ವೋಟರ್ ಐಡಿ-ಆಧಾರ್ ಲಿಂಕ್: ಮಾಹಿತಿ ಹಂಚಿಕೆ ಕಡ್ಡಾಯವೇ?
ನವದೆಹಲಿ, ಮಾರ್ಚ್ 20: ಕೇಂದ್ರ ಚುನಾವಣಾ ಆಯೋಗ ಮತದಾರರ ಗುರುತಿನ ಚೀಟಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ಕುರಿತು ತಾಂತ್ರಿಕ ಸಮಾಲೋಚನೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದೆ. ಇದಕ್ಕಾಗಿ ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ (ಯುಐಡಿಎಐ) ಜೊತೆ ಚುನಾವಣಾ ಆಯೋಗ ಕೆಲಸ ಮಾಡಲಿದೆ. ಆಧಾರ್ ಮಾಹಿತಿಯನ್ನು ಹಂಚಿಕೊಳ್ಳಲು ನಮೂನೆ 6ಬಿಗೆ ಕೇಂದ್ರ ಕಾನೂನು ಸಚಿವಾಲಯ ತಿದ್ದುಪಡಿಯನ್ನು ತರಲಿದೆ. ವ್ಯಕ್ತಿ ಆಧಾರ್ ಮಾಹಿತಿ ಹಂಚಿಕೊಳ್ಳುವುದು ಕಡ್ಡಾಯವೇ? ಎಂಬ ಪ್ರಶ್ನೆ ಈಗ ಹುಟ್ಟಿಕೊಂಡಿದೆ.
ಯುಐಡಿಎಐ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳ ನಡುವೆ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹಂಚಿಕೆ ಕುರಿತು ತಾಂತ್ರಿಕ ಸಮಾಲೋಚನೆಗಳು ನಡೆಯಲಿವೆ. ಗೃಹ ಸಚಿವಾಲಯ, ಕಾನೂನು ಇಲಾಖೆಯ ಕಾರ್ಯದರ್ಶಿಗಳು ಮತ್ತು ಯುಐಡಿಎಐ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸಭೆಯನ್ನು ನಡೆಸಿದ್ದಾರೆ.

ಎಪಿಕ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ಕೆಲವು ಕಾನೂನು ತಿದ್ದುಪಡಿಗಳು ಅಗತ್ಯವಿದೆ. ಭಾರತದ ಸಂವಿಧಾನದ ಆರ್ಟಿಕಲ್ 326ರ ಪ್ರಕಾರ, ಭಾರತದ ನಾಗರಿಕನಿಗೆ ಮಾತ್ರ ಮತದಾನದ ಹಕ್ಕುಗಳನ್ನು ನೀಡಬಹುದು ಆದರೆ ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಹೇಳುತ್ತದೆ. ಆದ್ದರಿಂದ ವ್ಯಕ್ತಿಯ ಆಧಾರ್ ಮಾಹಿತಿ ಹಂಚಿಕೊಳ್ಳಲು ಕೆಲವು ಕಾನೂನು ತಿದ್ದುಪಡಿಗಳ ಅಗತ್ಯವಿದೆ.
ಮಾಹಿತಿ ಹಂಚಿಕೆ ಕಡ್ಡಾಯವೇ?: ಆಧಾರ್ ಮತ್ತು ಎಪಿಕ್ ಕಾರ್ಡ್ ಜೋಡಣೆಗೆ ವ್ಯಕ್ತಿ ಆಧಾರ್ ಮಾಹಿತಿಯನ್ನು ಹಂಚಿಕೆ ಮಾಡಿಕೊಳ್ಳುವುದು ಕಡ್ಡಾಯವೇ? ಎಂಬ ಬಗ್ಗೆ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಕಾನೂನು ಸಚಿವಾಲಯವು ನಮೂನೆ 6B ಅನ್ನು ತಿದ್ದುಪಡಿ ಮಾಡಲಿದೆ. ಇದರಿಂದಾಗಿ ಆಧಾರ್ ವಿವರಗಳನ್ನು ನೀಡುವುದು ಸ್ವಯಂಪ್ರೇರಿತವಾಗಿ ಉಳಿಯಲಿದೆ. ಆದರೆ ವ್ಯಕ್ತಿ ಏಕೆ ಆಧಾರ್ ಮಾಹಿತಿಯನ್ನು ಹಂಚಿಕೊಳ್ಳಲು ನಿರಾಕರಿಸುತ್ತೇನೆ ಎಂದು ಕಾರಣಗಳನ್ನು ವಿವರಿಸಬೇಕಿದೆ.
ಮಂಗಳವಾರ ನಡೆದ ಚುನಾವಣಾ ಆಯೋಗ, ಗೃಹ ಸಚಿವಾಲಯ, ಕಾನೂನು ಸಚಿವಾಲಯ, ಐಟಿ ಸಚಿವಾಲಯ ಮತ್ತು ಯುಐಡಿಎಐ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆಗಳು ನಡೆದಿವೆ. ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಈ ವರ್ಷ ನಡೆದ ಮೊದಲ ಸಭೆ ಇದಾಗಿತ್ತು. ಮತದಾರರ ಪಟ್ಟಿಯಲ್ಲಿ ಲೋವಿದೆ ಎಂದು 'ಇಂಡಿಯಾ' ಮೈತ್ರಿಕೂಟ ಆರೋಪ ಮಾಡಿದ ಬಳಿಕ ನಡೆದ ಮೊದಲ ಸಭೆ ಇದಾಗಿತ್ತು.
ಸದ್ಯದ ಮಟ್ಟಿಗೆ ಮತದಾರರಿಗೆ ನಮೂನೆ 6 ಅತ್ಯಂತ ಪ್ರಮುಖವಾಗಿದೆ. ನಮೂನೆ 6ರನ್ನು ಹೊಸ ಮತದಾರರನ್ನು ನೋಂದಾಯಿಸಲು ಬಳಕೆ ಮಾಡಲಾಗುತ್ತದೆ. ನಮೂನೆ 6ರಲ್ಲಿ ಸದ್ಯ ಕೇವಲ ಎರಡು ಆಯ್ಕೆಗಳಿವೆ. ನಾನು ಆಧಾರ್ ನಂಬರ್ ನೀಡುತ್ತೇನೆ, ನಾನು ಆಧಾರ್ ಕಾರ್ಡ್ ಹೊಂದಿಲ್ಲದ ಕಾರಣ ಆಧಾರ್ ಸಂಖ್ಯೆ ನೀಡಲು ಸಾಧ್ಯವಿಲ್ಲ ಎಂಬ ಆಯ್ಕೆಗಳಿವೆ.
ಈಗ ಕೇಂದ್ರ ಕಾನೂನು ಸಚಿವಾಲಯ ಈ ನಿಯಮಗಳಲ್ಲಿ ತಿದ್ದುಪಡಿ ಮಾಡಲಿದೆ. ಕೆಲವು ನಿರ್ಬಂಧಿತ ಆಯ್ಕೆಗಳನ್ನು ತೆಗೆದು ಹಾಕಲಾಗುತ್ತದೆ. ಆದರೆ ಮತದಾರರು ತಮ್ಮ 12 ಅಂಕಿಯ ಆಧಾರ್ ನಂಬರ್ ಏಕೆ ನೀಡುವುದಿಲ್ಲ ಎಂದು ಕಾರಣವನ್ನು ಸಹ ವಿವರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೇಂದ್ರ ಚುನಾವಣಾ ಆಯೋಗವು 2023ರ ತನಕ 66 ಕೋಟಿ ಮತದಾರರ ಆಧಾರ್ ವಿವರಗಳನ್ನು ಸಂಗ್ರಹಿಸಿದೆ. ಅವರು ಸ್ವಯಂ ಪ್ರೇರಿತವಾಗಿ ಈ ಮಾಹಿತಿಯನ್ನು ಒದಗಿಸಿದ್ದಾರೆ. ಆದರೆ ಈ 66 ಕೋಟಿ ಮತದಾರರ ಎರಡು ಡೇಟಾಬೇಸ್ಗಳನ್ನು ಇನ್ನೂ ಸಹ ಜೋಡಣೆ ಮಾಡಿಲ್ಲ. ಆಧಾರ್ ಸಂಖ್ಯೆಯನ್ನು ಇನ್ನೂ ಸಹ ನಕಲಿ ದಾಖಲೆಗಳನ್ನು ತೆಗೆದುಹಾಕಲು ಅಥವಾ ಎರಡು ಕಡೆ ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಅದನ್ನು ರದ್ದು ಮಾಡುವ ಕಾರ್ಯಕ್ಕೆ ಬಳಕೆ ಮಾಡಿಲ್ಲ.
ದೇಶದಲ್ಲಿಯೇ ಮೊದಲ ಬಾರಿಗೆ ಈ ತಿದ್ದುಪಡಿಯನ್ನು ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮೊದಲು ಮಾಡುವ ನಿರೀಕ್ಷೆ ಇದೆ. ಈಗ ನಮೂನೆ 6ರ ನಿಯಮ ಬದಲಾವಣೆಯನ್ನು ಮಾಡಲಾಗುತ್ತದೆ. ಆಗ ಮತದಾರರು ತಮ್ಮ ಆಧಾರ್ ಸಂಖ್ಯೆ ನೀಡದೇ ಇರುವ ಕಾರಣವನ್ನು ವಿವರಿಸಬೇಕಾಗುತ್ತದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications