Voter ID: ಮೂರು ತಿಂಗಳಿನಲ್ಲಿ ನಕಲಿ ಮತದಾರರ ಸಮಸ್ಯೆಗೆ ಮುಕ್ತಿ; ಚುನಾವಣಾ ಆಯೋಗ
ಮತದಾರರ ಪಟ್ಟಿಯ ಪ್ರಾಮಾಣಿಕತೆ ಬಗ್ಗೆ ವಿರೋಧ ಪಕ್ಷದ ನಾಯಕರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಚುನಾವಣಾ ಆಯೋಗ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಮುಂದಿನ ಮೂರು ತಿಂಗಳಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗಳ ಸಮಸ್ಯೆಯನ್ನು ಪರಿಹರಿಸುವುದಾಗಿ ತಿಳಿಸಿದೆ.
ಹಲವು ಜನ ಒಂದೇ ಚುನಾವಣಾ ಫೋಟೋ ಗುರುತಿನ ಚೀಟಿ (EPIC) ಸಂಖ್ಯೆಯನ್ನು ಹೊಂದಿರುವ ಸಾಧ್ಯತೆ ಇದೆ ಎನ್ನುವುದನ್ನು ಚುನಾವಣಾ ಆಯೋಗ ಒಪ್ಪಿಕೊಂಡಿತ್ತು. ಆದರೆ ವಿವಿಧ ರಾಜ್ಯಗಳು ಒಂದೇ ಸಂಖ್ಯಾಸರಣಿಯನ್ನು ಬಳಕೆ ಮಾಡಿರುವುದು ನಕಲು ಮತದಾರರನ್ನು ಸೂಚಿಸುವುದಿಲ್ಲ ಎಂದು ತಿಳಿಸಿತ್ತು. ಮತದಾರರ ಪಟ್ಟಿ ತಿದ್ದುಪಡಿಯಲ್ಲಿ ಚುನಾವಣಾ ಆಯೋಗ ಭಾಗಿಯಾಗಿದೆ ಎಂದು ಆರೋಪಿಸಿದ ಬಳಿಕ ಟಿಎಂಸಿ ಕಾಂಗ್ರೆಸ್, ಒಂದೇ ರಾಜ್ಯದಲ್ಲಿ ಹಲವು ಮತದಾರರು ಒಂದೇ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಬಳಸಿದ ಪ್ರಕರಣಗಳು ವರದಿಯಾಗಿವೆ ಎಂದು ಆರೋಪಿಸಿದೆ.

ಶುಕ್ರವಾರ ಪ್ರತಿಕ್ರಿಯೆ ನೀಡಿದ ಚುನಾವಣಾ ಸಮಿತಿ ಮುಂದಿನ ಮೂರು ತಿಂಗಳಲ್ಲಿ ನಕಲಿ ಎಪಿಕ್ (EPIC) ಸಂಖ್ಯೆಯನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಮತದಾರರಿಗೆ ವಿಶಿಷ್ಟ ರಾಷ್ಟ್ರೀಯ ಎಪಿಕ್ (EPIC) ಸಂಖ್ಯೆಯನ್ನು ನೀಡುವ ಮೂಲಕ ದೀರ್ಘಕಾಲದವರೆಗೆ ಬಾಕಿ ಇರುವ ಸಮಸ್ಯೆಯನ್ನು ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದೆ, ಈ ಹೊಸ ವ್ಯವಸ್ಥೆಯು ಮುಂದಿನ ಮತದಾರರಿಗೂ ಅನ್ವಯವಾಗಲಿದೆ ಎಂದು ತಿಳಿಸಿದೆ.
ಟೆಕ್ನಿಕಲ್ ತಂಡಗಳು ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಸಮಿತಿ ತಿಳಿಸಿದೆ. ಎಪಿಕ್ ಸಂಖ್ಯೆಯನ್ನು ಲೆಕ್ಕಿಸದೆ, ಒಂದು ನಿರ್ದಿಷ್ಟ ಮತಗಟ್ಟೆಯ ಮತದಾರರ ಪಟ್ಟಿಗೆ ಲಿಂಕ್ ಮಾಡಲಾದ ಮತದಾರರು ಆ ಮತಗಟ್ಟೆಯಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶ ಇರುತ್ತದೆ ಬೇರೆ ಕಡೆ ಮತಹಾಕಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.
2000 ನೇ ಇಸವಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಎಪಿಕ್ (EPIC) ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ಪ್ರಾದೇಶಿಕ ಚುನಾವಣಾ ಅಧಿಕಾರಿಗಳು ಸರಿಯಾದ ಸರಣಿಯನ್ನು ಬಳಸಲಿಲ್ಲ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸ್ವತಂತ್ರವಾಗಿ ಮತದಾರರ ಪಟ್ಟಿಯ ಅಂಕಿಅಂಶಗಳನ್ನು ನಿರ್ವಹಿಸುತ್ತಿದ್ದರಿಂದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ತಪ್ಪಾದ ಸರಣಿಗಳನ್ನು ಬಳಕೆ ಮಾಡಿದ್ದರಿಂದ ನಕಲಿ ಸಂಖ್ಯೆಗಳ ಸಮಸ್ಯೆಯನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ನಕಲಿ ಮತದಾರರನ್ನು ಬಳಸಿಕೊಂಡು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಚುನಾವಣಾ ಆಯೋಗದ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications