Voter ID: ಮೂರು ತಿಂಗಳಿನಲ್ಲಿ ನಕಲಿ ಮತದಾರರ ಸಮಸ್ಯೆಗೆ ಮುಕ್ತಿ; ಚುನಾವಣಾ ಆಯೋಗ
ಮತದಾರರ ಪಟ್ಟಿಯ ಪ್ರಾಮಾಣಿಕತೆ ಬಗ್ಗೆ ವಿರೋಧ ಪಕ್ಷದ ನಾಯಕರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಚುನಾವಣಾ ಆಯೋಗ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಮುಂದಿನ ಮೂರು ತಿಂಗಳಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗಳ ಸಮಸ್ಯೆಯನ್ನು ಪರಿಹರಿಸುವುದಾಗಿ ತಿಳಿಸಿದೆ.
ಹಲವು ಜನ ಒಂದೇ ಚುನಾವಣಾ ಫೋಟೋ ಗುರುತಿನ ಚೀಟಿ (EPIC) ಸಂಖ್ಯೆಯನ್ನು ಹೊಂದಿರುವ ಸಾಧ್ಯತೆ ಇದೆ ಎನ್ನುವುದನ್ನು ಚುನಾವಣಾ ಆಯೋಗ ಒಪ್ಪಿಕೊಂಡಿತ್ತು. ಆದರೆ ವಿವಿಧ ರಾಜ್ಯಗಳು ಒಂದೇ ಸಂಖ್ಯಾಸರಣಿಯನ್ನು ಬಳಕೆ ಮಾಡಿರುವುದು ನಕಲು ಮತದಾರರನ್ನು ಸೂಚಿಸುವುದಿಲ್ಲ ಎಂದು ತಿಳಿಸಿತ್ತು. ಮತದಾರರ ಪಟ್ಟಿ ತಿದ್ದುಪಡಿಯಲ್ಲಿ ಚುನಾವಣಾ ಆಯೋಗ ಭಾಗಿಯಾಗಿದೆ ಎಂದು ಆರೋಪಿಸಿದ ಬಳಿಕ ಟಿಎಂಸಿ ಕಾಂಗ್ರೆಸ್, ಒಂದೇ ರಾಜ್ಯದಲ್ಲಿ ಹಲವು ಮತದಾರರು ಒಂದೇ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಬಳಸಿದ ಪ್ರಕರಣಗಳು ವರದಿಯಾಗಿವೆ ಎಂದು ಆರೋಪಿಸಿದೆ.

ಶುಕ್ರವಾರ ಪ್ರತಿಕ್ರಿಯೆ ನೀಡಿದ ಚುನಾವಣಾ ಸಮಿತಿ ಮುಂದಿನ ಮೂರು ತಿಂಗಳಲ್ಲಿ ನಕಲಿ ಎಪಿಕ್ (EPIC) ಸಂಖ್ಯೆಯನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಮತದಾರರಿಗೆ ವಿಶಿಷ್ಟ ರಾಷ್ಟ್ರೀಯ ಎಪಿಕ್ (EPIC) ಸಂಖ್ಯೆಯನ್ನು ನೀಡುವ ಮೂಲಕ ದೀರ್ಘಕಾಲದವರೆಗೆ ಬಾಕಿ ಇರುವ ಸಮಸ್ಯೆಯನ್ನು ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದೆ, ಈ ಹೊಸ ವ್ಯವಸ್ಥೆಯು ಮುಂದಿನ ಮತದಾರರಿಗೂ ಅನ್ವಯವಾಗಲಿದೆ ಎಂದು ತಿಳಿಸಿದೆ.
ಟೆಕ್ನಿಕಲ್ ತಂಡಗಳು ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಸಮಿತಿ ತಿಳಿಸಿದೆ. ಎಪಿಕ್ ಸಂಖ್ಯೆಯನ್ನು ಲೆಕ್ಕಿಸದೆ, ಒಂದು ನಿರ್ದಿಷ್ಟ ಮತಗಟ್ಟೆಯ ಮತದಾರರ ಪಟ್ಟಿಗೆ ಲಿಂಕ್ ಮಾಡಲಾದ ಮತದಾರರು ಆ ಮತಗಟ್ಟೆಯಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶ ಇರುತ್ತದೆ ಬೇರೆ ಕಡೆ ಮತಹಾಕಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.
2000 ನೇ ಇಸವಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಎಪಿಕ್ (EPIC) ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ಪ್ರಾದೇಶಿಕ ಚುನಾವಣಾ ಅಧಿಕಾರಿಗಳು ಸರಿಯಾದ ಸರಣಿಯನ್ನು ಬಳಸಲಿಲ್ಲ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸ್ವತಂತ್ರವಾಗಿ ಮತದಾರರ ಪಟ್ಟಿಯ ಅಂಕಿಅಂಶಗಳನ್ನು ನಿರ್ವಹಿಸುತ್ತಿದ್ದರಿಂದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ತಪ್ಪಾದ ಸರಣಿಗಳನ್ನು ಬಳಕೆ ಮಾಡಿದ್ದರಿಂದ ನಕಲಿ ಸಂಖ್ಯೆಗಳ ಸಮಸ್ಯೆಯನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ನಕಲಿ ಮತದಾರರನ್ನು ಬಳಸಿಕೊಂಡು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಚುನಾವಣಾ ಆಯೋಗದ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications