ತೆಲಂಗಾಣ ಡಿಜಿ ಐಜಿಪಿ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ: ಕಾರಣವೇನು..?
ತೆಲಂಗಾಣ, ಡಿಸೆಂಬರ್ 03: ತೆಲಂಗಾಣ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಇಂದು ಹೊರಬಿದ್ದಿದೆ. ಮತ ಎಣಿಕೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಮತ ಎಣಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಆದರೆ ಪೂರ್ಣ ಪ್ರಮಾಣದ ಚುನಾವಣಾ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿದ್ದರು.

ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರೊಂದಿಗೆ ರೇವಂತ್ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಹೂ ಗುಚ್ಚ ನೀಡುವ ಮೂಲಕ ಶುಭಾಶಯ ಕೋರಿದರು. ಈ ಫೋಟೋ ಎಲ್ಲೆಡೆ ವೈರಲ್ ಆಗಿತ್ತು.
ಚುನಾವಣಾ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಚುನಾವಣಾ ಆಯೋಗ, ತಕ್ಷಣವೇ ಜಾರಿಗೆ ಬರುವಂತೆ ಡಿಜಿ ಮತ್ತು ಐಜಿಪಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
'ಚುನಾವಣೆಯ ಮತದಾನ ಹಾಗೂ ಮತ ಎಣಿಕೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ತನ್ನದೇ ಆದ ಕರ್ತವ್ಯವಿದೆ. ಹಿರಿಯ ಅಧಿಕಾರಿಗಳು ಮಾಡಿದಂತೆ ಇತರ ಪೊಲೀಸರು ತಮ್ಮ ಚುನಾವಣೆಯ ಕರ್ತವ್ಯ ಬಿಟ್ಟು ಶುಭ ಕೋರಲು ಹೋದರೆ. ಮುಂದೆ ಊಹಿಸಲಾದ ಪರಿಣಾಮಗಳು ನಡೆಯುತ್ತದೆ.
ಹೀಗಾಗಿ ಚುನಾವಣಾ ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ರೇವಂತ್ ರೆಡ್ಡಿ ಅವರನ್ನು ಭೇಟಿಯಾದ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರ ಬಳಿಯೂ ಸ್ಪಷ್ಟನೆ ಕೇಳಲಾಗಿದೆ. ಅಲ್ಲದೇ ರಾಜ್ಯದ ಮುಂದಿನ ಹಿರಿಯ ಅರ್ಹ ಪೊಲೀಸ್ ಅಧಿಕಾರಿಗೆ ತಕ್ಷಣವೇ ತೆಲಂಗಾಣ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ನೀಡಲಾಗುವುದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 65 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೆ, ಆಡಳಿತಾರೂಢ ಬಿಆರ್ಎಸ್ ಪಕ್ಷ 35 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಬಿಜೆಪಿ ಎಂಟು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಇತರೆ ಏಳು ಕ್ಷೇತ್ರದಲ್ಲಿ ಗೆಲುವು ಕಂಡಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications