ಪಂಚರಾಜ್ಯ ಚುನಾವಣೆಗಳಲ್ಲಿ ಅಕ್ರಮ: ಚುನಾವಣಾ ಆಯೋಗದಿಂದ ₹650 ಕೋಟಿಗೂ ಅಧಿಕ ಮೌಲ್ಯದ ವಸ್ತು ಜಪ್ತಿ
ಭಾರತೀಯ ಚುನಾವಣಾ ಆಯೋಗವು (ECI) ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ದೇಶಾದ್ಯಂತ ಭರ್ಜರಿ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಸೇರಿ ಪಂಚರಾಜ್ಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಮತದಾರರಿಗೆ ಹಂಚಲು ಸಂಗ್ರಹಿಸಿಡಲಾಗಿದ್ದ ಬರೋಬ್ಬರಿ ₹650 ಕೋಟಿಗೂ ಅಧಿಕ ಮೊತ್ತದ ಅಕ್ರಮ ನಗದು ಹಾಗೂ ವಿವಿಧ ವಸ್ತುಗಳನ್ನು ಅಧಿಕಾರಿಗಳು ಇದುವರೆಗೆ ವಶಪಡಿಸಿಕೊಂಡಿದ್ದಾರೆ.
2026ರ ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಅಕ್ರಮ ಚಟುವಟಿಕೆಗಳ ವಿರುದ್ಧ ಸಮರ ಸಾರಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಫೆಬ್ರವರಿ 26ರಿಂದ ಏಪ್ರಿಲ್ 5ರವರೆಗಿನ ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಬರೊಬ್ಬರಿ ₹651.51 ಕೋಟಿ ಮೌಲ್ಯದ ಅಕ್ರಮ ನಗದು, ಮದ್ಯ, ಮಾದಕ ದ್ರವ್ಯ ಹಾಗೂ ಉಚಿತ ಉಡುಗೊರೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಮೊದಲ ಸ್ಥಾನದಲ್ಲಿ ಪಶ್ಚಿಮ ಬಂಗಾಳ
ಈ ಬೃಹತ್ ಕಾರ್ಯಾಚರಣೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯವು ಮೊದಲ ಸ್ಥಾನದಲ್ಲಿದ್ದು, ಅಲ್ಲಿ ಅತಿ ಹೆಚ್ಚು ಅಂದರೆ ₹319 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಮಿಳುನಾಡಿನಲ್ಲಿ ₹170 ಕೋಟಿ, ಅಸ್ಸಾಂನಲ್ಲಿ ₹97 ಕೋಟಿ, ಕೇರಳದಲ್ಲಿ ₹58 ಕೋಟಿ ಹಾಗೂ ಪುದುಚೇರಿಯಲ್ಲಿ ₹7 ಕೋಟಿ ಮೌಲ್ಯದ ಅಕ್ರಮಗಳನ್ನು ಪತ್ತೆಹಚ್ಚಲಾಗಿದೆ. ಜಪ್ತಿಯಾದ ಒಟ್ಟು ಮೊತ್ತದಲ್ಲಿ ₹230 ಕೋಟಿ ಮೌಲ್ಯದ ಮಾದಕ ದ್ರವ್ಯಗಳು ಹಾಗೂ ₹231 ಕೋಟಿ ಮೌಲ್ಯದ ಉಚಿತ ಉಡುಗೊರೆಗಳು (Freebies) ಸೇರಿರುವುದು ಆತಂಕಕಾರಿ ವಿಷಯವಾಗಿದೆ. ಇದರೊಂದಿಗೆ ₹53.2 ಕೋಟಿ ನಗದು ಮತ್ತು ₹79.3 ಕೋಟಿ ಮೌಲ್ಯದ ಸುಮಾರು 29 ಲಕ್ಷ ಲೀಟರ್ ಮದ್ಯವನ್ನು ಸಹ ವಶಕ್ಕೆ ಪಡೆಯಲಾಗಿದೆ.
ಅಕ್ರಮ ತಡೆಗೆ ಮಾಸ್ಟರ್ಪ್ಲ್ಯಾನ್
ಚುನಾವಣಾ ಅಕ್ರಮಗಳನ್ನು ತಡೆಯಲು ಆಯೋಗವು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಬೃಹತ್ ಪಡೆಯನ್ನೇ ಅಖಾಡಕ್ಕಿಳಿಸಿದೆ. ದೇಶಾದ್ಯಂತ 5,173 ಫ್ಲೈಯಿಂಗ್ ಸ್ಕ್ವಾಡ್ಗಳನ್ನು ನಿಯೋಜಿಸಲಾಗಿದ್ದು, ಇವು ಯಾವುದೇ ದೂರು ಬಂದ ಕೇವಲ 100 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಳ್ಳುತ್ತಿವೆ. ಇದರ ಜೊತೆಗೆ 5,200ಕ್ಕೂ ಹೆಚ್ಚು ಸ್ಥಿರ ಕಣ್ಗಾವಲು ತಂಡಗಳು (SST) ವಿವಿಧೆಡೆ ನಾಕಾಬಂಧಿ ಹಾಕಿ ತಪಾಸಣೆ ನಡೆಸುತ್ತಿವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಸಾರ್ವಜನಿಕರು ಆಯೋಗದ 'ಸಿ-ವಿಜಿಲ್' (C-Vigil) ಆಪ್ ಮೂಲಕ ನೇರವಾಗಿ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
General Elections and bye-elections 2026: Seizures surpass Rs. 650 crores.
— Election Commission of India (@ECISVEEP) April 5, 2026
Read more : https://t.co/tkQBU8Y4wO pic.twitter.com/zGmHcXT1eU
ಇಷ್ಟೆಲ್ಲ ಕಟ್ಟುನಿಟ್ಟಿನ ತಪಾಸಣೆಗಳ ನಡುವೆಯೂ, ಸಾಮಾನ್ಯ ನಾಗರಿಕರಿಗೆ ಅಥವಾ ಪ್ರಯಾಣಿಕರಿಗೆ ಯಾವುದೇ ರೀತಿಯ ಕಿರುಕುಳ ನೀಡದಂತೆ ಆಯೋಗವು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತಪಾಸಣೆಯ ಸಮಯದಲ್ಲಿ ಉಂಟಾಗುವ ಕುಂದುಕೊರತೆಗಳನ್ನು ಆಲಿಸಲು ಜಿಲ್ಲಾ ಮಟ್ಟದ ಸಮಿತಿಗಳನ್ನು ಸಹ ರಚಿಸಲಾಗಿದೆ. ಮತದಾರರಿಗೆ ಆಮಿಷ ಒಡ್ಡುವ ಯಾವುದೇ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಆಯೋಗವು ಈ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications