿಹ್ನೆಯನ್ನು ಎರಡೂ ಬಣದವರು ಉಪಯೋಗಿಸುವಂತಿಲ್ಲ ಎಂದು ಹೇಳಿರುವುದಲ್ಲದೆ, ಈ ಪ್ರಕರಣದ ಬಗ್ಗೆ ತಾತ್ಕಾಲಿಕ ಆದೇಶ ನೀಡಿ, ಎಐಎಡಿಎಂಕೆ ಪಕ್ಷದ ಹೆಸರು ಹಾಗೂ ಚಿಹ್ನೆಯ ಮೇಲೆ ತಾತ್ಕಾಲಿಕ ತಡೆ ಹೇರಿದೆ.
ಹಾಗಾಗಿ, ಉಪಚುನಾವಣೆಯಲ್ಲಿ ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ಬಣವು ಎಐಎಡಿಎಂಕೆ ಪಕ್ಷದ ಚಿಹ್ನೆ ಹಾಗೂ ಹೆಸರನ್ನು ಉಪಯೋಗಿಸುವಂತಿಲ್ಲದಂತಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications